ಶಾಹೀನ್ ಸಲ್ಲಿಸಿರುವ ಅರ್ಜಿಯಲ್ಲಿ, ‘ಹರಿಯಾಣದಲ್ಲಿ ದ್ವೇಷ ಭಾಷಣಗಳು, ಹಿಂಸಾಚಾರ ಮತ್ತು ಸ್ವತ್ತುಗಳ ಹಾನಿ ನಡೆಯದಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸರು ಎಚ್ಚರ ವಹಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 2ರಂದು ಹೊರಡಿಸಿದ್ದ ಆದೇಶದಲ್ಲಿ ಉಲ್ಲೇಖಿಸಿತ್ತು. ಆದೇಶದ ಹೊರತಾಗಿಯೂ ವಿವಿಧ ರಾಜ್ಯಗಳಲ್ಲಿ ನಡೆದ ಸುಮಾರು 27 ರ್ಯಾಲಿಗಳಲ್ಲಿ ದ್ವೇಷ ಭಾಷಣಗಳನ್ನು ಮಾಡಲಾಗಿದೆ’ ಎಂದು ಆರೋಪಿಸಿದ್ದಾರೆ. ಜೊತೆಗೆ, ಕೆಲ ವಿಡಿಯೊ ಲಿಂಕ್ಗಳನ್ನೂ ಅರ್ಜಿಯೊಂದಿಗೆ ನೀಡಿದ್ದಾರೆ.