<p><strong>ನವದೆಹಲಿ:</strong> 'ಸ್ವಾಮಿತ್ವ' ಯೋಜನೆಯಡಿ 65 ಲಕ್ಷ ಆಸ್ತಿ ಪತ್ರಗಳನ್ನು ಶನಿವಾರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಇದು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲಿದೆ ಮತ್ತು ಬಡತನ ನಿರ್ಮೂಲನೆಗೆ ಸಹಾಯ ಮಾಡಲಿದೆ' ಎಂದು ಹೇಳಿದರು.</p>.<p>ವರ್ಚುವಲ್ ವೇದಿಕೆ ಮೂಲಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಕೆಲ ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. </p>.<p>‘ಹಳ್ಳಿಗಳಲ್ಲಿನ ಜನರಲ್ಲಿ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿ ಇದೆ. ಆದರೆ ಅದಕ್ಕೆ ಯಾವುದೇ ದಾಖಲೆಗಳಿಲ್ಲ. ವಿವಾದಗಳಿರುವ ಕಾರಣ ಅವುಗಳನ್ನು ಕಿತ್ತುಕೊಳ್ಳಲಾಗುತ್ತಿತ್ತು ಮತ್ತು ಬ್ಯಾಂಕ್ಗಳು ಅವುಗಳ ಮೇಲೆ ಸಾಲ ನೀಡುತ್ತಿರಲಿಲ್ಲ. ಹಿಂದಿನ ಸರ್ಕಾರಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ದಲಿತರಿಗೆ, ಹಿಂದುಳಿದ ವರ್ಗದವರಿಗೆ ಮತ್ತು ಬುಡಕಟ್ಟು ಜನರಿಗೆ ತುಂಬಾ ತೊಂದರೆಯಾಗಿದೆ’ ಎಂದು ಹೇಳಿದರು.</p>.<p>‘65 ಲಕ್ಷ ಜನರಿಗೆ ಆಸ್ತಿ ಪತ್ರ ವಿತರಿಸಲಾಗಿದ್ದು, ಒಟ್ಟು 2.24 ಕೋಟಿ ಫಲಾನುಭವಿಗಳಿದ್ದಾರೆ. ಅಧಿಕೃತ ಆಸ್ತಿ ಪತ್ರಗಳಿಂದಾಗಿ ಅವರಿಗೆ ಸಾಲ ಮತ್ತು ಸರ್ಕಾರಿ ಸೌಲಭ್ಯಗಳು ಸುಲಭವಾಗಿ ದೊರಕಲಿದೆ’ ಎಂದು ಮೋದಿ ಹೇಳಿದರು.</p>.<p>ಛತ್ತೀಸಗಢ, ಗುಜರಾತ್, ಹಿಮಾಚಲಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು–ಕಾಶ್ಮೀರ ಮತ್ತು ಲಡಾಖ್ನ 50 ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿನ ಜನರಿಗೆ ಆಸ್ತಿ ಪತ್ರ ವಿತರಣೆಯಾಗಲಿದೆ.</p>.<p>ಭೌತಿಕವಾಗಿ ಆಸ್ತಿ ಪತ್ರಗಳ ವಿತರಣೆಗಾಗಿ 230 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ 13 ಸಚಿವರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಸ್ವಾಮಿತ್ವ' ಯೋಜನೆಯಡಿ 65 ಲಕ್ಷ ಆಸ್ತಿ ಪತ್ರಗಳನ್ನು ಶನಿವಾರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಇದು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲಿದೆ ಮತ್ತು ಬಡತನ ನಿರ್ಮೂಲನೆಗೆ ಸಹಾಯ ಮಾಡಲಿದೆ' ಎಂದು ಹೇಳಿದರು.</p>.<p>ವರ್ಚುವಲ್ ವೇದಿಕೆ ಮೂಲಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಕೆಲ ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. </p>.<p>‘ಹಳ್ಳಿಗಳಲ್ಲಿನ ಜನರಲ್ಲಿ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿ ಇದೆ. ಆದರೆ ಅದಕ್ಕೆ ಯಾವುದೇ ದಾಖಲೆಗಳಿಲ್ಲ. ವಿವಾದಗಳಿರುವ ಕಾರಣ ಅವುಗಳನ್ನು ಕಿತ್ತುಕೊಳ್ಳಲಾಗುತ್ತಿತ್ತು ಮತ್ತು ಬ್ಯಾಂಕ್ಗಳು ಅವುಗಳ ಮೇಲೆ ಸಾಲ ನೀಡುತ್ತಿರಲಿಲ್ಲ. ಹಿಂದಿನ ಸರ್ಕಾರಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ದಲಿತರಿಗೆ, ಹಿಂದುಳಿದ ವರ್ಗದವರಿಗೆ ಮತ್ತು ಬುಡಕಟ್ಟು ಜನರಿಗೆ ತುಂಬಾ ತೊಂದರೆಯಾಗಿದೆ’ ಎಂದು ಹೇಳಿದರು.</p>.<p>‘65 ಲಕ್ಷ ಜನರಿಗೆ ಆಸ್ತಿ ಪತ್ರ ವಿತರಿಸಲಾಗಿದ್ದು, ಒಟ್ಟು 2.24 ಕೋಟಿ ಫಲಾನುಭವಿಗಳಿದ್ದಾರೆ. ಅಧಿಕೃತ ಆಸ್ತಿ ಪತ್ರಗಳಿಂದಾಗಿ ಅವರಿಗೆ ಸಾಲ ಮತ್ತು ಸರ್ಕಾರಿ ಸೌಲಭ್ಯಗಳು ಸುಲಭವಾಗಿ ದೊರಕಲಿದೆ’ ಎಂದು ಮೋದಿ ಹೇಳಿದರು.</p>.<p>ಛತ್ತೀಸಗಢ, ಗುಜರಾತ್, ಹಿಮಾಚಲಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು–ಕಾಶ್ಮೀರ ಮತ್ತು ಲಡಾಖ್ನ 50 ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿನ ಜನರಿಗೆ ಆಸ್ತಿ ಪತ್ರ ವಿತರಣೆಯಾಗಲಿದೆ.</p>.<p>ಭೌತಿಕವಾಗಿ ಆಸ್ತಿ ಪತ್ರಗಳ ವಿತರಣೆಗಾಗಿ 230 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ 13 ಸಚಿವರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>