<p><strong>ನವದೆಹಲಿ</strong>: ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ಶಮನದ ನಿಟ್ಟಿನಲ್ಲಿ ಮಾಡಿಕೊಂಡಿರುವ ಕದನ ವಿರಾಮ ಒಪ್ಪಂದದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ.</p><p>ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಸೇನಾಪಡೆಗಳ ಮುಖ್ಯಸ್ಥ ಲೆ. ಜನರಲ್ ಅನಿಲ್ ಚೌಹಾಣ್ ಹಾಗೂ ಮೂರು ಸೇನಾ ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.</p><p>ಅದರ ಬೆನ್ನಲ್ಲೇ, ಪಾಕಿಸ್ತಾನ ಸೇನೆ ಭಾರತದ ನಾಗರಿಕರು ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್ ಹಾಗೂ ಕ್ಷಿಪಣಿ ದಾಳಿ ನಡೆಸಿತ್ತು. ಆ ಪ್ರಯತ್ನಗಳನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸಿತ್ತು. ಇದರಿಂದಾಗಿ, ಉಭಯ ರಾಷ್ಟ್ರಗಳ ನಡುವೆ ಯುದ್ಧದ ಆತಂಕ ಸೃಷ್ಟಿಯಾಗಿತ್ತು.</p><p>ಶನಿವಾರ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಸಮತ್ತಿ ಸೂಚಿಸಿದ್ದವು. ಆದರೆ, ಕೆಲವೇ ಹೊತ್ತಿನ ಬಳಿಕ ಪಾಕ್ ಸೇನೆ ಭಾರತದತ್ತ ಮತ್ತೆ ದಾಳಿ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೂ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.</p><p>ಕದನ ವಿರಾಮ ಒಪ್ಪಂದದ ಪರಿಣಾಮ, ಪಾಕ್ ಸೇನೆ ಕದನ ವಿರಾಮ ಉಲ್ಲಂಘಿನೆ ಹಾಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಚರ್ಚೆ ನಡೆಯಾಗುವ ಸಾಧ್ಯತೆ ಇದೆ.</p>.Indo-Pak Tension: ಭಾರತ– ಪಾಕ್ ಕದನ ವಿರಾಮ.ಭಾರತ ಸೇನಾ ನೆಲೆ ಮೇಲೆ ಗುಂಡು: ಕದನ ವಿರಾಮ ಉಲ್ಲಂಘಿಸಿದ ಪಾಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ಶಮನದ ನಿಟ್ಟಿನಲ್ಲಿ ಮಾಡಿಕೊಂಡಿರುವ ಕದನ ವಿರಾಮ ಒಪ್ಪಂದದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ.</p><p>ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಸೇನಾಪಡೆಗಳ ಮುಖ್ಯಸ್ಥ ಲೆ. ಜನರಲ್ ಅನಿಲ್ ಚೌಹಾಣ್ ಹಾಗೂ ಮೂರು ಸೇನಾ ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.</p><p>ಅದರ ಬೆನ್ನಲ್ಲೇ, ಪಾಕಿಸ್ತಾನ ಸೇನೆ ಭಾರತದ ನಾಗರಿಕರು ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್ ಹಾಗೂ ಕ್ಷಿಪಣಿ ದಾಳಿ ನಡೆಸಿತ್ತು. ಆ ಪ್ರಯತ್ನಗಳನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸಿತ್ತು. ಇದರಿಂದಾಗಿ, ಉಭಯ ರಾಷ್ಟ್ರಗಳ ನಡುವೆ ಯುದ್ಧದ ಆತಂಕ ಸೃಷ್ಟಿಯಾಗಿತ್ತು.</p><p>ಶನಿವಾರ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಸಮತ್ತಿ ಸೂಚಿಸಿದ್ದವು. ಆದರೆ, ಕೆಲವೇ ಹೊತ್ತಿನ ಬಳಿಕ ಪಾಕ್ ಸೇನೆ ಭಾರತದತ್ತ ಮತ್ತೆ ದಾಳಿ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೂ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.</p><p>ಕದನ ವಿರಾಮ ಒಪ್ಪಂದದ ಪರಿಣಾಮ, ಪಾಕ್ ಸೇನೆ ಕದನ ವಿರಾಮ ಉಲ್ಲಂಘಿನೆ ಹಾಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಚರ್ಚೆ ನಡೆಯಾಗುವ ಸಾಧ್ಯತೆ ಇದೆ.</p>.Indo-Pak Tension: ಭಾರತ– ಪಾಕ್ ಕದನ ವಿರಾಮ.ಭಾರತ ಸೇನಾ ನೆಲೆ ಮೇಲೆ ಗುಂಡು: ಕದನ ವಿರಾಮ ಉಲ್ಲಂಘಿಸಿದ ಪಾಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>