<p><strong>ಸಿವಾನ್:</strong> ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಆರ್ಜೆಡಿ ಅವಮಾನಿಸಿದೆ ಎಂದು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಬಿಹಾರದ ಜನರು ಅದನ್ನು ಸಹಿಸುವುದಿಲ್ಲ’ ಎಂದು ಹೇಳಿದರು.</p><p>ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಬಿಹಾರ ದೊಡ್ಡ ಪಾತ್ರ ವಹಿಸಬೇಕು ಎಂದರು. </p><p>ಮೋದಿ ಅವರು ಈ ವರ್ಷದಲ್ಲಿ ಬಿಹಾರಕ್ಕೆ ನೀಡಿದ ಐದನೇ ಭೇಟಿ ಇದಾಗಿತ್ತು. ಈ ತಿಂಗಳಲ್ಲಿ ಇದು ಅವರ ಎರಡನೇ ಭೇಟಿ. ವಂದೆ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ಸೇರಿದಂತೆ ₹5,900 ಕೋಟಿ ಮೊತ್ತದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಅಂಬೇಡ್ಕರ್ ರಾಜಪ್ರಭುತ್ವದ ವಿರೋಧಿಯಾಗಿದ್ದರು. ಆದರೆ ಆರ್ಜೆಡಿ ಮತ್ತು ಅದರ ಮಿತ್ರ ಪಕ್ಷಗಳಿಗೆ ಅದು ಇಷ್ಟವಿಲ್ಲ. ಹೀಗಾಗಿ ಅವರು ಬಾಬಾ ಸಾಹೇಬರ ಭಾವಚಿತ್ರವನ್ನು ತಮ್ಮ ಪಾದಗಳ ಬಳಿ ಇಟ್ಟಿದ್ದರು. ಈ ಅವಮಾನಕ್ಕಾಗಿ ಆರ್ಜೆಡಿ ನಾಯಕರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಜನರು ನಡೆಸುತ್ತಿದ್ದ ಪ್ರತಿಭಟನೆಯನ್ನು ನಾನು ಇಲ್ಲಿಗೆ ಬರುವಾಗ ಗಮನಿಸಿದ್ದೇನೆ’ ಎಂದು ಅವರು ಹೇಳಿದರು.</p><p>‘ಆದರೆ, ಆರ್ಜೆಡಿ ನಾಯಕರು ಈ ಸಂಬಂಧ ಇಲ್ಲಿಯವರೆಗೆ ಕ್ಷಮೆಯಾಚಿಸಿಲ್ಲ. ಏಕೆಂದರೆ ಅವರು ದಲಿತರನ್ನು ತಿರಸ್ಕಾರದಿಂದ ನೋಡುತ್ತಾರೆ. ಇದಕ್ಕೆ ವ್ಯತಿರಿಕ್ತ ಎಂದರೆ, ನನ್ನ ಹೃದಯದಲ್ಲಿ ಬಾಬಾಸಾಹೇಬರು ಇದ್ದಾರೆ, ಅವರ ಭಾವಚಿತ್ರವನ್ನು ಎದೆಯ ಹತ್ತಿರ ಇಟ್ಟುಕೊಳ್ಳಲು ಬಯಸುತ್ತೇನೆ’ ಎಂದು ತಿಳಿಸಿದರು.</p><p>ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹೆಸರನ್ನು ಉಲ್ಲೇಖಿಸದೆ ಮೋದಿ ಟೀಕಿಸಿದರು. </p><p>‘ಆರ್ಜೆಡಿ– ಕಾಂಗ್ರೆಸ್ ಪಕ್ಷಗಳ ಜನರಿಗೆ ಅವಕಾಶ ವಂಚಿತರು, ದಲಿತರು, ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಬಗ್ಗೆ ಗೌರವವಿಲ್ಲ. ಅವರು ತಮ್ಮನ್ನು ಬಾಬಾಸಾಹೇಬರಿಗಿಂತ ಮೇಲು ಎಂದು ಪರಿಗಣಿಸುತ್ತಾರೆ. ಇದನ್ನು ಬಿಹಾರದ ಜನರು ಎಂದಿಗೂ ಕ್ಷಮಿಸಲ್ಲ ಎಂಬುದು ನೆನಪಿರಲಿ’ ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿವಾನ್:</strong> ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಆರ್ಜೆಡಿ ಅವಮಾನಿಸಿದೆ ಎಂದು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಬಿಹಾರದ ಜನರು ಅದನ್ನು ಸಹಿಸುವುದಿಲ್ಲ’ ಎಂದು ಹೇಳಿದರು.