<p><strong>ಹರ್ದೋಯಿ (ಉತ್ತರಪ್ರದೇಶ) :</strong> ಸಮಾಜವಾದಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಪಕ್ಷವು ಮಹಿಳಾ ವಿರೋಧಿ ಮನಃಸ್ಥಿತಿ ಹೊಂದಿದೆ. ಉತ್ತರ ಪ್ರದೇಶದ ಜನರನ್ನು ದುರುಪಯೋಗಪಡಿಸಿಕೊಳ್ಳುವ ಡಿಎಂಕೆ ಪಕ್ಷದ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದ್ದಾರೆ.</p>.<p>ಬುಧವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾ ಎಕ್ಸ್ಪ್ರೆಸ್ ವೇ ಉದ್ಘಾಟಿಸಿ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಸಮಾಜವಾದಿ ಪಕ್ಷವು ಉತ್ತರ ಪ್ರದೇಶದ ಅಭಿವೃದ್ಧಿಯನ್ನು ಬಯಸುತ್ತಿಲ್ಲ, ರಾಜ್ಯವನ್ನು ಗತಕಾಲಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದೆ’ ಎಂದು ದೂರಿದ್ದಾರೆ.</p>.<p>‘2029ರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ವಿಧೇಯಕದ ವಿರುದ್ಧ ಸಮಾಜವಾದಿ ಪಕ್ಷವು ಮತ ಚಲಾಯಿಸಿದೆ. ಆ ಮೂಲಕ ಉತ್ತರ ಪ್ರದೇಶದಲ್ಲಿ ಸಂಸತ್ ಸದಸ್ಯರ ಸೀಟು ಹೆಚ್ಚಳ ಮಾಡುವುದನ್ನು ವಿರೋಧಿಸಿದೆ’ ಎಂದು ತಿಳಿಸಿದ್ದಾರೆ.</p>.<p>‘ರಾಜ್ಯದ ಜನರ ಮತ ಪಡೆದು ಸಂಸತ್ ಪ್ರವೇಶಿಸಿರುವ ಇವರು, ನಿಮ್ಮನ್ನು ನಿಂದನೆ ಮಾಡುವ ಜನ ಜೊತೆಗೆ ಕೈ ಜೋಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸೀಟು ಹೆಚ್ಚಳಕ್ಕೆ ಡಿಎಂಕೆ ಆಕ್ಷೇಪ ವ್ಯಕ್ತಪಡಿಸಿದರೆ, ಸಮಾಜವಾದಿ ಪಕ್ಷ ಕೂಡ ಇದೇ ಧಾಟಿಯಲ್ಲಿ ಮಾತನಾಡುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಇಂತಹ ಬೆಳವಣಿಗೆಗಳು ಸಮಾಜವವನ್ನು ವಿಭಜಿಸಿ, ರಾಜ್ಯದ ಅಭಿವೃದ್ಧಿಗೆ ತಡೆಯೊಡ್ಡುವುದಾಗಿದೆ’ ಎಂದು ಮೋದಿ ತಿಳಿಸಿದ್ದಾರೆ.</p>.<p><strong>ಅಭಿವೃದ್ಧಿ ಪರ್ವ:</strong> ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿದ ಮೋದಿ, ‘ರಾಜ್ಯವು ಈ ಹಿಂದೆ ಹಿಂದುಳಿದಿರುವ ಜೊತೆಗೆ ಕಾನೂನು– ಸುವ್ಯವಸ್ಥೆಯೂ ಕುಸಿದಿತ್ತು’ ಎಂದಿದ್ದಾರೆ.</p>.<div><blockquote>ಪಕ್ಷವು ಯಾವಾಗಲೂ ಜನರನ್ನು ಒಗ್ಗೂಡಿಸಲು ಕೆಲಸ ಮಾಡಿದೆ. ನಾವು ತಾರತಮ್ಯವನ್ನು ಹೊಡೆದುಹಾಕಿ, ಸಾಮರಸ್ಯ ಸೃಷ್ಟಿಸುವಲ್ಲಿ ನಂಬಿಕೆ ಇಟ್ಟಿದ್ದೇವೆ </blockquote><span class="attribution">ಅಖಿಲೇಶ್ ಯಾದವ್, ಎಸ್ಪಿ ಮುಖ್ಯಸ್ಥ</span></div>.