<p><strong>ಕೋಲ್ಕತ್ತ</strong>: ‘ಅಧಿಕಾರಕ್ಕಾಗಿ ಒಳನುಸುಳುವಿಕೆಗೆ ಉತ್ತೇಜನ ನೀಡುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದರು.</p>.<p>‘ಪಶ್ಚಿಮ ಬಂಗಾಳದ ಜನಸಂಖ್ಯೆಯನ್ನು ಬದಲಾಯಿಸುತ್ತಿರುವ ಒಳನುಸುಳುಕೋರರ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬೃಹತ್ ಅಭಿಯಾನ ಆರಂಭಿಸಿದೆ’ ಎಂದು ಉತ್ತರ 24 ಪರಗಣ ಜಿಲ್ಲೆಯ ದಮ್ ದಮ್ ಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ಅವರು ಹೇಳಿದರು.</p>.<p>‘ದೇಶವು ಇನ್ನು ಮುಂದೆ ಒಳನುಸುಳುಕೋರರನ್ನು ಸಹಿಸುವುದಿಲ್ಲ. ಅವರು ಇಲ್ಲಿಯೇ ಉಳಿಯಲು ಅನುಮತಿಸುವುದಿಲ್ಲ. ಆದರೆ, ಟಿಎಂಸಿ ಮತ್ತು ಕಾಂಗ್ರೆಸ್ ಸೇರಿದಂತೆ ಕೆಲವು ರಾಜಕೀಯ ಪಕ್ಷಗಳು ಈ ವಿಷಯದಲ್ಲಿ ತುಷ್ಟೀಕರಣದ ರಾಜಕಾರಣ ನಡೆಸಿವೆ’ ಎಂದು ದೂರಿದರು.</p>.<p>‘ಒಳನುಸುಳುಕೋರರು ಬಂಗಾಳ ಮತ್ತು ದೇಶವನ್ನು ತೊರೆದಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರೆ, ಟಿಎಂಸಿ ನೇತೃತ್ವದ ಸರ್ಕಾರವು ಅಧಿಕಾರದಿಂದ ಕೆಳಗಿಳಿಯಬೇಕಿದೆ. ನಿಮ್ಮ ಮತ ಮಾತ್ರ ಈ ನುಸುಳುಕೋರರನ್ನು ದೇಶದಿಂದ ಹೊರಹಾಕುವುದನ್ನು ಖಚಿತಪಡಿಸುತ್ತದೆ’ ಎಂದು ಪ್ರಧಾನಿ ಹೇಳಿದರು.</p>.<p>‘ಒಳನುಸುಳುಕೋರರು ಆರ್ಥಿಕತೆಯ ಮೇಲೆ ಒತ್ತಡ ಹೇರುತ್ತಿದ್ದಾರೆ. ನಮ್ಮ ಸಹೋದರಿಯರು ಹಾಗೂ ತಾಯಂದಿರನ್ನು ಹಿಂಸಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಗಡಿ ರಾಜ್ಯವು ದುರ್ಬಲವಾಗಿದೆ. ಬಂಗಾಳದ ಅಭಿವೃದ್ಧಿಗಾಗಿ ಬಿಜೆಪಿಯು ಮುಂದಾದರೆ, ಟಿಎಂಸಿಯು ಅಡ್ಡಿಪಡಿಸುತ್ತಿದೆ’ ಎಂದು ಅವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ಅಧಿಕಾರಕ್ಕಾಗಿ ಒಳನುಸುಳುವಿಕೆಗೆ ಉತ್ತೇಜನ ನೀಡುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದರು.</p>.<p>‘ಪಶ್ಚಿಮ ಬಂಗಾಳದ ಜನಸಂಖ್ಯೆಯನ್ನು ಬದಲಾಯಿಸುತ್ತಿರುವ ಒಳನುಸುಳುಕೋರರ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬೃಹತ್ ಅಭಿಯಾನ ಆರಂಭಿಸಿದೆ’ ಎಂದು ಉತ್ತರ 24 ಪರಗಣ ಜಿಲ್ಲೆಯ ದಮ್ ದಮ್ ಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ಅವರು ಹೇಳಿದರು.</p>.<p>‘ದೇಶವು ಇನ್ನು ಮುಂದೆ ಒಳನುಸುಳುಕೋರರನ್ನು ಸಹಿಸುವುದಿಲ್ಲ. ಅವರು ಇಲ್ಲಿಯೇ ಉಳಿಯಲು ಅನುಮತಿಸುವುದಿಲ್ಲ. ಆದರೆ, ಟಿಎಂಸಿ ಮತ್ತು ಕಾಂಗ್ರೆಸ್ ಸೇರಿದಂತೆ ಕೆಲವು ರಾಜಕೀಯ ಪಕ್ಷಗಳು ಈ ವಿಷಯದಲ್ಲಿ ತುಷ್ಟೀಕರಣದ ರಾಜಕಾರಣ ನಡೆಸಿವೆ’ ಎಂದು ದೂರಿದರು.</p>.<p>‘ಒಳನುಸುಳುಕೋರರು ಬಂಗಾಳ ಮತ್ತು ದೇಶವನ್ನು ತೊರೆದಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರೆ, ಟಿಎಂಸಿ ನೇತೃತ್ವದ ಸರ್ಕಾರವು ಅಧಿಕಾರದಿಂದ ಕೆಳಗಿಳಿಯಬೇಕಿದೆ. ನಿಮ್ಮ ಮತ ಮಾತ್ರ ಈ ನುಸುಳುಕೋರರನ್ನು ದೇಶದಿಂದ ಹೊರಹಾಕುವುದನ್ನು ಖಚಿತಪಡಿಸುತ್ತದೆ’ ಎಂದು ಪ್ರಧಾನಿ ಹೇಳಿದರು.</p>.<p>‘ಒಳನುಸುಳುಕೋರರು ಆರ್ಥಿಕತೆಯ ಮೇಲೆ ಒತ್ತಡ ಹೇರುತ್ತಿದ್ದಾರೆ. ನಮ್ಮ ಸಹೋದರಿಯರು ಹಾಗೂ ತಾಯಂದಿರನ್ನು ಹಿಂಸಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಗಡಿ ರಾಜ್ಯವು ದುರ್ಬಲವಾಗಿದೆ. ಬಂಗಾಳದ ಅಭಿವೃದ್ಧಿಗಾಗಿ ಬಿಜೆಪಿಯು ಮುಂದಾದರೆ, ಟಿಎಂಸಿಯು ಅಡ್ಡಿಪಡಿಸುತ್ತಿದೆ’ ಎಂದು ಅವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>