<p><strong>ನವದೆಹಲಿ</strong>: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಆ ಸ್ಥಳದಿಂದ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಪಿಐಎಲ್ನ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.</p>.<p>ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಬಳಿ, ಕೈ ಕತ್ತರಿಸಲಾಗಿದ್ದ ವ್ಯಕ್ತಿಯ ಶವವೊಂದು ಶುಕ್ರವಾರ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ಗೆ ಈ ಅರ್ಜಿ ಸಲ್ಲಿಸಲಾಗಿದೆ.</p>.<p>ಪ್ರತಿಭಟನಕಾರರನ್ನು ತೆರವುಗೊಳಿಸುವಂತೆ ಕೋರಿ ಸ್ವಾತಿ ಗೋಯೆಲ್ ಮತ್ತು ಸಂಜೀವ್ ನೆವಾರ್ ಎಂಬುವವರು ಕಳೆದ ಮಾರ್ಚ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿ ಅವರು ವಕೀಲ ಶಶಾಂಕ್ ಶೇಖರ್ ಝಾ ಮೂಲಕ ಸುಪ್ರೀಂ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.</p>.<p>ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಬಳಿ ಪೊಲೀಸರು ನಿರ್ಮಿಸಿದ್ದ ಕಬ್ಬಿಣದ ತಂತಿಗಳ ತಡೆಗೋಡೆಗೆ ಬಿಗಿದ ರೀತಿಯಲ್ಲಿ ಕೈ ತುಂಡರಿಸಿದ ಶವವೊಂದು ಶುಕ್ರವಾರ ಪತ್ತೆಯಾಗಿತ್ತು. ಮೃತ ವ್ಯಕ್ತಿಯನ್ನು ಪಂಜಾಬ್ನ ತರನ್ ತರನ್ ಜಿಲ್ಲೆಯ ಲಖ್ಬೀರ್ ಸಿಂಗ್(35) ಎಂದು ಗುರುತಿಸಲಾಗಿದೆ.</p>.<p>ಈ ಘಟನೆಯನ್ನು ಉಲ್ಲೇಖಿಸಿರುವ ಅರ್ಜಿದಾರರು, ‘ಬದುಕುವ ಹಕ್ಕಿಗಿಂತವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ದೊಡ್ಡದಲ್ಲ. ಈ ಪ್ರತಿಭಟನೆಗೆ ಅವಕಾಶ ನೀಡಿದರೆ ಇದರಿಂದ ರಾಷ್ಟ್ರಕ್ಕೆ ನಷ್ಟವಾಗುತ್ತದೆ‘ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಆ ಸ್ಥಳದಿಂದ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಪಿಐಎಲ್ನ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.</p>.<p>ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಬಳಿ, ಕೈ ಕತ್ತರಿಸಲಾಗಿದ್ದ ವ್ಯಕ್ತಿಯ ಶವವೊಂದು ಶುಕ್ರವಾರ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ಗೆ ಈ ಅರ್ಜಿ ಸಲ್ಲಿಸಲಾಗಿದೆ.</p>.<p>ಪ್ರತಿಭಟನಕಾರರನ್ನು ತೆರವುಗೊಳಿಸುವಂತೆ ಕೋರಿ ಸ್ವಾತಿ ಗೋಯೆಲ್ ಮತ್ತು ಸಂಜೀವ್ ನೆವಾರ್ ಎಂಬುವವರು ಕಳೆದ ಮಾರ್ಚ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿ ಅವರು ವಕೀಲ ಶಶಾಂಕ್ ಶೇಖರ್ ಝಾ ಮೂಲಕ ಸುಪ್ರೀಂ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.</p>.<p>ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಬಳಿ ಪೊಲೀಸರು ನಿರ್ಮಿಸಿದ್ದ ಕಬ್ಬಿಣದ ತಂತಿಗಳ ತಡೆಗೋಡೆಗೆ ಬಿಗಿದ ರೀತಿಯಲ್ಲಿ ಕೈ ತುಂಡರಿಸಿದ ಶವವೊಂದು ಶುಕ್ರವಾರ ಪತ್ತೆಯಾಗಿತ್ತು. ಮೃತ ವ್ಯಕ್ತಿಯನ್ನು ಪಂಜಾಬ್ನ ತರನ್ ತರನ್ ಜಿಲ್ಲೆಯ ಲಖ್ಬೀರ್ ಸಿಂಗ್(35) ಎಂದು ಗುರುತಿಸಲಾಗಿದೆ.</p>.<p>ಈ ಘಟನೆಯನ್ನು ಉಲ್ಲೇಖಿಸಿರುವ ಅರ್ಜಿದಾರರು, ‘ಬದುಕುವ ಹಕ್ಕಿಗಿಂತವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ದೊಡ್ಡದಲ್ಲ. ಈ ಪ್ರತಿಭಟನೆಗೆ ಅವಕಾಶ ನೀಡಿದರೆ ಇದರಿಂದ ರಾಷ್ಟ್ರಕ್ಕೆ ನಷ್ಟವಾಗುತ್ತದೆ‘ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>