<p><strong>ಕೊಚ್ಚಿ</strong>: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸಿಬಿಐ ತನಿಖೆ ಕೋರಿ ಕೇರಳ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯು ‘ಪಿತೂರಿ’ಯ ಭಾಗ ಎಂದು ಪಿಣರಾಯಿ ಪುತ್ರಿ ವೀಣಾ ಟಿ. ಹೇಳಿದ್ದಾರೆ. </p>.<p>ವಿವಾದಿತ ಗಣಿ ಕಂಪನಿ ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ಸ್ ಲಿಮಿಟೆಡ್ನಿಂದ (ಸಿಎಂಆರ್ಎಲ್) ವಿಜಯನ್ ಲಂಚ ಸ್ವೀಕರಿಸಿದ್ದಾರೆಂದು ಆರೋಪಿಸಿ, ಅವರ ವಿರುದ್ಧ ತನಿಖೆ ಕೋರಿ ಪತ್ರಕರ್ತ ಎಂ.ಆರ್.ಅಜಯನ್ ಅವರು ಈ ಅರ್ಜಿ ಸಲ್ಲಿಸಿದ್ದರು.</p>.<p>ವೀಣಾ ಅವರ ಬೆಂಗಳೂರು ಮೂಲದ ಐಟಿ ಸಂಸ್ಥೆ ಎಕ್ಸ್ಲಾಜಿಕ್ ಸಲ್ಯೂಷನ್ಗೆ ಸಿಎಂಆರ್ಎಲ್ ಹಣ ನೀಡಿದ್ದು, ಪುತ್ರಿಯ ಸಂಸ್ಥೆಯ ಮೂಲಕ ಆ ಹಣ ವಿಜಯನ್ ಅವರನ್ನು ತಲುಪಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.</p>.<p>ಈ ಅರ್ಜಿಗೆ ವೀಣಾ ಅವರು ಪ್ರತಿಕ್ರಿಯೆ ಸಲ್ಲಿಸಿದ್ದು, ‘ನನ್ನ ಸಂಸ್ಥೆಯ ವಹಿವಾಟುಗಳಿಗೂ, ನನ್ನ ತಂದೆಗೂ ಯಾವುದೇ ಸಂಬಂಧವಿಲ್ಲ. ಸಿಎಂಆರ್ಎಲ್ನಿಂದ ಲಂಚ ಸ್ವೀಕರಿಸಿರುವುದಕ್ಕೂ ಅದಕ್ಕೆ ಬದಲಿಗೆ ಆ ಸಂಸ್ಥೆಗೆ ಯಾವುದೇ ಸಹಾಯವನ್ನು ಮಾಡಿರುವುದಕ್ಕೂ ಯಾವುದೇ ಪುರಾವೆಗಳೂ ಇಲ್ಲ. ಆದಾಗ್ಯೂ, ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಪಿತೂರಿಯ ಭಾಗವಾಗಿ ಈ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ವಜಾಗೊಳಿಸಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸಿಬಿಐ ತನಿಖೆ ಕೋರಿ ಕೇರಳ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯು ‘ಪಿತೂರಿ’ಯ ಭಾಗ ಎಂದು ಪಿಣರಾಯಿ ಪುತ್ರಿ ವೀಣಾ ಟಿ. ಹೇಳಿದ್ದಾರೆ. </p>.<p>ವಿವಾದಿತ ಗಣಿ ಕಂಪನಿ ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ಸ್ ಲಿಮಿಟೆಡ್ನಿಂದ (ಸಿಎಂಆರ್ಎಲ್) ವಿಜಯನ್ ಲಂಚ ಸ್ವೀಕರಿಸಿದ್ದಾರೆಂದು ಆರೋಪಿಸಿ, ಅವರ ವಿರುದ್ಧ ತನಿಖೆ ಕೋರಿ ಪತ್ರಕರ್ತ ಎಂ.ಆರ್.ಅಜಯನ್ ಅವರು ಈ ಅರ್ಜಿ ಸಲ್ಲಿಸಿದ್ದರು.</p>.<p>ವೀಣಾ ಅವರ ಬೆಂಗಳೂರು ಮೂಲದ ಐಟಿ ಸಂಸ್ಥೆ ಎಕ್ಸ್ಲಾಜಿಕ್ ಸಲ್ಯೂಷನ್ಗೆ ಸಿಎಂಆರ್ಎಲ್ ಹಣ ನೀಡಿದ್ದು, ಪುತ್ರಿಯ ಸಂಸ್ಥೆಯ ಮೂಲಕ ಆ ಹಣ ವಿಜಯನ್ ಅವರನ್ನು ತಲುಪಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.</p>.<p>ಈ ಅರ್ಜಿಗೆ ವೀಣಾ ಅವರು ಪ್ರತಿಕ್ರಿಯೆ ಸಲ್ಲಿಸಿದ್ದು, ‘ನನ್ನ ಸಂಸ್ಥೆಯ ವಹಿವಾಟುಗಳಿಗೂ, ನನ್ನ ತಂದೆಗೂ ಯಾವುದೇ ಸಂಬಂಧವಿಲ್ಲ. ಸಿಎಂಆರ್ಎಲ್ನಿಂದ ಲಂಚ ಸ್ವೀಕರಿಸಿರುವುದಕ್ಕೂ ಅದಕ್ಕೆ ಬದಲಿಗೆ ಆ ಸಂಸ್ಥೆಗೆ ಯಾವುದೇ ಸಹಾಯವನ್ನು ಮಾಡಿರುವುದಕ್ಕೂ ಯಾವುದೇ ಪುರಾವೆಗಳೂ ಇಲ್ಲ. ಆದಾಗ್ಯೂ, ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಪಿತೂರಿಯ ಭಾಗವಾಗಿ ಈ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ವಜಾಗೊಳಿಸಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>