<p><strong>ನವದೆಹಲಿ:</strong> ‘ರಾಜಕಾರಣದಲ್ಲಿ ನೈತಿಕತೆಯನ್ನು ತರುವ ಕೇಂದ್ರ ಸರ್ಕಾರದ ಪ್ರಯತ್ನವನ್ನು ಭ್ರಷ್ಟಾಚಾರಿಗಳ ಕೂಟವು’ ವಿರೋಧಿಸುತ್ತಿದೆ ಎಂದು ಬಿಜೆಪಿ ಸೋಮವಾರ ವಾಗ್ದಾಳಿ ನಡೆಸಿದೆ.</p>.<p>ಗಂಭೀರ ಆರೋಪದ ಮೇಲೆ ಸತತ 30 ದಿನ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಪದಚ್ಯುತಿಗೊಳಿಸುವ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ.</p>.<p>‘ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೈತಿಕತೆ, ಪಾರದರ್ಶಕ ರಾಜಕಾರಣ ಹಾಗೂ ಉತ್ತಮ ಆಡಳಿತಕ್ಕಾಗಿ ಮೂರು ಮಸೂದೆಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಇವು ರಾಜಕೀಯ ಅಪರಾಧ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರಮುಖ ಅಸ್ತ್ರಗಳಾಗಲಿವೆ’ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಕೇಂದ್ರದ ಈ ಮಸೂದೆಗಳನ್ನು ಇಡೀ ದೇಶವೇ ಸ್ವಾಗತಿಸಿದೆ. ಆದರೆ, ಭ್ರಷ್ಟಾಚಾರಿಗಳ ಕೂಟವು ಮಾತ್ರ ಸ್ವಜನಪಕ್ಷಪಾತಕ್ಕಾಗಿ, ತಮ್ಮ ಕುಟುಂಬದ ಹಿತಕ್ಕಾಗಿ ರಾಜಕೀಯದ ಆದರ್ಶ ತತ್ವಗಳನ್ನು ಗಾಳಿಗೆ ತೂರಿ ಟೀಕಿಸುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಸೂದೆಗಳ ವಿರುದ್ಧ ವಿರೋಧ ಪಕ್ಷಗಳು ಹೊಂದಿರುವ ನಿಲುವನ್ನು ಟೀಕಿಸಿದ ಪೂನವಾಲಾ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೆಸರಿನಲ್ಲಿ ‘ಭ್ರಷ್ಟಾಚಾರ’ವನ್ನು ರಕ್ಷಿಸಿ, ಪೋಷಿಸಲು ಒಟ್ಟಾಗಿದ್ದಾರೆ ಎಂದು ದೂರಿದರು.</p>.<p>‘ನೀವು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತಿಲ್ಲ. ನಿಮ್ಮ ಕುಟುಂಬವು ಮಾಡಿರುವ ಭ್ರಷ್ಟಾಚಾರವನ್ನು ರಕ್ಷಿಸಿಕೊಳ್ಳುತ್ತಿದ್ದೀರಿ’ ಎಂದು ಅವರು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರಾಜಕಾರಣದಲ್ಲಿ ನೈತಿಕತೆಯನ್ನು ತರುವ ಕೇಂದ್ರ ಸರ್ಕಾರದ ಪ್ರಯತ್ನವನ್ನು ಭ್ರಷ್ಟಾಚಾರಿಗಳ ಕೂಟವು’ ವಿರೋಧಿಸುತ್ತಿದೆ ಎಂದು ಬಿಜೆಪಿ ಸೋಮವಾರ ವಾಗ್ದಾಳಿ ನಡೆಸಿದೆ.</p>.<p>ಗಂಭೀರ ಆರೋಪದ ಮೇಲೆ ಸತತ 30 ದಿನ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಪದಚ್ಯುತಿಗೊಳಿಸುವ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ.</p>.<p>‘ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೈತಿಕತೆ, ಪಾರದರ್ಶಕ ರಾಜಕಾರಣ ಹಾಗೂ ಉತ್ತಮ ಆಡಳಿತಕ್ಕಾಗಿ ಮೂರು ಮಸೂದೆಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಇವು ರಾಜಕೀಯ ಅಪರಾಧ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರಮುಖ ಅಸ್ತ್ರಗಳಾಗಲಿವೆ’ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಕೇಂದ್ರದ ಈ ಮಸೂದೆಗಳನ್ನು ಇಡೀ ದೇಶವೇ ಸ್ವಾಗತಿಸಿದೆ. ಆದರೆ, ಭ್ರಷ್ಟಾಚಾರಿಗಳ ಕೂಟವು ಮಾತ್ರ ಸ್ವಜನಪಕ್ಷಪಾತಕ್ಕಾಗಿ, ತಮ್ಮ ಕುಟುಂಬದ ಹಿತಕ್ಕಾಗಿ ರಾಜಕೀಯದ ಆದರ್ಶ ತತ್ವಗಳನ್ನು ಗಾಳಿಗೆ ತೂರಿ ಟೀಕಿಸುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮಸೂದೆಗಳ ವಿರುದ್ಧ ವಿರೋಧ ಪಕ್ಷಗಳು ಹೊಂದಿರುವ ನಿಲುವನ್ನು ಟೀಕಿಸಿದ ಪೂನವಾಲಾ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೆಸರಿನಲ್ಲಿ ‘ಭ್ರಷ್ಟಾಚಾರ’ವನ್ನು ರಕ್ಷಿಸಿ, ಪೋಷಿಸಲು ಒಟ್ಟಾಗಿದ್ದಾರೆ ಎಂದು ದೂರಿದರು.</p>.<p>‘ನೀವು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತಿಲ್ಲ. ನಿಮ್ಮ ಕುಟುಂಬವು ಮಾಡಿರುವ ಭ್ರಷ್ಟಾಚಾರವನ್ನು ರಕ್ಷಿಸಿಕೊಳ್ಳುತ್ತಿದ್ದೀರಿ’ ಎಂದು ಅವರು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>