<p><strong>ರಾಂಚಿ(ಜಾರ್ಖಂಡ್): </strong>‘ಭಯೋತ್ಪಾದಕ ದಾಳಿ ನಡೆಯವ ಸಾಧ್ಯತೆ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ಪ್ರವಾಸವನ್ನು ರದ್ದುಪಡಿಸಿದ್ದರು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.</p><p>ರಾಂಚಿಯಲ್ಲಿ ನಡೆದ ‘ಸಂವಿಧಾನ ರಕ್ಷಿಸಿ’ ರ್ಯಾಲಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ದಾಳಿಯ ಕುರಿತಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.</p><p>‘ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಒಪ್ಪಿಕೊಂಡ ಮೇಲೆ ಪಹಲ್ಗಾಮ್ನಲ್ಲಿ ನಡೆದ ಪ್ರಾಣ ಹಾನಿಗೆ ಕೇಂದ್ರ ಸರ್ಕಾರವನ್ನೇ ಹೊಣೆ ಮಾಡಬೇಕಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<div><blockquote>ಉಗ್ರರ ವಿರುದ್ಧದ ಹೋರಾಟಕ್ಕೆ ಇಡೀ ದೇಶ ಪ್ರಧಾನಿ ಜೊತೆಗಿರುವಾಗ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಖರ್ಗೆ ಅವರ ಹೇಳಿಕೆ ಭದ್ರತಾ ಪಡೆಗಳ ನೈತಿಕ ಖರ್ಗೆ ಕುಂದಿಸುವಂತಹದ್ದಾಗಿದೆ. </blockquote><span class="attribution">ಬಾಬುಲಾಲ್ ಮರಂಡಿ, ಜಾರ್ಖಂಡ್ ಬಿಜೆಪಿ ಘಟಕದ ಅಧ್ಯಕ್ಷ</span></div>.<p>‘ಸಂಭಾವ್ಯ ದಾಳಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರವೂ ಪಹಲ್ಗಾಮ್ನಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ಏಕೆ ನಿಯೋಜಿಸಿಲ್ಲ?’ ಎಂದು ಕೇಳಿದ್ದಾರೆ.</p><p>ಇದೇ ವೇಳೆ, ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಕೇಂದ್ರ ಸರ್ಕಾರವು ಯಾವುದೇ ಕ್ರಮ ತೆಗೆದುಕೊಂಡರೂ ಅದನ್ನು ಕಾಂಗ್ರೆಸ್ ಬೆಂಬಲಿಸುತ್ತದೆ. ಪಕ್ಷಕ್ಕಿಂತ ದೇಶ ಮೊದಲು ಎಂದು ಹೇಳಿದ್ದಾರೆ.</p><p><strong>ದೇಶ ದುರ್ಬಲಗೊಳಿಸುವ ಹೇಳಿಕೆ: ಬಿಜೆಪಿ</strong> <strong>ಟೀಕೆ</strong> </p><p>ನವದೆಹಲಿ: ‘ಪ್ರಧಾನಿ ಅವರ ಕಾಶ್ಮೀರ ಪ್ರವಾಸ ರದ್ದು ಮತ್ತು ಪಹಲ್ಗಾಮ್ ಕೃತ್ಯ ಕುರಿತು ಖರ್ಗೆ ಅವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದು ಈ ಮೂಲಕ ದೇಶವನ್ನು ದುರ್ಬಲಗೊಳಿಸುತ್ತಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.