<p><strong>ಅಹಮದಾಬಾದ್:</strong> ಯುವ ಜನತೆಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಪ್ರತಿಪಾದಿಸಿದ್ದಾರೆ. </p><p>ಅಹಮದಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ದೇಶೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ಸ್ವಾವಲಂಬಿ ಭಾರತದ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಯುವ ಜನತೆಗೆ ಕರೆ ನೀಡಿದ್ದಾರೆ. </p><p>'ನಾವು ಕೌಶಲ್ಯ ಭಾರತ ಯೋಜನೆ ಅನ್ನು ಪ್ರಾರಂಭಿಸಿದ್ದು, ಇದರಡಿಯಲ್ಲಿ ಕೋಟ್ಯಂತರ ಯುವಕರನ್ನು ವಿವಿಧ ಕ್ಷೇತ್ರಗಳಲ್ಲಿ ಸಿದ್ಧಪಡಿಸಲಾಗುತ್ತಿದೆ. ಜಗತ್ತಿಗೆ ವಯಸ್ಕರ ಸಮಸ್ಯೆ ಕಾಡುತ್ತಿದೆ. ಅವರಿಗೆ ಯುವಜನರ ಅಗತ್ಯವಿದೆ. ಜಗತ್ತಿಗೆ ಯುವಜನತೆಯನ್ನು ಒದಗಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ' ಎಂದು ಉಲ್ಲೇಖಿಸಿದ್ದಾರೆ. </p><p>'ಯುವಜನರು ಕೌಶಲ್ಯ ಬೆಳೆಸಿಕೊಂಡರೆ ಹೆಚ್ಚಿನ ಉದ್ಯೋಗಾವಕಾಶಗಳಿವೆ. ಅವರು ಸ್ವಾವಲಂಬಿಗಳಾಗುತ್ತಾರೆ. ಇದು ಹೆಚ್ಚಿನ ಬಲವನ್ನು ತುಂಬುತ್ತದೆ' ಎಂದು ಬಾಲಕಿಯರ ಹಾಸ್ಟೆಲ್ ಉದ್ಘಾಟಿಸಿ ಪ್ರಧಾನಿ ಮಾತನಾಡಿದ್ದಾರೆ. </p><p>ಹೆಣ್ಣುಮಕ್ಕಳ ಪ್ರಗತಿಯಲ್ಲಿ ಸಮಾಜದ ಬೆಂಬಲವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. </p>.Bihar | 'ಇಂಡಿಯಾ' ಮೈತ್ರಿಕೂಟದಲ್ಲಿ ಒಗ್ಗಟ್ಟು, ಶೀಘ್ರದಲ್ಲೇ ಪ್ರಣಾಳಿಕೆ: ರಾಹುಲ್.ಮತ ಕಳ್ಳತನದ ನಂತರ ಬಿಜೆಪಿಯಿಂದ ಅಧಿಕಾರದ ಕಳ್ಳತನ: ಖರ್ಗೆ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಯುವ ಜನತೆಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಪ್ರತಿಪಾದಿಸಿದ್ದಾರೆ. </p><p>ಅಹಮದಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ದೇಶೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ಸ್ವಾವಲಂಬಿ ಭಾರತದ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಯುವ ಜನತೆಗೆ ಕರೆ ನೀಡಿದ್ದಾರೆ. </p><p>'ನಾವು ಕೌಶಲ್ಯ ಭಾರತ ಯೋಜನೆ ಅನ್ನು ಪ್ರಾರಂಭಿಸಿದ್ದು, ಇದರಡಿಯಲ್ಲಿ ಕೋಟ್ಯಂತರ ಯುವಕರನ್ನು ವಿವಿಧ ಕ್ಷೇತ್ರಗಳಲ್ಲಿ ಸಿದ್ಧಪಡಿಸಲಾಗುತ್ತಿದೆ. ಜಗತ್ತಿಗೆ ವಯಸ್ಕರ ಸಮಸ್ಯೆ ಕಾಡುತ್ತಿದೆ. ಅವರಿಗೆ ಯುವಜನರ ಅಗತ್ಯವಿದೆ. ಜಗತ್ತಿಗೆ ಯುವಜನತೆಯನ್ನು ಒದಗಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ' ಎಂದು ಉಲ್ಲೇಖಿಸಿದ್ದಾರೆ. </p><p>'ಯುವಜನರು ಕೌಶಲ್ಯ ಬೆಳೆಸಿಕೊಂಡರೆ ಹೆಚ್ಚಿನ ಉದ್ಯೋಗಾವಕಾಶಗಳಿವೆ. ಅವರು ಸ್ವಾವಲಂಬಿಗಳಾಗುತ್ತಾರೆ. ಇದು ಹೆಚ್ಚಿನ ಬಲವನ್ನು ತುಂಬುತ್ತದೆ' ಎಂದು ಬಾಲಕಿಯರ ಹಾಸ್ಟೆಲ್ ಉದ್ಘಾಟಿಸಿ ಪ್ರಧಾನಿ ಮಾತನಾಡಿದ್ದಾರೆ. </p><p>ಹೆಣ್ಣುಮಕ್ಕಳ ಪ್ರಗತಿಯಲ್ಲಿ ಸಮಾಜದ ಬೆಂಬಲವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. </p>.Bihar | 'ಇಂಡಿಯಾ' ಮೈತ್ರಿಕೂಟದಲ್ಲಿ ಒಗ್ಗಟ್ಟು, ಶೀಘ್ರದಲ್ಲೇ ಪ್ರಣಾಳಿಕೆ: ರಾಹುಲ್.ಮತ ಕಳ್ಳತನದ ನಂತರ ಬಿಜೆಪಿಯಿಂದ ಅಧಿಕಾರದ ಕಳ್ಳತನ: ಖರ್ಗೆ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>