ವಿಶ್ವ ವೇದಿಕ್ ಸನಾತನ ಸಂಘದ ಪರವಾಗಿ ಸಂಘದ ಅಧ್ಯಕ್ಷ ಜಿತೇಂದ್ರ ಸಿಂಹ ಬಿಸೇನ ಅವರ ಪತ್ನಿ ಕಿರಣ್ ಸಿಂಗ್, ಸಂಘದ ಪ್ರಧಾನ ಕಾರ್ಯದರ್ಶಿ ಅವರು, ಈ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಶಿವಲಿಂಗ ಪತ್ತೆಯಾದ ಮಸೀದಿ ಆವರಣದೊಳಕ್ಕೆ ಮುಸ್ಲಿಮರ ಪ್ರವೇಶ ನಿರ್ಬಂಧಿಸಬೇಕು. ಜೊತೆಗೆ ಈ ಆವರಣವನ್ನು ತಮಗೆ ಬಿಟ್ಟುಕೊಟ್ಟು, ಶಿವಲಿಂಗಕ್ಕೆ ಪೂಜೆ-ಪುನಸ್ಕಾರ ಮತ್ತು ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.