<p><strong>ಸಿಲ್ಚಾರ್ (ಅಸ್ಸಾಂ)</strong>: ಜಾಗತಿಕ ಸಂಘರ್ಷಗಳಿಂದ ದೇಶದ ಜನರು ಹೆಚ್ಚು ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ನಿರಂತರ ಶ್ರಮಿಸುತ್ತಿದ್ದರೆ, ವಿರೋಧ ಪಕ್ಷವಾದ ಕಾಂಗ್ರೆಸ್ ದೇಶದ ಜನರಲ್ಲಿ ಭೀತಿ ಹುಟ್ಟಿಸುವ ಮೂಲಕ ಮೂಲಕ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಆರೋಪಿಸಿದರು.</p>.<p>ಅಸ್ಸಾಂನ ಸಿಲ್ಚಾರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ₹23,550 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷವು ಈಶಾನ್ಯ ರಾಜ್ಯಗಳ ಅಭಿವೃದ್ಧಿಯನ್ನು ದಶಕಗಳಿಂದ ನಿರ್ಲಕ್ಷಿಸಿದೆ’ ಎಂದು ದೂರಿದರು.</p>.<p>ಜಗತ್ತಿನಲ್ಲಿ ನಡೆಯುವ ಯುದ್ಧಗಳಿಂದ ದೇಶದ ಮೇಲೆ ಹೆಚ್ಚು ಪರಿಣಾಮ ಆಗದಂತೆ ತಡೆಯುವಲ್ಲಿ ಸರ್ಕಾರ ನಿರತವಾಗಿದೆ. ಆದರೆ ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ ವರ್ತಿಸಬೇಕಾದ ಕಾಂಗ್ರೆಸ್, ಆ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.</p>.<h2>ಕಾಂಗ್ರೆಸ್ ವಿರುದ್ಧ ವಾಗ್ದಾಳಿ: </h2>.<p>ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, ಅಸ್ಸಾಂ ಅಥವಾ ದೇಶದ ಅಭಿವೃದ್ಧಿ ಕುರಿತು ಕಾಂಗ್ರೆಸ್ ಬಳಿ ಯಾವುದೇ ದೃಷ್ಟಿಕೋನವಿಲ್ಲ. ಮೋದಿಯನ್ನು ನಿಂದಿಸುವುದು, ಸುಳ್ಳು ಮತ್ತು ವದಂತಿಗಳನ್ನು ಹರಡುವುದು ಮತ್ತು ಜನರನ್ನು ದಾರಿ ತಪ್ಪಿಸುವುದು ಮಾತ್ರ ಅವರಿಗೆ ಗೊತ್ತಿದೆ ಎಂದು ಟೀಕಿಸಿದರು. </p>.<p>ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲೂ ಕಾಂಗ್ರೆಸ್ನವರು ಶರ್ಟ್ ಬಿಚ್ಚಿ ಪ್ರತಿಭಟಿಸಿ ದೇಶಕ್ಕೆ ಅಪಖ್ಯಾತಿ ತರಲು ಯತ್ನಿಸಿದರು ಎಂದು ಪ್ರಧಾನಿ ತರಾಟೆಗೆ ತೆಗೆದುಕೊಂಡರು. </p>.<p>ಕಾಂಗ್ರೆಸ್ನ ಈ ಅಸಭ್ಯ ಪ್ರತಿಭಟನೆಯನ್ನು ಇಡೀ ದೇಶ ಖಂಡಿಸಿದೆ. ಆದರೆ ಕಾಂಗ್ರೆಸ್ನ ‘ರಾಜ ಮನೆತನ’ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ಕಾಂಗ್ರೆಸ್ನವರಿಗೆ ಬಟ್ಟೆ ಹರಿದುಕೊಳ್ಳುವುದನ್ನು ಬಿಟ್ಟು ಬೇರೇನೂ ಬರುವುದಿಲ್ಲ ಎಂದು ಅವರು ದೂರಿದರು.</p>.<h2>‘ಹತಾಶರಾಗಿರುವ ಕಾಂಗ್ರೆಸ್ ನಾಯಕರು’: </h2>.<p>ಒಂದರ ನಂತರ ಒಂದರಂತೆ ಚುನಾವಣೆಗಳನ್ನು ಸೋತಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಶತಮಾನದ ಹಿನ್ನಡೆ ಕಾಣಲಿದೆ. ಇಷ್ಟೆಲ್ಲ ಸೋಲುಗಳ ಹತಾಶೆಯಿಂದ ಅದರ ನಾಯಕರು ದೇಶವನ್ನೇ ದೂಷಿಸುವಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು.</p>.