ಇದೇ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಟಿಕಾಯತ್, ‘ಪ್ರೀತಿಯ ಜೋ ಬೈಡನ್ ಅವರೇ,ಪ್ರಧಾನಿ ಮೋದಿಯವರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ನಾವು ಭಾರತೀಯ ರೈತರು ಪ್ರತಿಭಟನೆ ನಡೆಸುತ್ತಿದ್ದೇವೆ.ಕಳೆದ 11 ತಿಂಗಳಲ್ಲಿ 700 ರೈತರು ಪ್ರತಿಭಟನೆಯಲ್ಲಿ ಸಾವನ್ನಪ್ಪಿದ್ದಾರೆ.ರೈತರನ್ನು ರಕ್ಷಿಸಬೇಕಿದ್ದರೆ ಈ ಕರಾಳ ಕಾನೂನುಗಳನ್ನು ರದ್ದುಗೊಳಿಸಬೇಕು. ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವಾಗ ದಯವಿಟ್ಟು ನಮ್ಮ ಆತಂಕಗಳ ಬಗ್ಗೆ ಗಮನಹರಿಸಿ,’ ಎಂದು ಟ್ವೀಟ್ ಮಾಡಿದ್ದಾರೆ.