</p><p>ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಬಿಹಾರ ದೊಡ್ಡ ಪಾತ್ರ ವಹಿಸಬೇಕು ಎಂದರು. </p><p>ಮೋದಿ ಅವರು ಈ ವರ್ಷದಲ್ಲಿ ಬಿಹಾರಕ್ಕೆ ನೀಡಿದ ಐದನೇ ಭೇಟಿ ಇದಾಗಿತ್ತು. ಈ ತಿಂಗಳಲ್ಲಿ ಇದು ಅವರ ಎರಡನೇ ಭೇಟಿ. ವಂದೆ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ಸೇರಿದಂತೆ ₹5,900 ಕೋಟಿ ಮೊತ್ತದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಅಂಬೇಡ್ಕರ್ ರಾಜಪ್ರಭುತ್ವದ ವಿರೋಧಿಯಾಗಿದ್ದರು. ಆದರೆ ಆರ್ಜೆಡಿ ಮತ್ತು ಅದರ ಮಿತ್ರ ಪಕ್ಷಗಳಿಗೆ ಅದು ಇಷ್ಟವಿಲ್ಲ. ಹೀಗಾಗಿ ಅವರು ಬಾಬಾ ಸಾಹೇಬರ ಭಾವಚಿತ್ರವನ್ನು ತಮ್ಮ ಪಾದಗಳ ಬಳಿ ಇಟ್ಟಿದ್ದರು. ಈ ಅವಮಾನಕ್ಕಾಗಿ ಆರ್ಜೆಡಿ ನಾಯಕರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಜನರು ನಡೆಸುತ್ತಿದ್ದ ಪ್ರತಿಭಟನೆಯನ್ನು ನಾನು ಇಲ್ಲಿಗೆ ಬರುವಾಗ ಗಮನಿಸಿದ್ದೇನೆ’ ಎಂದು ಅವರು ಹೇಳಿದರು.</p><p>‘ಆದರೆ, ಆರ್ಜೆಡಿ ನಾಯಕರು ಈ ಸಂಬಂಧ ಇಲ್ಲಿಯವರೆಗೆ ಕ್ಷಮೆಯಾಚಿಸಿಲ್ಲ. ಏಕೆಂದರೆ ಅವರು ದಲಿತರನ್ನು ತಿರಸ್ಕಾರದಿಂದ ನೋಡುತ್ತಾರೆ. ಇದಕ್ಕೆ ವ್ಯತಿರಿಕ್ತ ಎಂದರೆ, ನನ್ನ ಹೃದಯದಲ್ಲಿ ಬಾಬಾಸಾಹೇಬರು ಇದ್ದಾರೆ, ಅವರ ಭಾವಚಿತ್ರವನ್ನು ಎದೆಯ ಹತ್ತಿರ ಇಟ್ಟುಕೊಳ್ಳಲು ಬಯಸುತ್ತೇನೆ’ ಎಂದು ತಿಳಿಸಿದರು.</p><p>ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹೆಸರನ್ನು ಉಲ್ಲೇಖಿಸದೆ ಮೋದಿ ಟೀಕಿಸಿದರು. </p><p>‘ಆರ್ಜೆಡಿ– ಕಾಂಗ್ರೆಸ್ ಪಕ್ಷಗಳ ಜನರಿಗೆ ಅವಕಾಶ ವಂಚಿತರು, ದಲಿತರು, ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಬಗ್ಗೆ ಗೌರವವಿಲ್ಲ. ಅವರು ತಮ್ಮನ್ನು ಬಾಬಾಸಾಹೇಬರಿಗಿಂತ ಮೇಲು ಎಂದು ಪರಿಗಣಿಸುತ್ತಾರೆ. ಇದನ್ನು ಬಿಹಾರದ ಜನರು ಎಂದಿಗೂ ಕ್ಷಮಿಸಲ್ಲ ಎಂಬುದು ನೆನಪಿರಲಿ’ ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>