</p><p> ‘ಒಂದು ಕಡೆ ಸರ್ವಪಕ್ಷಗಳ ಸಭೆಯಲ್ಲಿ ದೇಶದ ಪರ ಇಒಗ್ಗಟ್ಟಾಗಿದ್ದೇವೆ ಎನ್ನುತ್ತಾರೆ. ಇನ್ನೊಂದೆಡೆ ಪಾಕಿಸ್ತಾನದ ಜೊತೆ ವಿಷಮ ಸ್ಥಿತಿ ಮೂಡುತ್ತಿರುವಾಗಿ ಹೀಗೆ ಹೇಳಿಕೆ ನೀಡುತ್ತಾರೆ’ ಎಂದು ಬಿಜೆಪಿ ನಾಯಕ ರವಿಶಂಕರ ಪ್ರಸಾದ್ ಹೇಳಿದರು. </p><p>ಇಂತಹ ಹೇಳಿಕೆ ಮೂಲಕ ಖರ್ಗೆ ಅವರೂ ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ವಿವಾದಿತ ಹೇಳಿಕೆ ನೀಡುವ ಪಕ್ಷದ ಬ್ರಿಗೇಡ್ ಜೊತೆಗೆ ಸೇರಿಕೊಂಡಿದ್ದಾರೆ ಎಂದು ಆರೋಪಿಸಿದರು. </p><p> ಬಿಗುವಿನ ಸ್ಥಿತಿ ಮೂಡುತ್ತಿರುವಾಗ ದೇಶ ಒಗ್ಗಟ್ಟಾಗಿ ನಿಂತಿದೆ. ದೇಶವ್ಯಾಪಿ ಅಣಕು ತಾಲೀಮಿಗೆ ಸಿದ್ಧತೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಖರ್ಗೆ ಅವರ ಈ ಹೇಳಿಕೆ ನೋವು ಮೂಡಿಸುವಂತಹದ್ದು ದುರದೃಷ್ಟಕರ ಎಂದು ಹೇಳಿದರು. </p><p>ವಿವಾದಿತ ಹೇಳಿಕೆಗಳನ್ನು ನೀಡದಂತೆ ಪಕ್ಷದವರನ್ನು ಖರ್ಗೆ ತಡೆಯಬೇಕಿತ್ತು. ಆದರೆ ಬದಲಾಗಿ ಅವರು ಈ ಗುಂಪು ಸೇರಿಕೊಂಡಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ(ಜಾರ್ಖಂಡ್): </strong>‘ಭಯೋತ್ಪಾದಕ ದಾಳಿ ನಡೆಯವ ಸಾಧ್ಯತೆ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ಪ್ರವಾಸವನ್ನು ರದ್ದುಪಡಿಸಿದ್ದರು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.</p><p>ರಾಂಚಿಯಲ್ಲಿ ನಡೆದ ‘ಸಂವಿಧಾನ ರಕ್ಷಿಸಿ’ ರ್ಯಾಲಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ದಾಳಿಯ ಕುರಿತಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.</p><p>‘ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಒಪ್ಪಿಕೊಂಡ ಮೇಲೆ ಪಹಲ್ಗಾಮ್ನಲ್ಲಿ ನಡೆದ ಪ್ರಾಣ ಹಾನಿಗೆ ಕೇಂದ್ರ ಸರ್ಕಾರವನ್ನೇ ಹೊಣೆ ಮಾಡಬೇಕಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<div><blockquote>ಉಗ್ರರ ವಿರುದ್ಧದ ಹೋರಾಟಕ್ಕೆ ಇಡೀ ದೇಶ ಪ್ರಧಾನಿ ಜೊತೆಗಿರುವಾಗ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಖರ್ಗೆ ಅವರ ಹೇಳಿಕೆ ಭದ್ರತಾ ಪಡೆಗಳ ನೈತಿಕ ಖರ್ಗೆ ಕುಂದಿಸುವಂತಹದ್ದಾಗಿದೆ. </blockquote><span class="attribution">ಬಾಬುಲಾಲ್ ಮರಂಡಿ, ಜಾರ್ಖಂಡ್ ಬಿಜೆಪಿ ಘಟಕದ ಅಧ್ಯಕ್ಷ</span></div>.