<p><strong>ನವದೆಹಲಿ:</strong> ಪಿಎಂ–ಕಿಸಾನ್ ಯೋಜನೆಯಡಿ ಅರ್ಹತೆ ಇಲ್ಲದವರಿಗೆ ವಿತರಿಸಿದ್ದ ₹416 ಕೋಟಿ ಪ್ರೋತ್ಸಾಹಧನವನ್ನು ವಸೂಲಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವು, ಮಂಗಳವಾರ ಸಂಸತ್ಗೆ ತಿಳಿಸಿದೆ.</p><p>2019ರಲ್ಲಿ ಈ ಯೋಜನೆ ಜಾರಿಗೊಂಡಿದ್ದು, ಇಲ್ಲಿಯವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿಯನ್ನು ರೈತರಿಗೆ ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.</p><p>ವಾರ್ಷಿಕ ₹6 ಸಾವಿರ ಮೊತ್ತವನ್ನು ಮೂರು ಕಂತಿನಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತದೆ. ನಿಯಮಾವಳಿ ಪಾಲಿಸದವರಿಗೆ ಸೌಲಭ್ಯವನ್ನು ಸ್ಥಗಿತಗೊಳಿಸಲಾ ಗಿದೆ ಎಂದು ತಿಳಿಸಿದ್ದಾರೆ.</p><p>ಅರ್ಹರ ಭೂ ದಾಖಲೆ ಮತ್ತು ಆಧಾರ್ ನೋಂದಣಿಯನ್ನು ಕಡ್ಡಾಯಗೊಳಿಸಲಾಗಿದೆ. ಇ–ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಈ ನಿಯಮ ಪಾಲನೆ ಮಾಡದವರಿಗೆ ಹಣ ಜಮೆ ಮಾಡಿಲ್ಲ. ಈ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಾಕಿ ಮೊತ್ತವು ಅವರ ಖಾತೆಗಳಿಗೆ ಜಮೆಯಾಗಲಿದೆ ಎಂದು ವಿವರಿಸಿದ್ದಾರೆ.</p><p>ಆದಾಯ ತೆರಿಗೆ ಪಾವತಿದಾರರು, ಸಾರ್ವಜನಿಕ ವಲಯದ ಉದ್ದಿಮೆ, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರು, ಸಾಂವಿಧಾನಿಕ ಹುದ್ದೆ ಹೊಂದಿದವರು ಈ ಸೌಲಭ್ಯಕ್ಕೆ ಅರ್ಹರಲ್ಲ. ಅಂತಹವರಿಗೆ ಪಾವತಿಸಿರುವ ಹಣವನ್ನು ವಸೂಲಿ ಮಾಡುವ ಜವಾಬ್ದಾರಿಯನ್ನು ರಾಜ್ಯಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಿಎಂ–ಕಿಸಾನ್ ಯೋಜನೆಯಡಿ ಅರ್ಹತೆ ಇಲ್ಲದವರಿಗೆ ವಿತರಿಸಿದ್ದ ₹416 ಕೋಟಿ ಪ್ರೋತ್ಸಾಹಧನವನ್ನು ವಸೂಲಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವು, ಮಂಗಳವಾರ ಸಂಸತ್ಗೆ ತಿಳಿಸಿದೆ.</p><p>2019ರಲ್ಲಿ ಈ ಯೋಜನೆ ಜಾರಿಗೊಂಡಿದ್ದು, ಇಲ್ಲಿಯವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿಯನ್ನು ರೈತರಿಗೆ ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.</p><p>ವಾರ್ಷಿಕ ₹6 ಸಾವಿರ ಮೊತ್ತವನ್ನು ಮೂರು ಕಂತಿನಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತದೆ. ನಿಯಮಾವಳಿ ಪಾಲಿಸದವರಿಗೆ ಸೌಲಭ್ಯವನ್ನು ಸ್ಥಗಿತಗೊಳಿಸಲಾ ಗಿದೆ ಎಂದು ತಿಳಿಸಿದ್ದಾರೆ.</p><p>ಅರ್ಹರ ಭೂ ದಾಖಲೆ ಮತ್ತು ಆಧಾರ್ ನೋಂದಣಿಯನ್ನು ಕಡ್ಡಾಯಗೊಳಿಸಲಾಗಿದೆ. ಇ–ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಈ ನಿಯಮ ಪಾಲನೆ ಮಾಡದವರಿಗೆ ಹಣ ಜಮೆ ಮಾಡಿಲ್ಲ. ಈ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಾಕಿ ಮೊತ್ತವು ಅವರ ಖಾತೆಗಳಿಗೆ ಜಮೆಯಾಗಲಿದೆ ಎಂದು ವಿವರಿಸಿದ್ದಾರೆ.</p><p>ಆದಾಯ ತೆರಿಗೆ ಪಾವತಿದಾರರು, ಸಾರ್ವಜನಿಕ ವಲಯದ ಉದ್ದಿಮೆ, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರು, ಸಾಂವಿಧಾನಿಕ ಹುದ್ದೆ ಹೊಂದಿದವರು ಈ ಸೌಲಭ್ಯಕ್ಕೆ ಅರ್ಹರಲ್ಲ. ಅಂತಹವರಿಗೆ ಪಾವತಿಸಿರುವ ಹಣವನ್ನು ವಸೂಲಿ ಮಾಡುವ ಜವಾಬ್ದಾರಿಯನ್ನು ರಾಜ್ಯಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>