<p>ಈಶಾನ್ಯ ಭಾಗವನ್ನು ದೇಶದ ಹೃದಯ ಮತ್ತು ದೆಹಲಿ ಎರಡರಿಂದಲೂ ಕಾಂಗ್ರೆಸ್ ದೂರವಿಟ್ಟಿತ್ತು. ಆ ಮೂಲಕ ಅಭಿವೃದ್ಧಿಯು ಈ ಪ್ರದೇಶದ ಜನರನ್ನು ತಲುಪದಂತೆ ನೋಡಿಕೊಂಡಿತ್ತು ಎಂದು ಅವರು ಹೇಳಿದರು.</p>.<p>ಈಶಾನ್ಯದ ಬರಾಕ್ ಕಣಿವೆಯನ್ನೂ ಕಾಂಗ್ರೆಸ್ ದುರ್ಬಲಗೊಳಿಸುವಲ್ಲಿ ಮಹತ್ವದ ಪಾತ್ರವಹಿಸಿತು. ದಶಕಗಳ ಕಾಲ ಈ ಭಾಗದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಈ ಪ್ರದೇಶ ಅಭಿವೃದ್ಧಿ ಹೊಂದಿಲ್ಲ ಏಕೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಬರಾಕ್ ಕಣವೆಯನ್ನು ಈಶಾನ್ಯ ಮತ್ತು ಪಶ್ಚಿಮ ಬಂಗಾಳದ ಇತರ ಭಾಗಗಳಿಗೆ ಸಂಪರ್ಕಿಸಲು ಬಿಜೆಪಿ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ. ಅಲ್ಲದೆ ಇಲ್ಲಿ ದೊಡ್ಡ ಲಾಜಿಸ್ಟಿಕ್ಸ್ ಮತ್ತು ವ್ಯಾಪಾರ ಕೇಂದ್ರ ಅಭಿವೃದ್ದಿಪಡಿಸಲಾಗುವುದು ಎಂದರು. </p>.<p>ಅಸ್ಸಾಂ ಅನ್ನು 10 ವರ್ಷಗಳಿಗೂ ಹೆಚ್ಚು ಕಾಲ ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಪ್ರತಿನಿಧಿಸಿದ್ದರು. ಆದರೆ, ರಾಜ್ಯದ ರೈತರಿಗೆ ಅವರು ಒಂದು ಪೈಸೆಯನ್ನೂ ನೀಡಲಿಲ್ಲ. ಬಿಜೆಪಿಯು ಅವರಿಗೆ ₹ 20,000 ಕೋಟಿಗಿಂತ ಹೆಚ್ಚು ನೀಡಿದೆ ಎಂದು ಮೋದಿ ಹೇಳಿದರು.</p>.<p>ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಲ್ಚಾರ್ (ಅಸ್ಸಾಂ)</strong>: ಜಾಗತಿಕ ಸಂಘರ್ಷಗಳಿಂದ ದೇಶದ ಜನರು ಹೆಚ್ಚು ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ನಿರಂತರ ಶ್ರಮಿಸುತ್ತಿದ್ದರೆ, ವಿರೋಧ ಪಕ್ಷವಾದ ಕಾಂಗ್ರೆಸ್ ದೇಶದ ಜನರಲ್ಲಿ ಭೀತಿ ಹುಟ್ಟಿಸುವ ಮೂಲಕ ಮೂಲಕ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಆರೋಪಿಸಿದರು.</p>.<p>ಅಸ್ಸಾಂನ ಸಿಲ್ಚಾರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ₹23,550 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷವು ಈಶಾನ್ಯ ರಾಜ್ಯಗಳ ಅಭಿವೃದ್ಧಿಯನ್ನು ದಶಕಗಳಿಂದ ನಿರ್ಲಕ್ಷಿಸಿದೆ’ ಎಂದು ದೂರಿದರು.</p>.<p>ಜಗತ್ತಿನಲ್ಲಿ ನಡೆಯುವ ಯುದ್ಧಗಳಿಂದ ದೇಶದ ಮೇಲೆ ಹೆಚ್ಚು ಪರಿಣಾಮ ಆಗದಂತೆ ತಡೆಯುವಲ್ಲಿ ಸರ್ಕಾರ ನಿರತವಾಗಿದೆ. ಆದರೆ ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ ವರ್ತಿಸಬೇಕಾದ ಕಾಂಗ್ರೆಸ್, ಆ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.</p>.<h2>ಕಾಂಗ್ರೆಸ್ ವಿರುದ್ಧ ವಾಗ್ದಾಳಿ: </h2>.