<p><strong>ಮದುರೈ</strong>: ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರವು ಬಡವರು, ಯುವಜನರು, ರೈತರಿಂದ ಕಸಿಯುತ್ತಿದೆ. ಇಂಥ ಭ್ರಷ್ಟ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದರು.</p>.<p>ಎನ್ಡಿಎ ರ್ಯಾಲಿ ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಎನ್ಡಿಎಯನ್ನು ಅಧಿಕಾರಕ್ಕೆ ತರಲು ಜನರು ನಿರ್ಧರಿಸಿದ್ದಾರೆ. ದಕ್ಷ ಮತ್ತು ಪ್ರಮಾಣಿಕ ಸರ್ಕಾರ ಸ್ಥಾಪಿಸುವುದಾಗಿ ನಾನು ಭರವಸೆ ನೀಡುತ್ತೇನೆ’ ಎಂದು ಹೇಳಿದರು.</p>.<p> ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ‘ಈ ಹಿಂದೆ ಕಾಂಗ್ರೆಸ್–ಡಿಎಂಕೆ ನೇತೃತ್ವದ ಮೈತ್ರಿ ಸರ್ಕಾರವು ‘ಜಲ್ಲಿಕಟ್ಟು’ ನಿಷೇಧಿಸಿತ್ತು. ಬಿಜೆಪಿ ಸರ್ಕಾರವು ಆ ನಿಷೇಧವನ್ನು ತೆರವುಗೊಳಿಸಿತು. ಸಂಸತ್ತಿನಲ್ಲಿ ‘ಸೆಂಗೋಲ್’(ರಾಜದಂಡ) ಸ್ಥಾಪಿಸುವ ಮೂಲಕ ತಮಿಳು ಸಂಸ್ಕೃತಿಗೆ ಗೌರವ ನೀಡಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದುರೈ</strong>: ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರವು ಬಡವರು, ಯುವಜನರು, ರೈತರಿಂದ ಕಸಿಯುತ್ತಿದೆ. ಇಂಥ ಭ್ರಷ್ಟ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದರು.</p>.<p>ಎನ್ಡಿಎ ರ್ಯಾಲಿ ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಎನ್ಡಿಎಯನ್ನು ಅಧಿಕಾರಕ್ಕೆ ತರಲು ಜನರು ನಿರ್ಧರಿಸಿದ್ದಾರೆ. ದಕ್ಷ ಮತ್ತು ಪ್ರಮಾಣಿಕ ಸರ್ಕಾರ ಸ್ಥಾಪಿಸುವುದಾಗಿ ನಾನು ಭರವಸೆ ನೀಡುತ್ತೇನೆ’ ಎಂದು ಹೇಳಿದರು.</p>.<p> ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ‘ಈ ಹಿಂದೆ ಕಾಂಗ್ರೆಸ್–ಡಿಎಂಕೆ ನೇತೃತ್ವದ ಮೈತ್ರಿ ಸರ್ಕಾರವು ‘ಜಲ್ಲಿಕಟ್ಟು’ ನಿಷೇಧಿಸಿತ್ತು. ಬಿಜೆಪಿ ಸರ್ಕಾರವು ಆ ನಿಷೇಧವನ್ನು ತೆರವುಗೊಳಿಸಿತು. ಸಂಸತ್ತಿನಲ್ಲಿ ‘ಸೆಂಗೋಲ್’(ರಾಜದಂಡ) ಸ್ಥಾಪಿಸುವ ಮೂಲಕ ತಮಿಳು ಸಂಸ್ಕೃತಿಗೆ ಗೌರವ ನೀಡಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>