<p>ಮುಂಬೈ (ಪಿಟಿಐ): ಕ್ರಿಮಿನಲ್ ಆರೋಪ ಹೊತ್ತ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಪರಿಶೀಲಿಸುತ್ತಿರುವಅಪರಾಜಿತಾ ಸಾರಂಗಿ ಸಾರಥ್ಯದ ಜಂಟಿ ಸದನ ಸಮಿತಿಯು (ಜೆಪಿಸಿ) ಮಹಾ ರಾಷ್ಟ್ರದಲ್ಲಿ ಸೋಮವಾರ ಅಭಿಪ್ರಾಯ ಸಂಗ್ರಹಿಸಿತು.</p>.<p>ಮಹಾರಾಷ್ಟ್ರ ಸರ್ಕಾರ ದೊಂದಿಗೆ ಚರ್ಚಿಸಿದ ಸಾರಂಗಿ ಅವರು, ‘ಪ್ರಸ್ತಾವಿತ ಶಾಸನವು ಭಾರತದ ಪ್ರಜಾಪ್ರಭುತ್ವದ ಚೌಕಟ್ಟನ್ನು ಬಲಪಡಿಸುವಲ್ಲಿ ಒಂದು ಮೈಲಿಗಲ್ಲು’ ಎಂದು ಹೇಳಿದರು.</p>.<p>ಸಂವಿಧಾನ (130ನೇ ತಿದ್ದುಪಡಿ) ಮಸೂದೆ– 2025, ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಐದು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಅವಧಿ ಜೈಲು ಶಿಕ್ಷೆಗೆ ಗುರಿಯಾಗುವ ಅಪರಾಧಕ್ಕೆ ಸಂಬಂಧಿಸಿದಂತೆ ಸತತ 30 ದಿನ ಬಂಧನದಲ್ಲಿದ್ದರೆ ಪದಚ್ಯುತಗೊಳ್ಳಲಿದ್ದಾರೆ.</p>.<p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಸಮಿತಿಗೆ ಮೂರು ಪ್ರಮುಖ ಸಲಹೆ ನೀಡಿದ್ದಾರೆ. ಅವನ್ನು ಪರಿಶೀಲಿಸಲಾಗುವುದು ಎಂದು ಸಾರಂಗಿ ತಿಳಿಸಿದರು.</p>.<p>ಮಹಾರಾಷ್ಟ್ರ ಸರ್ಕಾರ, ರಾಜಕೀಯ ಪಕ್ಷಗಳು, ಅಧಿಕಾರಿಗಳು, ಮಾನವ ಹಕ್ಕುಗಳ ಆಯೋಗ ಹಾಗೂ ವಿವಿಧ ಸಂಘಟನೆಗಳ ಜೊತೆ ಸಮಿತಿಯು ಮುಂಬೈನಲ್ಲಿ ಸಭೆ ನಡೆಸಿ ಚರ್ಚಿಸಿತು.</p>.<p>ಜೆಪಿಸಿ ಎಲ್ಲರಿಂದಲೂ ಸಲಹೆ ಆಲಿಸುತ್ತಿದೆ. ಇವನ್ನು ಕ್ರೋಡೀಕರಿಸಿ, ವಿಶ್ಲೇಷಣೆಗೊಳಪಡಿಸಿದ ನಂತರ ಸಮಗ್ರ ವರದಿಯೊಂದನ್ನು ಸಿದ್ಧಗೊಳಿಸಿ ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರಿಗೆ ಸಲ್ಲಿಸಲಿದೆ ಎಂದು ಅಪರಾಜಿತಾ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-51-1651063821</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ಕ್ರಿಮಿನಲ್ ಆರೋಪ ಹೊತ್ತ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಪರಿಶೀಲಿಸುತ್ತಿರುವಅಪರಾಜಿತಾ ಸಾರಂಗಿ ಸಾರಥ್ಯದ ಜಂಟಿ ಸದನ ಸಮಿತಿಯು (ಜೆಪಿಸಿ) ಮಹಾ ರಾಷ್ಟ್ರದಲ್ಲಿ ಸೋಮವಾರ ಅಭಿಪ್ರಾಯ ಸಂಗ್ರಹಿಸಿತು.</p>.<p>ಮಹಾರಾಷ್ಟ್ರ ಸರ್ಕಾರ ದೊಂದಿಗೆ ಚರ್ಚಿಸಿದ ಸಾರಂಗಿ ಅವರು, ‘ಪ್ರಸ್ತಾವಿತ ಶಾಸನವು ಭಾರತದ ಪ್ರಜಾಪ್ರಭುತ್ವದ ಚೌಕಟ್ಟನ್ನು ಬಲಪಡಿಸುವಲ್ಲಿ ಒಂದು ಮೈಲಿಗಲ್ಲು’ ಎಂದು ಹೇಳಿದರು.</p>.<p>ಸಂವಿಧಾನ (130ನೇ ತಿದ್ದುಪಡಿ) ಮಸೂದೆ– 2025, ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಐದು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಅವಧಿ ಜೈಲು ಶಿಕ್ಷೆಗೆ ಗುರಿಯಾಗುವ ಅಪರಾಧಕ್ಕೆ ಸಂಬಂಧಿಸಿದಂತೆ ಸತತ 30 ದಿನ ಬಂಧನದಲ್ಲಿದ್ದರೆ ಪದಚ್ಯುತಗೊಳ್ಳಲಿದ್ದಾರೆ.</p>.<p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಸಮಿತಿಗೆ ಮೂರು ಪ್ರಮುಖ ಸಲಹೆ ನೀಡಿದ್ದಾರೆ. ಅವನ್ನು ಪರಿಶೀಲಿಸಲಾಗುವುದು ಎಂದು ಸಾರಂಗಿ ತಿಳಿಸಿದರು.</p>.<p>ಮಹಾರಾಷ್ಟ್ರ ಸರ್ಕಾರ, ರಾಜಕೀಯ ಪಕ್ಷಗಳು, ಅಧಿಕಾರಿಗಳು, ಮಾನವ ಹಕ್ಕುಗಳ ಆಯೋಗ ಹಾಗೂ ವಿವಿಧ ಸಂಘಟನೆಗಳ ಜೊತೆ ಸಮಿತಿಯು ಮುಂಬೈನಲ್ಲಿ ಸಭೆ ನಡೆಸಿ ಚರ್ಚಿಸಿತು.</p>.<p>ಜೆಪಿಸಿ ಎಲ್ಲರಿಂದಲೂ ಸಲಹೆ ಆಲಿಸುತ್ತಿದೆ. ಇವನ್ನು ಕ್ರೋಡೀಕರಿಸಿ, ವಿಶ್ಲೇಷಣೆಗೊಳಪಡಿಸಿದ ನಂತರ ಸಮಗ್ರ ವರದಿಯೊಂದನ್ನು ಸಿದ್ಧಗೊಳಿಸಿ ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರಿಗೆ ಸಲ್ಲಿಸಲಿದೆ ಎಂದು ಅಪರಾಜಿತಾ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-51-1651063821</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>