ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಭಾರಿ ಹಾನಿಯುಂಟುಮಾಡಿದ್ದ ಫೋನಿ ಚಂಡಮಾರುತಕ್ಕೆ ಕನಿಷ್ಠ 34 ಮಂದಿ ಬಲಿಯಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಕರಾವಳಿ ಪ್ರದೇಶದ 12 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿತ್ತು.ಒಡಿಶಾ, ಪಶ್ಚಿಮಬಂಗಾಳ ಮತ್ತು ಆಂಧ್ರಪ್ರದೇಶದಲ್ಲಿ ಚಂಡಮಾರುತದಿಂದ ಉಂಟಾಗಿರುವ ಹಾನಿಯ ಬಗ್ಗೆ ಅವಲೋಕನ ನಡೆಸಲು ಸಂಪುಟ ಕಾರ್ಯದರ್ಶಿ ಪಿ.ಕೆ. ಸಿನ್ಹಾ ನೇತೃತ್ವದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಮಿತಿ (ಎನ್ಸಿಎಂಸಿ) ಭಾನುವಾರ ಸಭೆ ನಡೆಸಿತ್ತು.