<p><strong>ಶಿಮ್ಲಾ/ಧರ್ಮಶಾಲಾ (ಪಿಟಿಐ):</strong> ಭಾರಿ ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿರುವ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಿದರು. ರಾಜ್ಯಕ್ಕೆ ತಕ್ಷಣಕ್ಕೆ ₹1,500 ಕೋಟಿ ಬಿಡುಗಡೆ ಮಾಡುವುದಾಗಿ ಅವರು ಘೋಷಣೆ ಮಾಡಿದರು.</p>.<p>ಜೂನ್ 20ರಿಂದ ಸೆಪ್ಟೆಂಬರ್ 8ರವರೆಗೆ ರಾಜ್ಯಕ್ಕೆ ಸುಮಾರು ₹4,122 ಕೋಟಿ ನಷ್ಟವಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಹೇಳಿದರು. ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಿ ಹಾನಿಯ ಮಾಹಿತಿ ಪಡೆದುಕೊಂಡರು.</p>.<p>ರಾಜ್ಯ ವಿಪತ್ತು ನಿರ್ವಹಣೆ ಪಡೆ ನಿಧಿಗೆ ಮತ್ತು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಗೆ ಕೇಂದ್ರ ಸರ್ಕಾರವು ನೀಡುವ ಹಣವನ್ನೇ ಮುಂಗಡವಾಗಿ (₹1,500 ಕೋಟಿ) ನೀಡಲಾಗುತ್ತಿದೆ. ಈ ನಿಧಿಗಳಿಗೆ ಎರಡನೇ ಕಂತಿನಲ್ಲಿ ಕೇಂದ್ರವು ಹಣ ಪಾವತಿ ಮಾಡಬೇಕಿತ್ತು.</p>.<p>ಮಳೆಹಾನಿ ಅಂದಾಜಿಸಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ಈಗಾಗಲೇ ಸಚಿವರ ತಂಡವನ್ನು ರಾಜ್ಯಕ್ಕೆ ಕಳುಹಿಸಿದೆ. ಈ ತಂಡದ ವರದಿ ಬಂದ ಬಳಿಕ, ಕೇಂದ್ರ ಸರ್ಕಾರವು ಮುಂದಿನ ಹಂತದ ಆರ್ಥಿಕ ನೆರವು ನೀಡಲಿದೆ ಎನ್ನಲಾಗುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟ ಕುಟುಂಬದವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.</p>.<p>‘ಶಿಕ್ಷಣ, ಕೃಷಿ ಸೇರಿದಂತೆ ರಾಜ್ಯದಲ್ಲಿ ಹಲವು ಕ್ಷೇತ್ರಗಳಿಗೆ ಭಾರಿ ನಷ್ಟವಾಗಿದೆ. ಜನರ ಜೀವನ ಸಹಜಸ್ಥಿತಿಗೆ ಮರಳುವಂತೆ ಮಾಡಬೇಕಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆಗಳ ಮರು ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ, ಶಾಲೆಗಳನ್ನು ಮತ್ತೊಮ್ಮೆ ನಿರ್ಮಾಣ ಮಾಡಬೇಕಿದೆ. ಈ ಎಲ್ಲದರ ಕುರಿತೂ ಬಹು ಆಯಾಮದ ಯೋಜನೆಗಳನ್ನು ರೂಪಿಸಬೇಕು’ ಎಂದು ಪ್ರಧಾನಿ ಮೋದಿ ಹೇಳಿದರು. </p>.<p>ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಇದ್ದರು.</p>.<div><blockquote>ರಾಜ್ಯಗಳಿಗೆ ವಿಪತ್ತು ನಿರ್ವಹಣೆಯ ಅಡಿ ನೀಡಲಾಗುವ ಸೌಲಭ್ಯವನ್ನು ಮುಂಚಿತವಾಗಿಯೇ ನೀಡುವ ಬಗ್ಗೆ ನಿಯಮಗಳನ್ನು ರೂಪಿಸಲಾಗುತ್ತಿದೆ</blockquote><span class="attribution">ನರೇಂದ್ರ ಮೋದಿ ಪ್ರಧಾನಿ</span></div>.<p><strong>ಪಂಜಾಬ್ಗೆ ₹1,600 ಕೋಟಿ ನೆರವು</strong></p><p>ಪ್ರವಾಹದಿಂದ ತೀವ್ರ ಹಾನಿಗೆ ಒಳಗಾಗಿರುವ ಪಂಜಾಬ್ಗೆ ಪ್ರಧಾನಿ ಮೋದಿ ಅವರು ₹1,600 ಕೋಟಿ ನೆರವು ಘೋಷಣೆ ಮಾಡಿದರು. ರಾಜ್ಯಕ್ಕೆ ಈಗಾಗಲೇ ₹12 ಸಾವಿರ ಕೋಟಿ ನೆರವನ್ನು ಕೇಂದ್ರ ಸರ್ಕಾರ ನೀಡಿದೆ. ರಾಜ್ಯಕ್ಕೆ ಸುಮಾರು ₹13 ಸಾವಿರ ಕೋಟಿ ನಷ್ಟವಾಗಿದೆ’ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ. ಮನೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ/ಧರ್ಮಶಾಲಾ (ಪಿಟಿಐ):</strong> ಭಾರಿ ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿರುವ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಿದರು. ರಾಜ್ಯಕ್ಕೆ ತಕ್ಷಣಕ್ಕೆ ₹1,500 ಕೋಟಿ ಬಿಡುಗಡೆ ಮಾಡುವುದಾಗಿ ಅವರು ಘೋಷಣೆ ಮಾಡಿದರು.