<p>ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, ಅಸ್ಸಾಂ ಅಥವಾ ದೇಶದ ಅಭಿವೃದ್ಧಿ ಕುರಿತು ಕಾಂಗ್ರೆಸ್ ಬಳಿ ಯಾವುದೇ ದೃಷ್ಟಿಕೋನವಿಲ್ಲ. ಮೋದಿಯನ್ನು ನಿಂದಿಸುವುದು, ಸುಳ್ಳು ಮತ್ತು ವದಂತಿಗಳನ್ನು ಹರಡುವುದು ಮತ್ತು ಜನರನ್ನು ದಾರಿ ತಪ್ಪಿಸುವುದು ಮಾತ್ರ ಅವರಿಗೆ ಗೊತ್ತಿದೆ ಎಂದು ಟೀಕಿಸಿದರು. </p>.<p>ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲೂ ಕಾಂಗ್ರೆಸ್ನವರು ಶರ್ಟ್ ಬಿಚ್ಚಿ ಪ್ರತಿಭಟಿಸಿ ದೇಶಕ್ಕೆ ಅಪಖ್ಯಾತಿ ತರಲು ಯತ್ನಿಸಿದರು ಎಂದು ಪ್ರಧಾನಿ ತರಾಟೆಗೆ ತೆಗೆದುಕೊಂಡರು. </p>.<p>ಕಾಂಗ್ರೆಸ್ನ ಈ ಅಸಭ್ಯ ಪ್ರತಿಭಟನೆಯನ್ನು ಇಡೀ ದೇಶ ಖಂಡಿಸಿದೆ. ಆದರೆ ಕಾಂಗ್ರೆಸ್ನ ‘ರಾಜ ಮನೆತನ’ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ಕಾಂಗ್ರೆಸ್ನವರಿಗೆ ಬಟ್ಟೆ ಹರಿದುಕೊಳ್ಳುವುದನ್ನು ಬಿಟ್ಟು ಬೇರೇನೂ ಬರುವುದಿಲ್ಲ ಎಂದು ಅವರು ದೂರಿದರು.</p>.<h2>‘ಹತಾಶರಾಗಿರುವ ಕಾಂಗ್ರೆಸ್ ನಾಯಕರು’: </h2>.<p>ಒಂದರ ನಂತರ ಒಂದರಂತೆ ಚುನಾವಣೆಗಳನ್ನು ಸೋತಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಶತಮಾನದ ಹಿನ್ನಡೆ ಕಾಣಲಿದೆ. ಇಷ್ಟೆಲ್ಲ ಸೋಲುಗಳ ಹತಾಶೆಯಿಂದ ಅದರ ನಾಯಕರು ದೇಶವನ್ನೇ ದೂಷಿಸುವಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು.</p>.<p>ಈಶಾನ್ಯ ಭಾಗವನ್ನು ದೇಶದ ಹೃದಯ ಮತ್ತು ದೆಹಲಿ ಎರಡರಿಂದಲೂ ಕಾಂಗ್ರೆಸ್ ದೂರವಿಟ್ಟಿತ್ತು. ಆ ಮೂಲಕ ಅಭಿವೃದ್ಧಿಯು ಈ ಪ್ರದೇಶದ ಜನರನ್ನು ತಲುಪದಂತೆ ನೋಡಿಕೊಂಡಿತ್ತು ಎಂದು ಅವರು ಹೇಳಿದರು.</p>.<p>ಈಶಾನ್ಯದ ಬರಾಕ್ ಕಣಿವೆಯನ್ನೂ ಕಾಂಗ್ರೆಸ್ ದುರ್ಬಲಗೊಳಿಸುವಲ್ಲಿ ಮಹತ್ವದ ಪಾತ್ರವಹಿಸಿತು. ದಶಕಗಳ ಕಾಲ ಈ ಭಾಗದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಈ ಪ್ರದೇಶ ಅಭಿವೃದ್ಧಿ ಹೊಂದಿಲ್ಲ ಏಕೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಬರಾಕ್ ಕಣವೆಯನ್ನು ಈಶಾನ್ಯ ಮತ್ತು ಪಶ್ಚಿಮ ಬಂಗಾಳದ ಇತರ ಭಾಗಗಳಿಗೆ ಸಂಪರ್ಕಿಸಲು ಬಿಜೆಪಿ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ. ಅಲ್ಲದೆ ಇಲ್ಲಿ ದೊಡ್ಡ ಲಾಜಿಸ್ಟಿಕ್ಸ್ ಮತ್ತು ವ್ಯಾಪಾರ ಕೇಂದ್ರ ಅಭಿವೃದ್ದಿಪಡಿಸಲಾಗುವುದು ಎಂದರು. </p>.<p>ಅಸ್ಸಾಂ ಅನ್ನು 10 ವರ್ಷಗಳಿಗೂ ಹೆಚ್ಚು ಕಾಲ ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಪ್ರತಿನಿಧಿಸಿದ್ದರು. ಆದರೆ, ರಾಜ್ಯದ ರೈತರಿಗೆ ಅವರು ಒಂದು ಪೈಸೆಯನ್ನೂ ನೀಡಲಿಲ್ಲ. ಬಿಜೆಪಿಯು ಅವರಿಗೆ ₹ 20,000 ಕೋಟಿಗಿಂತ ಹೆಚ್ಚು ನೀಡಿದೆ ಎಂದು ಮೋದಿ ಹೇಳಿದರು.</p>.<p>ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>