<p><strong>ನವದೆಹಲಿ:</strong> ಸೆಪ್ಟೆಂಬರ್ 2 ರಂದು ನಡೆದ ‘ಸನಾತನ ಧರ್ಮ ನಿರ್ಮೂಲನಾ ಸಮಾವೇಶ’ದ ವಿರುದ್ದ ಸಿಬಿಐ ತನಿಖೆ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ ವಕೀಲರೊಬ್ಬರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. </p>.<p>ಉದಯನಿಧಿ, ಪೀಟರ್ ಅಲ್ಫೋನ್ಸ್, ಎ.ರಾಜಾ, ಥೋಲ್ ತಿರುಮಾವಲವನ್ ಮತ್ತು ಅವರ ಅನುಯಾಯಿಗಳು ಸನಾತನ ಧರ್ಮ ಅಥವಾ ಹಿಂದೂ ಧರ್ಮದ ಕುರಿತು ಯಾವುದೇ ದ್ವೇಷ ಭಾಷಣ ಮಾಡದಂತೆ ಮಧ್ಯಂತರ ತಡೆಯಾಜ್ಞೆ ಕೋರಿ ಬಿ.ಜಗನ್ನಾಥ್ ಅರ್ಜಿ ಸಲ್ಲಿಸಿದ್ದಾರೆ. </p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ತುರ್ತು ವಿಚಾರಣೆಗಾಗಿ ವಕೀಲರು ಈ ವಿಷಯವನ್ನು ಉಲ್ಲೇಖಿಸಿದ್ದಾರೆ.</p>.<p>ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ನ್ಯಾಯಪೀಠ, ಎಲ್ಲರೂ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಅನುಸರಿಸಬೇಕು ಎಂದು ಹೇಳಿದೆ. </p>.<p>ಸನಾತನ ಧರ್ಮದ ವಿರುದ್ಧ ಭಾಷಣ ಮಾಡಿದ ಉದಯನಿಧಿ ಮತ್ತು ಎ.ರಾಜಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ವಕೀಲ ವಿನೀತ್ ಜಿಂದಾಲ್ ಅವರು ನ್ಯಾಯಾಲಯದಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.</p>.<p>ಸನಾತನ ಧರ್ಮ ನಿರ್ಮೂಲನಾ ಸಮ್ಮೇಳನದಲ್ಲಿ ರಾಜ್ಯ ಸಚಿವರು ಭಾಗವಹಿಸುವುದು ಅಸಂವಿಧಾನಿಕ ಮತ್ತು ಸಂವಿಧಾನದ 25 ಮತ್ತು 26 ನೇ ವಿಧಿಗಳ ಉಲ್ಲಂಘನೆ ಎಂದು ಘೋಷಿಸುವಂತೆ ಜಗನ್ನಾಥ್ ತಮ್ಮ ಮನವಿಯಲ್ಲಿ ಕೋರಿದ್ದಾರೆ. </p>.<p>ಕರ್ನಾಟಕದ ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಎಲ್ಲಾ ಮಾಧ್ಯಮಿಕ ಶಾಲೆಗಳಲ್ಲಿ ಯಾವುದೇ ಹಿಂದೂ ಧರ್ಮದ ವಿರುದ್ಧ ಈ ಸಮ್ಮೇಳನಗಳು ನಡೆಯಬಾರದು ಎಂದು ತಮಿಳುನಾಡು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.</p>.<p>ಸಮ್ಮೇಳನಕ್ಕೆ ಪೊಲೀಸ್ ಅನುಮತಿ ಹೇಗೆ ನೀಡಲಾಯಿತು, ಸಮ್ಮೇಳನಕ್ಕೆ ಕಾರಣರಾದವರು ಮತ್ತು ಸಂಘಟನೆಯ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ತಕ್ಷಣ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.</p>.