<p>‘ಸಂಭಾವ್ಯ ದಾಳಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರವೂ ಪಹಲ್ಗಾಮ್ನಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ಏಕೆ ನಿಯೋಜಿಸಿಲ್ಲ?’ ಎಂದು ಕೇಳಿದ್ದಾರೆ.</p><p>ಇದೇ ವೇಳೆ, ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಕೇಂದ್ರ ಸರ್ಕಾರವು ಯಾವುದೇ ಕ್ರಮ ತೆಗೆದುಕೊಂಡರೂ ಅದನ್ನು ಕಾಂಗ್ರೆಸ್ ಬೆಂಬಲಿಸುತ್ತದೆ. ಪಕ್ಷಕ್ಕಿಂತ ದೇಶ ಮೊದಲು ಎಂದು ಹೇಳಿದ್ದಾರೆ.</p><p><strong>ದೇಶ ದುರ್ಬಲಗೊಳಿಸುವ ಹೇಳಿಕೆ: ಬಿಜೆಪಿ</strong> <strong>ಟೀಕೆ</strong> </p><p>ನವದೆಹಲಿ: ‘ಪ್ರಧಾನಿ ಅವರ ಕಾಶ್ಮೀರ ಪ್ರವಾಸ ರದ್ದು ಮತ್ತು ಪಹಲ್ಗಾಮ್ ಕೃತ್ಯ ಕುರಿತು ಖರ್ಗೆ ಅವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದು ಈ ಮೂಲಕ ದೇಶವನ್ನು ದುರ್ಬಲಗೊಳಿಸುತ್ತಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.</p><p> ‘ಒಂದು ಕಡೆ ಸರ್ವಪಕ್ಷಗಳ ಸಭೆಯಲ್ಲಿ ದೇಶದ ಪರ ಇಒಗ್ಗಟ್ಟಾಗಿದ್ದೇವೆ ಎನ್ನುತ್ತಾರೆ. ಇನ್ನೊಂದೆಡೆ ಪಾಕಿಸ್ತಾನದ ಜೊತೆ ವಿಷಮ ಸ್ಥಿತಿ ಮೂಡುತ್ತಿರುವಾಗಿ ಹೀಗೆ ಹೇಳಿಕೆ ನೀಡುತ್ತಾರೆ’ ಎಂದು ಬಿಜೆಪಿ ನಾಯಕ ರವಿಶಂಕರ ಪ್ರಸಾದ್ ಹೇಳಿದರು. </p><p>ಇಂತಹ ಹೇಳಿಕೆ ಮೂಲಕ ಖರ್ಗೆ ಅವರೂ ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ವಿವಾದಿತ ಹೇಳಿಕೆ ನೀಡುವ ಪಕ್ಷದ ಬ್ರಿಗೇಡ್ ಜೊತೆಗೆ ಸೇರಿಕೊಂಡಿದ್ದಾರೆ ಎಂದು ಆರೋಪಿಸಿದರು. </p><p> ಬಿಗುವಿನ ಸ್ಥಿತಿ ಮೂಡುತ್ತಿರುವಾಗ ದೇಶ ಒಗ್ಗಟ್ಟಾಗಿ ನಿಂತಿದೆ. ದೇಶವ್ಯಾಪಿ ಅಣಕು ತಾಲೀಮಿಗೆ ಸಿದ್ಧತೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಖರ್ಗೆ ಅವರ ಈ ಹೇಳಿಕೆ ನೋವು ಮೂಡಿಸುವಂತಹದ್ದು ದುರದೃಷ್ಟಕರ ಎಂದು ಹೇಳಿದರು. </p><p>ವಿವಾದಿತ ಹೇಳಿಕೆಗಳನ್ನು ನೀಡದಂತೆ ಪಕ್ಷದವರನ್ನು ಖರ್ಗೆ ತಡೆಯಬೇಕಿತ್ತು. ಆದರೆ ಬದಲಾಗಿ ಅವರು ಈ ಗುಂಪು ಸೇರಿಕೊಂಡಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>