<p><strong>ನವದೆಹಲಿ</strong>: ದ್ವೀಪ ರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ವೃದ್ಧಿಪಡಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.</p>.ಅಯೋಧ್ಯೆಯಿಂದ ಸೀತೆಯ ತವರು ಸೀತಾಮರ್ಹಿಗೆ ವಂದೇ ಭಾರತ್ ರೈಲು: ಮೋದಿಗೆ ನಿತೀಶ್ ಪತ್ರ.50 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ: ಪ್ರಿಯಕರ ಸೇರಿ ನಾಲ್ವರಿಂದ ಕೃತ್ಯ ಶಂಕೆ . <p>ನೆರೆಯ ದೇಶ ಶ್ರೀಲಂಕಾವು ಭಾರತಕ್ಕೆ ವಿಶೇಷವಾದದ್ದು ಹಾಗೂ ಎರಡೂ ದೇಶಗಳ ನಡುವಿನ ವ್ಯಾಪಾರ– ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಜತೆಯಾಗಿ ಶ್ರಮಿಸೋಣ ಎಂದು ಮೋದಿ ತಿಳಿಸಿದ್ದಾರೆ. </p><p>ಹೊಸ ಅಧ್ಯಕ್ಷರಾಗಿ ಮಾರ್ಕ್ಸ್ವಾದಿ ರಾಜಕಾರಣಿ ಅನುರಾ ಕುಮಾರ ದಿಸ್ಸನಾಯಕೆ ಅವರು ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.</p>.ಸಂಪಾದಕೀಯ: ದೆಹಲಿ ಮುಖ್ಯಮಂತ್ರಿ ಆತಿಶಿ ಮುಂದಿದೆ ಕಠಿಣ ಸವಾಲು. ತಿರುಪತಿ ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ: ತನಿಖೆಗೆ ಎಸ್ಐಟಿ ರಚನೆ. <p>ಆರ್ಥಿಕ ಬಿಕಟ್ಟಿನಿಂದ ಸುಧಾರಿಸಿಕೊಳ್ಳುತ್ತಿರುವ ದೇಶದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ಶನಿವಾರ ಮತದಾನ ನಡೆದಿತ್ತು. 1.7 ಕೋಟಿ ಮತದಾರರ ಪೈಕಿ ಶೇ 75ರಷ್ಟು ಜನರು ಮತ ಚಲಾಯಿಸಿದ್ದರು.</p><p>ಮಾರ್ಕ್ಸಿಸ್ಟ್– ಲೆನಿನಿಸ್ಟ್ ಸಿದ್ಧಾಂತದ ಅಡಿಯಲ್ಲಿ ಸ್ಥಾಪನೆಗೊಂಡಿರುವ ಜನತಾ ವಿಮುಕ್ತಿ ಪೆರಮುನದ (ಪೀಪಲ್ಸ್ ಲಿಬರೇಷನ್ ಫ್ರಂಟ್) ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ನ್ಯಾಷನಲ್ ಪೀಪಲ್ಸ್ ಪವರ್ (ಎನ್ಪಿಪಿ) ಪಕ್ಷ ಚುನಾವಣಾ ಅಖಾಡಕ್ಕೆ ಇಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದ್ವೀಪ ರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ವೃದ್ಧಿಪಡಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.</p>.ಅಯೋಧ್ಯೆಯಿಂದ ಸೀತೆಯ ತವರು ಸೀತಾಮರ್ಹಿಗೆ ವಂದೇ ಭಾರತ್ ರೈಲು: ಮೋದಿಗೆ ನಿತೀಶ್ ಪತ್ರ.50 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ: ಪ್ರಿಯಕರ ಸೇರಿ ನಾಲ್ವರಿಂದ ಕೃತ್ಯ ಶಂಕೆ . <p>ನೆರೆಯ ದೇಶ ಶ್ರೀಲಂಕಾವು ಭಾರತಕ್ಕೆ ವಿಶೇಷವಾದದ್ದು ಹಾಗೂ ಎರಡೂ ದೇಶಗಳ ನಡುವಿನ ವ್ಯಾಪಾರ– ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಜತೆಯಾಗಿ ಶ್ರಮಿಸೋಣ ಎಂದು ಮೋದಿ ತಿಳಿಸಿದ್ದಾರೆ. </p><p>ಹೊಸ ಅಧ್ಯಕ್ಷರಾಗಿ ಮಾರ್ಕ್ಸ್ವಾದಿ ರಾಜಕಾರಣಿ ಅನುರಾ ಕುಮಾರ ದಿಸ್ಸನಾಯಕೆ ಅವರು ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.</p>.ಸಂಪಾದಕೀಯ: ದೆಹಲಿ ಮುಖ್ಯಮಂತ್ರಿ ಆತಿಶಿ ಮುಂದಿದೆ ಕಠಿಣ ಸವಾಲು. ತಿರುಪತಿ ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ: ತನಿಖೆಗೆ ಎಸ್ಐಟಿ ರಚನೆ. <p>ಆರ್ಥಿಕ ಬಿಕಟ್ಟಿನಿಂದ ಸುಧಾರಿಸಿಕೊಳ್ಳುತ್ತಿರುವ ದೇಶದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ಶನಿವಾರ ಮತದಾನ ನಡೆದಿತ್ತು. 1.7 ಕೋಟಿ ಮತದಾರರ ಪೈಕಿ ಶೇ 75ರಷ್ಟು ಜನರು ಮತ ಚಲಾಯಿಸಿದ್ದರು.</p><p>ಮಾರ್ಕ್ಸಿಸ್ಟ್– ಲೆನಿನಿಸ್ಟ್ ಸಿದ್ಧಾಂತದ ಅಡಿಯಲ್ಲಿ ಸ್ಥಾಪನೆಗೊಂಡಿರುವ ಜನತಾ ವಿಮುಕ್ತಿ ಪೆರಮುನದ (ಪೀಪಲ್ಸ್ ಲಿಬರೇಷನ್ ಫ್ರಂಟ್) ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ನ್ಯಾಷನಲ್ ಪೀಪಲ್ಸ್ ಪವರ್ (ಎನ್ಪಿಪಿ) ಪಕ್ಷ ಚುನಾವಣಾ ಅಖಾಡಕ್ಕೆ ಇಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>