<p>ಸುಪ್ರೀಂ ಕೋರ್ಟ್ 2018ರ ತೀರ್ಪಿನ ಪ್ರಕಾರ ದ್ವೇಷ ಭಾಷಣಕ್ಕಾಗಿ ತಕ್ಷಣ ನೋಡಲ್ ಅಧಿಕಾರಿ ನೇಮಿಸುವಂತೆ ಗೃಹ ಕಾರ್ಯದರ್ಶಿ ಮತ್ತು ತಮಿಳುನಾಡು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸೆಪ್ಟೆಂಬರ್ 2 ರಂದು ನಡೆದ ‘ಸನಾತನ ಧರ್ಮ ನಿರ್ಮೂಲನಾ ಸಮಾವೇಶ’ದ ವಿರುದ್ದ ಸಿಬಿಐ ತನಿಖೆ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ ವಕೀಲರೊಬ್ಬರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. </p>.<p>ಉದಯನಿಧಿ, ಪೀಟರ್ ಅಲ್ಫೋನ್ಸ್, ಎ.ರಾಜಾ, ಥೋಲ್ ತಿರುಮಾವಲವನ್ ಮತ್ತು ಅವರ ಅನುಯಾಯಿಗಳು ಸನಾತನ ಧರ್ಮ ಅಥವಾ ಹಿಂದೂ ಧರ್ಮದ ಕುರಿತು ಯಾವುದೇ ದ್ವೇಷ ಭಾಷಣ ಮಾಡದಂತೆ ಮಧ್ಯಂತರ ತಡೆಯಾಜ್ಞೆ ಕೋರಿ ಬಿ.ಜಗನ್ನಾಥ್ ಅರ್ಜಿ ಸಲ್ಲಿಸಿದ್ದಾರೆ. </p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ತುರ್ತು ವಿಚಾರಣೆಗಾಗಿ ವಕೀಲರು ಈ ವಿಷಯವನ್ನು ಉಲ್ಲೇಖಿಸಿದ್ದಾರೆ.</p>.<p>ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ನ್ಯಾಯಪೀಠ, ಎಲ್ಲರೂ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಅನುಸರಿಸಬೇಕು ಎಂದು ಹೇಳಿದೆ. </p>.<p>ಸನಾತನ ಧರ್ಮದ ವಿರುದ್ಧ ಭಾಷಣ ಮಾಡಿದ ಉದಯನಿಧಿ ಮತ್ತು ಎ.ರಾಜಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ವಕೀಲ ವಿನೀತ್ ಜಿಂದಾಲ್ ಅವರು ನ್ಯಾಯಾಲಯದಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.</p>.<p>ಸನಾತನ ಧರ್ಮ ನಿರ್ಮೂಲನಾ ಸಮ್ಮೇಳನದಲ್ಲಿ ರಾಜ್ಯ ಸಚಿವರು ಭಾಗವಹಿಸುವುದು ಅಸಂವಿಧಾನಿಕ ಮತ್ತು ಸಂವಿಧಾನದ 25 ಮತ್ತು 26 ನೇ ವಿಧಿಗಳ ಉಲ್ಲಂಘನೆ ಎಂದು ಘೋಷಿಸುವಂತೆ ಜಗನ್ನಾಥ್ ತಮ್ಮ ಮನವಿಯಲ್ಲಿ ಕೋರಿದ್ದಾರೆ. </p>.<p>ಕರ್ನಾಟಕದ ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಎಲ್ಲಾ ಮಾಧ್ಯಮಿಕ ಶಾಲೆಗಳಲ್ಲಿ ಯಾವುದೇ ಹಿಂದೂ ಧರ್ಮದ ವಿರುದ್ಧ ಈ ಸಮ್ಮೇಳನಗಳು ನಡೆಯಬಾರದು ಎಂದು ತಮಿಳುನಾಡು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.</p>.<p>ಸಮ್ಮೇಳನಕ್ಕೆ ಪೊಲೀಸ್ ಅನುಮತಿ ಹೇಗೆ ನೀಡಲಾಯಿತು, ಸಮ್ಮೇಳನಕ್ಕೆ ಕಾರಣರಾದವರು ಮತ್ತು ಸಂಘಟನೆಯ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ತಕ್ಷಣ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.</p>.<p>ಸುಪ್ರೀಂ ಕೋರ್ಟ್ 2018ರ ತೀರ್ಪಿನ ಪ್ರಕಾರ ದ್ವೇಷ ಭಾಷಣಕ್ಕಾಗಿ ತಕ್ಷಣ ನೋಡಲ್ ಅಧಿಕಾರಿ ನೇಮಿಸುವಂತೆ ಗೃಹ ಕಾರ್ಯದರ್ಶಿ ಮತ್ತು ತಮಿಳುನಾಡು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>