<p><strong>ಸ್ವಕ್ಷೇತ್ರದಲ್ಲಿ 14 ಕಿ.ಮೀ. ರೋಡ್ಶೋ</strong></p><p>ವಾರಾಣಸಿ, ಉತ್ತರ ಪ್ರದೇಶ (ಪಿಟಿಐ): ಎರಡು ದಿನಗಳ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಕ್ಷೇತ್ರ ವಾರಾಣಸಿಯಲ್ಲಿ ಬುಧವಾರ ಬೆಳಿಗ್ಗೆ 14 ಕಿ.ಮೀ. ರೋಡ್ ಶೋ ನಡೆಸಿದರು. ರಸ್ತೆಯುದ್ಧಕ್ಕೂ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.</p><p>ಬನಾರಸ್ ಲೊಕೊಮೋಟಿವ್ ವರ್ಕ್ಸ್ನಿಂದ ಆರಂಭವಾದ ರೋಡ್ ಶೋ ಲಹರ್ತಾರ, ಕಚ್ಹರಿ, ಅಂಬೇಡ್ಕರ್ ಚೌರಾಹ್, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್, ಮೈದಾಗಿನ್ ಮೂಲಕ ಸಾಗಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಕೊನೆಗೊಂಡಿತು. ನಂತರ ವಿಶ್ವನಾಥನ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ಹೊರಬಂದ ಪ್ರಧಾನಿ ಅವರನ್ನು ಸ್ಥಳೀಯ ಜನಪಪ್ರತಿನಿಧಿಗಳು ತ್ರಿಶೂಲ, ಡಮರುಗ ನೀಡಿ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರ್ದೋಯಿ (ಉತ್ತರಪ್ರದೇಶ) :</strong> ಸಮಾಜವಾದಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಪಕ್ಷವು ಮಹಿಳಾ ವಿರೋಧಿ ಮನಃಸ್ಥಿತಿ ಹೊಂದಿದೆ. ಉತ್ತರ ಪ್ರದೇಶದ ಜನರನ್ನು ದುರುಪಯೋಗಪಡಿಸಿಕೊಳ್ಳುವ ಡಿಎಂಕೆ ಪಕ್ಷದ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದ್ದಾರೆ.</p>.<p>ಬುಧವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾ ಎಕ್ಸ್ಪ್ರೆಸ್ ವೇ ಉದ್ಘಾಟಿಸಿ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಸಮಾಜವಾದಿ ಪಕ್ಷವು ಉತ್ತರ ಪ್ರದೇಶದ ಅಭಿವೃದ್ಧಿಯನ್ನು ಬಯಸುತ್ತಿಲ್ಲ, ರಾಜ್ಯವನ್ನು ಗತಕಾಲಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದೆ’ ಎಂದು ದೂರಿದ್ದಾರೆ.</p>.<p>‘2029ರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ವಿಧೇಯಕದ ವಿರುದ್ಧ ಸಮಾಜವಾದಿ ಪಕ್ಷವು ಮತ ಚಲಾಯಿಸಿದೆ. ಆ ಮೂಲಕ ಉತ್ತರ ಪ್ರದೇಶದಲ್ಲಿ ಸಂಸತ್ ಸದಸ್ಯರ ಸೀಟು ಹೆಚ್ಚಳ ಮಾಡುವುದನ್ನು ವಿರೋಧಿಸಿದೆ’ ಎಂದು ತಿಳಿಸಿದ್ದಾರೆ.