ಸಂಪುಟದ ಶಿಫಾರಸಿನ ಮೇರೆ ಡಿಸೆಂಬರ್ 6ರಂದು ಮುಖ್ಯಮಂತ್ರಿ ಕಲ್ಯಾಣ್ಸಿಂಗ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಲಾಯಿತು. ವಾರ ನಂತರ, ಹಿಮಾಚಲಪ್ರದೇಶ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿದ್ದ ಬಿಜೆಪಿ ನೇತೃತ್ವದ ಸರ್ಕಾರಗಳನ್ನು ಸಹ ರಾಷ್ಟ್ರಪತಿಗಳು ವಜಾಗೊಳಿಸಿದರು ಎಂದೂ ಖುರ್ಷೀದ್ ಈ ಕೃತಿಯಲ್ಲಿ ವಿವರಿಸಿದ್ದಾರೆ.