<p><strong>ಜೈಪುರ</strong>: ಜನರು ಮತ್ತು ಅವರ ಸಮಸ್ಯೆಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ವಿಮುಖರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.</p><p>ಪ್ರಧಾನಿ ಮೋದಿ ಅತಿಯಾಗಿ ಅಧಿಕಾರ ಬಳಸುತ್ತಿದ್ದಾರೆ. ಹಾಗಾಗಿ, ಅವರ ಸುತ್ತಲಿನ ಜನ ಅವರಿಗೆ ಸತ್ಯ ತಿಳಿಸಲು ಹೆದರುತ್ತಿದ್ದಾರೆ ಎಂದಿದ್ದಾರೆ.</p> <p>‘ಜನರ ದೊಡ್ಡ ಸಮಸ್ಯೆ ಹಣದುಬ್ಬರ. ಮೋದಿಜೀಯವರು ಅದನ್ನು ಅರ್ಥ ಮಾಡಿಕೊಂಡಿಲ್ಲ ಎಂದು ನನಗನಿಸುತ್ತದೆ. ಅತಿಯಾದ ಅಧಿಕಾರದ ಚಲಾವಣೆ ಇದ್ದಾಗ ಸುತ್ತಲಿನ ಜನ ಸತ್ಯ ಹೇಳಲಾರರು. ಅಧಿಕಾರಿಗಳು ಮತ್ತು ಸಹೋದ್ಯೋಗಿಗಳು ವಾಸ್ತವ ಪರಿಸ್ಥಿತಿ ಬಗ್ಗೆ ಅವರಿಗೆ ತಿಳಿಸಲು ಭಯಪಡುತ್ತಿದ್ದಾರೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.</p><p>ರಾಜಸ್ಥಾನದ ಜಲೋರ್ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಮಗ, ಕಾಂಗ್ರೆಸ್ ಅಭ್ಯರ್ಥಿ ವೈಭವ್ ಗೆಹಲೋತ್ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p><p>‘ಮೋದಿ ಈಗ ಸಂಪೂರ್ಣ ದೇಶದ ಜನರ ಸಂಪರ್ಕ ಕಡಿದುಕೊಂಡಿದ್ದಾರೆ’ ಎಂದು ನನಗನಿಸುತ್ತದೆ ಎಂದೂ ಅವರು ಹೇಳಿದ್ದಾರೆ.</p><p>ಹಣದುಬ್ಬರ ಮತ್ತು ನಿರುದ್ಯೋಗದಂತಹ ಎರಡು ಬೃಹತ್ ಸಮಸ್ಯೆಗಳು ಈಗ ದೇಶವನ್ನು ಕಾಡುತ್ತಿವೆ. ಆದರೆ, ಅವುಗಳ ಬಗ್ಗೆ ತಲೆಕೆಡಿಸಿಕೊಳ್ಳುವವರೇ ಇಲ್ಲ ಎಂದಿದ್ದಾರೆ.</p><p>‘ನಮ್ಮ ದೇಶದಲ್ಲಿ ಜಿ–20 ಶೃಂಗಸಭೆ ನಡೆದಾಗ ನಮಗೆ ಹೆಮ್ಮೆ ಎನಿಸಿತು. ಆದರೆ, ಮತ್ತೊಂದು ಕಡೆ ಹಣದುಬ್ಬರದಿಂದ ಜನ ತತ್ತರಿಸುತ್ತಿದ್ದರೆ, ನಿರುದ್ಯೋಗಿ ಯುವಕರು ಪರಿತಪಿಸುತ್ತಿದ್ದಾರೆ’ ಎಂದು ಪ್ರಿಯಾಂಕಾ ಹೇಳಿದರು.</p><p>ಭಾರತೀಯ ಜನತಾ ಪಕ್ಷವು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿಲ್ಲ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸಲು ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.