<p><strong>ನವದೆಹಲಿ</strong>: ಕೃಷಿ, ಪರಿಸರ ಸಂರಕ್ಷಣೆ ಮತ್ತು ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣ ಸೇರಿದಂತೆ ವಿವಿಧ ವಲಯಗಳಲ್ಲಿ ಕೃತ ಬುದ್ಧಿಮತ್ತೆ (ಎ.ಐ) ಬಳಕೆಯ ಸಾಧ್ಯತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಎ.ಐ ಮತ್ತು ಡೀಪ್ಟೆಕ್ ನವೋದ್ಯಮಗಳ ಸಿಇಒಗಳ ಜೊತೆ ಶುಕ್ರವಾರ ಚರ್ಚೆ ನಡೆಸಿದರು.</p>.<p>ಪ್ರಧಾನಿಯೊಂದಿಗೆ ದುಂಡುಮೇಜಿನ ಸಭೆ ನಡೆಸಿದ 16 ಎ.ಐ ಮತ್ತು ನವೋದ್ಯಮಗಳ ಸ್ಥಾಪಕರು ಮತ್ತು ಸಿಒಒಗಳು ತಮ್ಮ ಯೋಜನೆಗಳನ್ನು ಪ್ರಸ್ತುತ ಪಡಿಸಿದರು.</p>.<p>ಬಲವಾದ ದತ್ತಾಂಶ ನಿರ್ವಹಣೆ, ಸುಳ್ಳು ಮಾಹಿತಿಗಳ ನಿಗ್ರಹ ಮತ್ತು ಭಾರತದ ಅಗತ್ಯತೆಗಳಿಗೆ ಅನುಗುಣವಾದ ತಂತ್ರಜ್ಞಾನಗಳ ಅಗತ್ಯತೆಯನ್ನು ಮೋದಿ ಒತ್ತಿ ಹೇಳಿದರು.</p>.<p>ಬಾಹ್ಯಕಾಶ ವಲಯದಲ್ಲಿ ಖಾಸಗಿ ಸಹಭಾಗಿತ್ವವನ್ನು ವಿಸ್ತರಿಸುವ ಬಗ್ಗೆ ಮತ್ತು ಭಾರತದ ನವೋದ್ಯಮದ ಬಗ್ಗೆ ಹೂಡಿಕೆದಾರರ ಆಸಕ್ತಿ ಬಗ್ಗೆ ಮೋದಿ ಮಾತನಾಡಿದರು.</p>.<p>ಎ.ಐ ಸುಧಾರಣೆಗೆ ಪೂರಕ ವಾತಾವರಣ ಮತ್ತು ಬೆಂಬಲವನ್ನು ಭಾರತ ನೀಡುತ್ತಿದೆ ಹಾಗೂ ಜಾಗತಿಕ ಮಟ್ಟದಲ್ಲಿ ಎ.ಐ ವಲಯದಲ್ಲಿ ತನ್ನ ಇರುವಿಕೆಯನ್ನು ತೋರಿಸುತ್ತಿದೆ ಎಂದು ನವೋದ್ಯಮಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೃಷಿ, ಪರಿಸರ ಸಂರಕ್ಷಣೆ ಮತ್ತು ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣ ಸೇರಿದಂತೆ ವಿವಿಧ ವಲಯಗಳಲ್ಲಿ ಕೃತ ಬುದ್ಧಿಮತ್ತೆ (ಎ.ಐ) ಬಳಕೆಯ ಸಾಧ್ಯತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಎ.ಐ ಮತ್ತು ಡೀಪ್ಟೆಕ್ ನವೋದ್ಯಮಗಳ ಸಿಇಒಗಳ ಜೊತೆ ಶುಕ್ರವಾರ ಚರ್ಚೆ ನಡೆಸಿದರು.</p>.<p>ಪ್ರಧಾನಿಯೊಂದಿಗೆ ದುಂಡುಮೇಜಿನ ಸಭೆ ನಡೆಸಿದ 16 ಎ.ಐ ಮತ್ತು ನವೋದ್ಯಮಗಳ ಸ್ಥಾಪಕರು ಮತ್ತು ಸಿಒಒಗಳು ತಮ್ಮ ಯೋಜನೆಗಳನ್ನು ಪ್ರಸ್ತುತ ಪಡಿಸಿದರು.</p>.<p>ಬಲವಾದ ದತ್ತಾಂಶ ನಿರ್ವಹಣೆ, ಸುಳ್ಳು ಮಾಹಿತಿಗಳ ನಿಗ್ರಹ ಮತ್ತು ಭಾರತದ ಅಗತ್ಯತೆಗಳಿಗೆ ಅನುಗುಣವಾದ ತಂತ್ರಜ್ಞಾನಗಳ ಅಗತ್ಯತೆಯನ್ನು ಮೋದಿ ಒತ್ತಿ ಹೇಳಿದರು.</p>.<p>ಬಾಹ್ಯಕಾಶ ವಲಯದಲ್ಲಿ ಖಾಸಗಿ ಸಹಭಾಗಿತ್ವವನ್ನು ವಿಸ್ತರಿಸುವ ಬಗ್ಗೆ ಮತ್ತು ಭಾರತದ ನವೋದ್ಯಮದ ಬಗ್ಗೆ ಹೂಡಿಕೆದಾರರ ಆಸಕ್ತಿ ಬಗ್ಗೆ ಮೋದಿ ಮಾತನಾಡಿದರು.</p>.<p>ಎ.ಐ ಸುಧಾರಣೆಗೆ ಪೂರಕ ವಾತಾವರಣ ಮತ್ತು ಬೆಂಬಲವನ್ನು ಭಾರತ ನೀಡುತ್ತಿದೆ ಹಾಗೂ ಜಾಗತಿಕ ಮಟ್ಟದಲ್ಲಿ ಎ.ಐ ವಲಯದಲ್ಲಿ ತನ್ನ ಇರುವಿಕೆಯನ್ನು ತೋರಿಸುತ್ತಿದೆ ಎಂದು ನವೋದ್ಯಮಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>