<p><strong>ನವದೆಹಲಿ: </strong>ಕೋವಿಡ್–19ನ ಎರಡನೇ ಅಲೆ ವೇಳೆ ವೈದ್ಯಕೀಯ ಆಮ್ಲಜನಕ ಲಭ್ಯವಿರಲಿಲ್ಲ ಮತ್ತು ಪೂರೈಕೆ ಇರಲಿಲ್ಲ ಎಂಬ ಆರೋಪಗಳ ಕುರಿತು ಆಯೋಗವೊಂದರಿಂದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಬಿ.ವಿ.ನಾಗರತ್ನ ಅವರಿರುವ ನ್ಯಾಯಪೀಠವು ಸೋಮವಾರ (ಅ.4) ಈ ಅರ್ಜಿಯ ವಿಚಾರಣೆ ನಡೆಸಲಿದೆ. ದೆಹಲಿ ನಿವಾಸಿಯೊಬ್ಬರ ಪರವಾಗಿ ವಕೀಲ ರಾಜೀವ್ ಕುಮಾರ್ ದುಬೆ ಈ ಅರ್ಜಿ ಸಲ್ಲಿಸಿದ್ದಾರೆ.</p>.<p>ಕೋವಿಡ್ನ 2ನೇ ಅಲೆಯ ಮಾರ್ಚ್ ಹಾಗೂ ಏಪ್ರಿಲ್ ಅವಧಿಯಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ದೇಶದ ವಿವಿಧ ಭಾಗಗಳಲ್ಲಿ ಸಾಕಷ್ಟು ಜನ ರೋಗಿಗಳ ಸಾವಿಗೆ ಕಾರಣವಾಯಿತು ಎಂದು ಅರ್ಜಿಯಲ್ಲಿ ದೂರಲಾಗಿದೆ.</p>.<p>ಈ ವಿಷಯ ಕುರಿತು ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಇತರ ಸಂಸ್ಥೆಗಳಿಂದ ತನಿಖೆ ನಡೆಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.</p>.<p>ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿ ನೇತೃತ್ವದ ಆಯೋಗದಿಂದ ಈ ಕುರಿತು ತನಿಖೆ ನಡೆಸುವಂತೆಯೂ ಅರ್ಜಿದಾರರು ಕೋರಿದ್ದಾರೆ.</p>.<p>ಕೇಂದ್ರ ಸರ್ಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ವಿವಿಧ ರಾಜ್ಯಗಳ ಆರೋಗ್ಯ ಇಲಾಖೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್–19ನ ಎರಡನೇ ಅಲೆ ವೇಳೆ ವೈದ್ಯಕೀಯ ಆಮ್ಲಜನಕ ಲಭ್ಯವಿರಲಿಲ್ಲ ಮತ್ತು ಪೂರೈಕೆ ಇರಲಿಲ್ಲ ಎಂಬ ಆರೋಪಗಳ ಕುರಿತು ಆಯೋಗವೊಂದರಿಂದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಬಿ.ವಿ.ನಾಗರತ್ನ ಅವರಿರುವ ನ್ಯಾಯಪೀಠವು ಸೋಮವಾರ (ಅ.4) ಈ ಅರ್ಜಿಯ ವಿಚಾರಣೆ ನಡೆಸಲಿದೆ. ದೆಹಲಿ ನಿವಾಸಿಯೊಬ್ಬರ ಪರವಾಗಿ ವಕೀಲ ರಾಜೀವ್ ಕುಮಾರ್ ದುಬೆ ಈ ಅರ್ಜಿ ಸಲ್ಲಿಸಿದ್ದಾರೆ.</p>.<p>ಕೋವಿಡ್ನ 2ನೇ ಅಲೆಯ ಮಾರ್ಚ್ ಹಾಗೂ ಏಪ್ರಿಲ್ ಅವಧಿಯಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ದೇಶದ ವಿವಿಧ ಭಾಗಗಳಲ್ಲಿ ಸಾಕಷ್ಟು ಜನ ರೋಗಿಗಳ ಸಾವಿಗೆ ಕಾರಣವಾಯಿತು ಎಂದು ಅರ್ಜಿಯಲ್ಲಿ ದೂರಲಾಗಿದೆ.</p>.<p>ಈ ವಿಷಯ ಕುರಿತು ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಇತರ ಸಂಸ್ಥೆಗಳಿಂದ ತನಿಖೆ ನಡೆಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.</p>.<p>ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿ ನೇತೃತ್ವದ ಆಯೋಗದಿಂದ ಈ ಕುರಿತು ತನಿಖೆ ನಡೆಸುವಂತೆಯೂ ಅರ್ಜಿದಾರರು ಕೋರಿದ್ದಾರೆ.</p>.<p>ಕೇಂದ್ರ ಸರ್ಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ವಿವಿಧ ರಾಜ್ಯಗಳ ಆರೋಗ್ಯ ಇಲಾಖೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>