</p>.<p>‘ರಾಜ್ಯದ ಜನರ ಮತ ಪಡೆದು ಸಂಸತ್ ಪ್ರವೇಶಿಸಿರುವ ಇವರು, ನಿಮ್ಮನ್ನು ನಿಂದನೆ ಮಾಡುವ ಜನ ಜೊತೆಗೆ ಕೈ ಜೋಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸೀಟು ಹೆಚ್ಚಳಕ್ಕೆ ಡಿಎಂಕೆ ಆಕ್ಷೇಪ ವ್ಯಕ್ತಪಡಿಸಿದರೆ, ಸಮಾಜವಾದಿ ಪಕ್ಷ ಕೂಡ ಇದೇ ಧಾಟಿಯಲ್ಲಿ ಮಾತನಾಡುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಇಂತಹ ಬೆಳವಣಿಗೆಗಳು ಸಮಾಜವವನ್ನು ವಿಭಜಿಸಿ, ರಾಜ್ಯದ ಅಭಿವೃದ್ಧಿಗೆ ತಡೆಯೊಡ್ಡುವುದಾಗಿದೆ’ ಎಂದು ಮೋದಿ ತಿಳಿಸಿದ್ದಾರೆ.</p>.<p><strong>ಅಭಿವೃದ್ಧಿ ಪರ್ವ:</strong> ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿದ ಮೋದಿ, ‘ರಾಜ್ಯವು ಈ ಹಿಂದೆ ಹಿಂದುಳಿದಿರುವ ಜೊತೆಗೆ ಕಾನೂನು– ಸುವ್ಯವಸ್ಥೆಯೂ ಕುಸಿದಿತ್ತು’ ಎಂದಿದ್ದಾರೆ.</p>.<div><blockquote>ಪಕ್ಷವು ಯಾವಾಗಲೂ ಜನರನ್ನು ಒಗ್ಗೂಡಿಸಲು ಕೆಲಸ ಮಾಡಿದೆ. ನಾವು ತಾರತಮ್ಯವನ್ನು ಹೊಡೆದುಹಾಕಿ, ಸಾಮರಸ್ಯ ಸೃಷ್ಟಿಸುವಲ್ಲಿ ನಂಬಿಕೆ ಇಟ್ಟಿದ್ದೇವೆ </blockquote><span class="attribution">ಅಖಿಲೇಶ್ ಯಾದವ್, ಎಸ್ಪಿ ಮುಖ್ಯಸ್ಥ</span></div>.<p><strong>ಸ್ವಕ್ಷೇತ್ರದಲ್ಲಿ 14 ಕಿ.ಮೀ. ರೋಡ್ಶೋ</strong></p><p>ವಾರಾಣಸಿ, ಉತ್ತರ ಪ್ರದೇಶ (ಪಿಟಿಐ): ಎರಡು ದಿನಗಳ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಕ್ಷೇತ್ರ ವಾರಾಣಸಿಯಲ್ಲಿ ಬುಧವಾರ ಬೆಳಿಗ್ಗೆ 14 ಕಿ.ಮೀ. ರೋಡ್ ಶೋ ನಡೆಸಿದರು. ರಸ್ತೆಯುದ್ಧಕ್ಕೂ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.</p><p>ಬನಾರಸ್ ಲೊಕೊಮೋಟಿವ್ ವರ್ಕ್ಸ್ನಿಂದ ಆರಂಭವಾದ ರೋಡ್ ಶೋ ಲಹರ್ತಾರ, ಕಚ್ಹರಿ, ಅಂಬೇಡ್ಕರ್ ಚೌರಾಹ್, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್, ಮೈದಾಗಿನ್ ಮೂಲಕ ಸಾಗಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಕೊನೆಗೊಂಡಿತು. ನಂತರ ವಿಶ್ವನಾಥನ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ಹೊರಬಂದ ಪ್ರಧಾನಿ ಅವರನ್ನು ಸ್ಥಳೀಯ ಜನಪಪ್ರತಿನಿಧಿಗಳು ತ್ರಿಶೂಲ, ಡಮರುಗ ನೀಡಿ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>