<p><strong>ನವದೆಹಲಿ</strong>: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭ ದೆಶದ ಗಮನ ಸೆಳೆದಿದ್ದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದ ಸಚಿವ ವಿಜಯ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p><p>ಶಾ ಹೇಳಿಕೆಯು ಪ್ರತ್ಯೇಕತಾವಾದಿ ಭಾವನೆಯನ್ನು ಹೇರುತ್ತದೆ ಮತ್ತು ದೇಶದ ಏಕತೆಗೆ ಬೆದರಿಕೆಯಾಗಿದೆ ಎಂದು ಕಾಂಗ್ರೆಸ್ ನಾಯಕಿ ಜಯಾ ಭಟ್ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.</p><p>'ಪಹಲ್ಗಾಮ್ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಸಹೋದರಿ ಎಂಬ ರೀತಿ ಕರ್ನಲ್ ಸೋಫಿಯಾ ಖುರೇಶಿ ಬಗ್ಗೆ ಸಚಿವರು ನೀಡಿದ ಹೇಳಿಕೆಯು ಮುಸ್ಲಿಂ ಸಮುದಾಯದವರ ಮೇಲೆ ಪ್ರತ್ಯೇಕತಾವಾದಿ ಭಾವನೆಯ ಹೇರಿಕೆಯಾಗಿದೆ. ಇದು ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ. ಸಚಿವರ ಆ ಭಾಷಣವು ಭಾರತದ ಸಂವಿಧಾನದ ಪರಿಚ್ಛೇದ 3ರ ಅಡಿಯಲ್ಲಿ ಬರುವ ಪ್ರಮಾಣವಚನ ನಿಯಮವನ್ನು ನೇರವಾಗಿ ಉಲ್ಲಂಘಿಸುತ್ತದೆ’ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p><p>ಇದೇವೇಳೆ, ಸುಪ್ರೀಂ ಕೋರ್ಟ್ನ ಆದೇಶದ ಅನುಸಾರ ಮಧ್ಯಪ್ರದೇಶ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಸ್ಥಿತಿ ವರದಿಯನ್ನು ನ್ಯಾಯಪೀಠ ಕೇಳಿದೆ.</p><p>ಮೇ 19ರಂದು ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಅವರ ವಿರುದ್ಧ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳ ತನಿಖೆಗೆ ಎಸ್ಐಟಿ ರಚಿಸಲು ಆದೇಶಿಸಿತ್ತು.</p><p>ಸೋಫಿಯಾ ಕುರಿತಂತೆ ಶಾ ನೀಡಿದ್ದ ಹೇಳಿಕೆ ವಿಡಿಯೊ ವ್ಯಾಪಕವಾಗಿ ಹರಿದಾಡಿತ್ತು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ವ್ಯಕ್ತವಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭ ದೆಶದ ಗಮನ ಸೆಳೆದಿದ್ದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದ ಸಚಿವ ವಿಜಯ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p><p>ಶಾ ಹೇಳಿಕೆಯು ಪ್ರತ್ಯೇಕತಾವಾದಿ ಭಾವನೆಯನ್ನು ಹೇರುತ್ತದೆ ಮತ್ತು ದೇಶದ ಏಕತೆಗೆ ಬೆದರಿಕೆಯಾಗಿದೆ ಎಂದು ಕಾಂಗ್ರೆಸ್ ನಾಯಕಿ ಜಯಾ ಭಟ್ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.</p><p>'ಪಹಲ್ಗಾಮ್ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಸಹೋದರಿ ಎಂಬ ರೀತಿ ಕರ್ನಲ್ ಸೋಫಿಯಾ ಖುರೇಶಿ ಬಗ್ಗೆ ಸಚಿವರು ನೀಡಿದ ಹೇಳಿಕೆಯು ಮುಸ್ಲಿಂ ಸಮುದಾಯದವರ ಮೇಲೆ ಪ್ರತ್ಯೇಕತಾವಾದಿ ಭಾವನೆಯ ಹೇರಿಕೆಯಾಗಿದೆ. ಇದು ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ. ಸಚಿವರ ಆ ಭಾಷಣವು ಭಾರತದ ಸಂವಿಧಾನದ ಪರಿಚ್ಛೇದ 3ರ ಅಡಿಯಲ್ಲಿ ಬರುವ ಪ್ರಮಾಣವಚನ ನಿಯಮವನ್ನು ನೇರವಾಗಿ ಉಲ್ಲಂಘಿಸುತ್ತದೆ’ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p><p>ಇದೇವೇಳೆ, ಸುಪ್ರೀಂ ಕೋರ್ಟ್ನ ಆದೇಶದ ಅನುಸಾರ ಮಧ್ಯಪ್ರದೇಶ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಸ್ಥಿತಿ ವರದಿಯನ್ನು ನ್ಯಾಯಪೀಠ ಕೇಳಿದೆ.</p><p>ಮೇ 19ರಂದು ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಅವರ ವಿರುದ್ಧ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳ ತನಿಖೆಗೆ ಎಸ್ಐಟಿ ರಚಿಸಲು ಆದೇಶಿಸಿತ್ತು.</p><p>ಸೋಫಿಯಾ ಕುರಿತಂತೆ ಶಾ ನೀಡಿದ್ದ ಹೇಳಿಕೆ ವಿಡಿಯೊ ವ್ಯಾಪಕವಾಗಿ ಹರಿದಾಡಿತ್ತು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ವ್ಯಕ್ತವಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>