<p><strong>ಅಯೋಧ್ಯೆ:</strong> ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.</p>.<p>ಶ್ರಾವಣ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಅಭಿಜಿನ್ ಮುಹೂರ್ತ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಭೂಮಿಪೂಜೆ ನೆರವೇರಿತು.</p>.<p>ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಇವುಗಳಿಗೆ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರು.</p>.<p>ಋತ್ವಿಜರಿಂದ ವೇದಮಂತ್ರ ಪಠಣ ಮತ್ತು ಭಕ್ತರಿಂದ ರಾಮಾಯಣ ಶ್ಲೋಕಗಳ ಪಠಣ ಸತತವಾಗಿ ನಡೆಯಿತು. ದೇಶದ ವಿವಿಧ ಭಾಗಗಳಲ್ಲಿ ಟಿವಿಗಳಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸುತ್ತಿದ್ದ ಜನರು ಕುಳಿತ ಸ್ಥಳದಿಂದಲೇ ’ಜೈಶ್ರೀರಾಮ್’ ಎಂದು ಜಯಕಾರ ಮೊಳಗಿಸಿದರು.</p>.<p>ಭೂಮಿಪೂಜೆಗೆ ಬಳಸುವ ಗುದ್ದಲಿಯನ್ನು ವಿಧಿಪೂರ್ವಕ ಪೂಜಿಸಲಾಯಿತು. ಈ ಸಂದರ್ಭ ಭಕ್ತರು ರಾಮರಕ್ಷಾಸ್ತೋತ್ರ ಪಠಿಸಿದರು. ಭೂಮಿಯನ್ನು ಲಕ್ಷ್ಮಿ (ಸಂಪತ್ತು) ಎಂದು ಗೌರವಿಸುವ ಶ್ರೀಸೂಕ್ತವನ್ನು ಋತ್ವಿಜರು ಪಠಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಮುಗಿದು ಕುಳಿತಿದ್ದರು.</p>.<p>ಭೂಮಿಯನ್ನು ಲಕ್ಷ್ಮಿ ಎಂದು ಗೌರವಿಸುವ ಶ್ರೀಸೂಕ್ತವನ್ನು ಸ್ವರಬದ್ಧವಾಗಿಋತ್ವಿಜರು ಪಠಿಸಿದರು. ಪ್ರಧಾನಿ ಭೂಮಿಗೆ ಆರತಿ ಮಾಡಿ, ನಮಸ್ಕರಿಸಿದರು. ಭೂಮಿಯಿಂದ ಮಣ್ಣು ತೆಗೆದು ಶಿರಕ್ಕೆ ಧರಿಸಿದರು. ಪಂಚಭೂತಗಳೂ ಮಂಗಳ ಉಂಟು ಮಾಡಲಿ ಎಂಬ ಪ್ರಾರ್ಥನೆಯೊಂದಿಗೆ ಋತ್ವಿಜರುಶಾಂತಿ ಮಂತ್ರ ಪಠಿಸಿದರು.</p>.<p>ಭೂಮಿಪೂಜೆಗೆ ನಿಗದಿಪಡಿಸಿದ್ದ ಸ್ಥಳದ ಪ್ರದಕ್ಷಿಣೆ ಮಾಡಿದರು. ‘ದೇಶದ ಸಮಸ್ತ ದೇಶಗಳ ಪ್ರತಿನಿಧಿಯಾಗಿ, ನರೇಂದ್ರ ಮೋದಿ ಹೆಸರಿನ ನಾನು ದೇಶದ ಪ್ರತಿನಿಧಿಯಾಗಿ ಭೂಮಿಪೂಜೆ ಮಾಡುತ್ತೇನೆ’ – ಮೋದಿ ಭೂಮಿಪೂಜೆಯಸಂಕಲ್ಪ ಮಾಡಿದರು.</p>.<p>’ಕಾಲಕ್ಕೆ ಸರಿಯಾಗಿ ಮಳೆ ಬರಲಿ, ಸಸ್ಯ ಸಂಪತ್ತು ವೃದ್ಧಿಯಾಗಲಿ...’ ಋತ್ವಿಜರು ಆಶೀರ್ವಾದ ಮಂತ್ರ ಪಠಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.</p>.<p>ಶ್ರಾವಣ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಅಭಿಜಿನ್ ಮುಹೂರ್ತ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಭೂಮಿಪೂಜೆ ನೆರವೇರಿತು.</p>.<p>ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಇವುಗಳಿಗೆ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರು.</p>.<p>ಋತ್ವಿಜರಿಂದ ವೇದಮಂತ್ರ ಪಠಣ ಮತ್ತು ಭಕ್ತರಿಂದ ರಾಮಾಯಣ ಶ್ಲೋಕಗಳ ಪಠಣ ಸತತವಾಗಿ ನಡೆಯಿತು. ದೇಶದ ವಿವಿಧ ಭಾಗಗಳಲ್ಲಿ ಟಿವಿಗಳಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸುತ್ತಿದ್ದ ಜನರು ಕುಳಿತ ಸ್ಥಳದಿಂದಲೇ ’ಜೈಶ್ರೀರಾಮ್’ ಎಂದು ಜಯಕಾರ ಮೊಳಗಿಸಿದರು.</p>.<p>ಭೂಮಿಪೂಜೆಗೆ ಬಳಸುವ ಗುದ್ದಲಿಯನ್ನು ವಿಧಿಪೂರ್ವಕ ಪೂಜಿಸಲಾಯಿತು. ಈ ಸಂದರ್ಭ ಭಕ್ತರು ರಾಮರಕ್ಷಾಸ್ತೋತ್ರ ಪಠಿಸಿದರು. ಭೂಮಿಯನ್ನು ಲಕ್ಷ್ಮಿ (ಸಂಪತ್ತು) ಎಂದು ಗೌರವಿಸುವ ಶ್ರೀಸೂಕ್ತವನ್ನು ಋತ್ವಿಜರು ಪಠಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಮುಗಿದು ಕುಳಿತಿದ್ದರು.</p>.<p>ಭೂಮಿಯನ್ನು ಲಕ್ಷ್ಮಿ ಎಂದು ಗೌರವಿಸುವ ಶ್ರೀಸೂಕ್ತವನ್ನು ಸ್ವರಬದ್ಧವಾಗಿಋತ್ವಿಜರು ಪಠಿಸಿದರು. ಪ್ರಧಾನಿ ಭೂಮಿಗೆ ಆರತಿ ಮಾಡಿ, ನಮಸ್ಕರಿಸಿದರು. ಭೂಮಿಯಿಂದ ಮಣ್ಣು ತೆಗೆದು ಶಿರಕ್ಕೆ ಧರಿಸಿದರು. ಪಂಚಭೂತಗಳೂ ಮಂಗಳ ಉಂಟು ಮಾಡಲಿ ಎಂಬ ಪ್ರಾರ್ಥನೆಯೊಂದಿಗೆ ಋತ್ವಿಜರುಶಾಂತಿ ಮಂತ್ರ ಪಠಿಸಿದರು.</p>.<p>ಭೂಮಿಪೂಜೆಗೆ ನಿಗದಿಪಡಿಸಿದ್ದ ಸ್ಥಳದ ಪ್ರದಕ್ಷಿಣೆ ಮಾಡಿದರು. ‘ದೇಶದ ಸಮಸ್ತ ದೇಶಗಳ ಪ್ರತಿನಿಧಿಯಾಗಿ, ನರೇಂದ್ರ ಮೋದಿ ಹೆಸರಿನ ನಾನು ದೇಶದ ಪ್ರತಿನಿಧಿಯಾಗಿ ಭೂಮಿಪೂಜೆ ಮಾಡುತ್ತೇನೆ’ – ಮೋದಿ ಭೂಮಿಪೂಜೆಯಸಂಕಲ್ಪ ಮಾಡಿದರು.</p>.<p>’ಕಾಲಕ್ಕೆ ಸರಿಯಾಗಿ ಮಳೆ ಬರಲಿ, ಸಸ್ಯ ಸಂಪತ್ತು ವೃದ್ಧಿಯಾಗಲಿ...’ ಋತ್ವಿಜರು ಆಶೀರ್ವಾದ ಮಂತ್ರ ಪಠಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>