</p>.<p>ಜೂನ್ 20ರಿಂದ ಸೆಪ್ಟೆಂಬರ್ 8ರವರೆಗೆ ರಾಜ್ಯಕ್ಕೆ ಸುಮಾರು ₹4,122 ಕೋಟಿ ನಷ್ಟವಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಹೇಳಿದರು. ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಿ ಹಾನಿಯ ಮಾಹಿತಿ ಪಡೆದುಕೊಂಡರು.</p>.<p>ರಾಜ್ಯ ವಿಪತ್ತು ನಿರ್ವಹಣೆ ಪಡೆ ನಿಧಿಗೆ ಮತ್ತು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಗೆ ಕೇಂದ್ರ ಸರ್ಕಾರವು ನೀಡುವ ಹಣವನ್ನೇ ಮುಂಗಡವಾಗಿ (₹1,500 ಕೋಟಿ) ನೀಡಲಾಗುತ್ತಿದೆ. ಈ ನಿಧಿಗಳಿಗೆ ಎರಡನೇ ಕಂತಿನಲ್ಲಿ ಕೇಂದ್ರವು ಹಣ ಪಾವತಿ ಮಾಡಬೇಕಿತ್ತು.</p>.<p>ಮಳೆಹಾನಿ ಅಂದಾಜಿಸಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ಈಗಾಗಲೇ ಸಚಿವರ ತಂಡವನ್ನು ರಾಜ್ಯಕ್ಕೆ ಕಳುಹಿಸಿದೆ. ಈ ತಂಡದ ವರದಿ ಬಂದ ಬಳಿಕ, ಕೇಂದ್ರ ಸರ್ಕಾರವು ಮುಂದಿನ ಹಂತದ ಆರ್ಥಿಕ ನೆರವು ನೀಡಲಿದೆ ಎನ್ನಲಾಗುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟ ಕುಟುಂಬದವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.</p>.<p>‘ಶಿಕ್ಷಣ, ಕೃಷಿ ಸೇರಿದಂತೆ ರಾಜ್ಯದಲ್ಲಿ ಹಲವು ಕ್ಷೇತ್ರಗಳಿಗೆ ಭಾರಿ ನಷ್ಟವಾಗಿದೆ. ಜನರ ಜೀವನ ಸಹಜಸ್ಥಿತಿಗೆ ಮರಳುವಂತೆ ಮಾಡಬೇಕಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆಗಳ ಮರು ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ, ಶಾಲೆಗಳನ್ನು ಮತ್ತೊಮ್ಮೆ ನಿರ್ಮಾಣ ಮಾಡಬೇಕಿದೆ. ಈ ಎಲ್ಲದರ ಕುರಿತೂ ಬಹು ಆಯಾಮದ ಯೋಜನೆಗಳನ್ನು ರೂಪಿಸಬೇಕು’ ಎಂದು ಪ್ರಧಾನಿ ಮೋದಿ ಹೇಳಿದರು. </p>.<p>ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಇದ್ದರು.</p>.<div><blockquote>ರಾಜ್ಯಗಳಿಗೆ ವಿಪತ್ತು ನಿರ್ವಹಣೆಯ ಅಡಿ ನೀಡಲಾಗುವ ಸೌಲಭ್ಯವನ್ನು ಮುಂಚಿತವಾಗಿಯೇ ನೀಡುವ ಬಗ್ಗೆ ನಿಯಮಗಳನ್ನು ರೂಪಿಸಲಾಗುತ್ತಿದೆ</blockquote><span class="attribution">ನರೇಂದ್ರ ಮೋದಿ ಪ್ರಧಾನಿ</span></div>.<p><strong>ಪಂಜಾಬ್ಗೆ ₹1,600 ಕೋಟಿ ನೆರವು</strong></p><p>ಪ್ರವಾಹದಿಂದ ತೀವ್ರ ಹಾನಿಗೆ ಒಳಗಾಗಿರುವ ಪಂಜಾಬ್ಗೆ ಪ್ರಧಾನಿ ಮೋದಿ ಅವರು ₹1,600 ಕೋಟಿ ನೆರವು ಘೋಷಣೆ ಮಾಡಿದರು. ರಾಜ್ಯಕ್ಕೆ ಈಗಾಗಲೇ ₹12 ಸಾವಿರ ಕೋಟಿ ನೆರವನ್ನು ಕೇಂದ್ರ ಸರ್ಕಾರ ನೀಡಿದೆ. ರಾಜ್ಯಕ್ಕೆ ಸುಮಾರು ₹13 ಸಾವಿರ ಕೋಟಿ ನಷ್ಟವಾಗಿದೆ’ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ. ಮನೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>