<p class="title"><strong>ನವದೆಹಲಿ</strong>: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯು ಭಾನುವಾರ ಇಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಾತನಾಡುವರು.</p>.<p class="title">ಉತ್ತರಪ್ರದೇಶ ರಾಜ್ಯವು ಒಳಗೊಂಡಂತೆ ಐದು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯನ್ನು ಕುರಿತು ಈ ಸಭೆಯು ಪ್ರಮುಖವಾಗಿ ಚರ್ಚಿಸುವ ಸಂಭವವಿದೆ.</p>.<p class="title">ಪಕ್ಷದ ನಿಯಮಗಳ ಅನುಸಾರ, ರಾಷ್ಟ್ರೀಯ ಕಾರ್ಯಕಾರಣಿಯ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಆದರೆ, ದೇಶದಲ್ಲಿ ಕೋವಿಡ್ನಿಂದ ಉದ್ಭವಿಸಿದ್ದ ಪರಿಸ್ಥಿತಿಯಿಂದಾಗಿ ಈಗ ಬಹುತೇಕ ಎರಡು ವರ್ಷಗಳ ನಂತರ ಈ ಸಭೆಯು ನಡೆಯುತ್ತಿದೆ.</p>.<p class="title">ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು, ಪ್ರಮುಖ ಮುಖಂಡರು, ಕೇಂದ್ರದ ಸಚಿವರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವರ್ಚ್ಯುವಲ್ ಸ್ವರೂದದಲ್ಲಿ ಸಭೆಯಲ್ಲಿ ಭಾಗವಹಿಸುವರು. ನಡ್ಡಾ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಪ್ರಧಾನಿ ಅಂತಿಮಗೋಷ್ಠಿಯಲ್ಲಿ ಭಾಷಣ ಮಾಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯು ಭಾನುವಾರ ಇಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಾತನಾಡುವರು.</p>.<p class="title">ಉತ್ತರಪ್ರದೇಶ ರಾಜ್ಯವು ಒಳಗೊಂಡಂತೆ ಐದು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯನ್ನು ಕುರಿತು ಈ ಸಭೆಯು ಪ್ರಮುಖವಾಗಿ ಚರ್ಚಿಸುವ ಸಂಭವವಿದೆ.</p>.<p class="title">ಪಕ್ಷದ ನಿಯಮಗಳ ಅನುಸಾರ, ರಾಷ್ಟ್ರೀಯ ಕಾರ್ಯಕಾರಣಿಯ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಆದರೆ, ದೇಶದಲ್ಲಿ ಕೋವಿಡ್ನಿಂದ ಉದ್ಭವಿಸಿದ್ದ ಪರಿಸ್ಥಿತಿಯಿಂದಾಗಿ ಈಗ ಬಹುತೇಕ ಎರಡು ವರ್ಷಗಳ ನಂತರ ಈ ಸಭೆಯು ನಡೆಯುತ್ತಿದೆ.</p>.<p class="title">ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು, ಪ್ರಮುಖ ಮುಖಂಡರು, ಕೇಂದ್ರದ ಸಚಿವರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವರ್ಚ್ಯುವಲ್ ಸ್ವರೂದದಲ್ಲಿ ಸಭೆಯಲ್ಲಿ ಭಾಗವಹಿಸುವರು. ನಡ್ಡಾ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಪ್ರಧಾನಿ ಅಂತಿಮಗೋಷ್ಠಿಯಲ್ಲಿ ಭಾಷಣ ಮಾಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>