ಏನಿದು ಸಂದೇಶ್ಖಾಲಿ ಪ್ರಕರಣ:
ಸಂದೇಶ್ಖಾಲಿ ಪ್ರದೇಶದಲ್ಲಿ ಟಿಎಂಸಿ ನಾಯಕ ಶಹಜಹಾನ್ ಶೇಖ್ ಮತ್ತು ಆತನ ಬೆಂಬಲಿಗರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಗ್ರಾಮಸ್ಥರ ಭೂಮಿ ಕಬಳಿಸಿದ್ದಾರೆ ಎಂಬ ಆರೋಪಗಳಿವೆ. ಅವರ ಬಂಧನಕ್ಕೆ ಆಗ್ರಹಿಸಿ ನಡೆದಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ಈ ವಿವಾದವು ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿತ್ತು.
ಆರೋಪಿ ಬಂಧನ:
ಕಳೆದ 55 ದಿನಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಶಹಜಹಾನ್ ಶೇಖ್ನನ್ನು ಉತ್ತರ 24 ಪರಗಣ ಜಿಲ್ಲೆಯ ಮೀನಾಖಾನ್ ಠಾಣೆ ವ್ಯಾಪ್ತಿಯ ಬಾಮನ್ ಪುಕುರ್ ಎಂಬಲ್ಲಿನ ಮನೆಯೊಂದರಲ್ಲಿ ನಿನ್ನೆ(ಗುರುವಾರ) ಪೊಲೀಸರು ಬಂಧಿಸಿದ್ದಾರೆ.