</p><p>ಏಪ್ರಿಲ್ 26ರಂದು ಜಲೋರ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ಜನರು ಮತ್ತು ಅವರ ಸಮಸ್ಯೆಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ವಿಮುಖರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.</p><p>ಪ್ರಧಾನಿ ಮೋದಿ ಅತಿಯಾಗಿ ಅಧಿಕಾರ ಬಳಸುತ್ತಿದ್ದಾರೆ. ಹಾಗಾಗಿ, ಅವರ ಸುತ್ತಲಿನ ಜನ ಅವರಿಗೆ ಸತ್ಯ ತಿಳಿಸಲು ಹೆದರುತ್ತಿದ್ದಾರೆ ಎಂದಿದ್ದಾರೆ.</p> <p>‘ಜನರ ದೊಡ್ಡ ಸಮಸ್ಯೆ ಹಣದುಬ್ಬರ. ಮೋದಿಜೀಯವರು ಅದನ್ನು ಅರ್ಥ ಮಾಡಿಕೊಂಡಿಲ್ಲ ಎಂದು ನನಗನಿಸುತ್ತದೆ. ಅತಿಯಾದ ಅಧಿಕಾರದ ಚಲಾವಣೆ ಇದ್ದಾಗ ಸುತ್ತಲಿನ ಜನ ಸತ್ಯ ಹೇಳಲಾರರು. ಅಧಿಕಾರಿಗಳು ಮತ್ತು ಸಹೋದ್ಯೋಗಿಗಳು ವಾಸ್ತವ ಪರಿಸ್ಥಿತಿ ಬಗ್ಗೆ ಅವರಿಗೆ ತಿಳಿಸಲು ಭಯಪಡುತ್ತಿದ್ದಾರೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.</p><p>ರಾಜಸ್ಥಾನದ ಜಲೋರ್ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಮಗ, ಕಾಂಗ್ರೆಸ್ ಅಭ್ಯರ್ಥಿ ವೈಭವ್ ಗೆಹಲೋತ್ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p><p>‘ಮೋದಿ ಈಗ ಸಂಪೂರ್ಣ ದೇಶದ ಜನರ ಸಂಪರ್ಕ ಕಡಿದುಕೊಂಡಿದ್ದಾರೆ’ ಎಂದು ನನಗನಿಸುತ್ತದೆ ಎಂದೂ ಅವರು ಹೇಳಿದ್ದಾರೆ.</p><p>ಹಣದುಬ್ಬರ ಮತ್ತು ನಿರುದ್ಯೋಗದಂತಹ ಎರಡು ಬೃಹತ್ ಸಮಸ್ಯೆಗಳು ಈಗ ದೇಶವನ್ನು ಕಾಡುತ್ತಿವೆ. ಆದರೆ, ಅವುಗಳ ಬಗ್ಗೆ ತಲೆಕೆಡಿಸಿಕೊಳ್ಳುವವರೇ ಇಲ್ಲ ಎಂದಿದ್ದಾರೆ.</p><p>‘ನಮ್ಮ ದೇಶದಲ್ಲಿ ಜಿ–20 ಶೃಂಗಸಭೆ ನಡೆದಾಗ ನಮಗೆ ಹೆಮ್ಮೆ ಎನಿಸಿತು. ಆದರೆ, ಮತ್ತೊಂದು ಕಡೆ ಹಣದುಬ್ಬರದಿಂದ ಜನ ತತ್ತರಿಸುತ್ತಿದ್ದರೆ, ನಿರುದ್ಯೋಗಿ ಯುವಕರು ಪರಿತಪಿಸುತ್ತಿದ್ದಾರೆ’ ಎಂದು ಪ್ರಿಯಾಂಕಾ ಹೇಳಿದರು.</p><p>ಭಾರತೀಯ ಜನತಾ ಪಕ್ಷವು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿಲ್ಲ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸಲು ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.</p><p>ಏಪ್ರಿಲ್ 26ರಂದು ಜಲೋರ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>