<p><strong>ನವದೆಹಲಿ:</strong> ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಸಿದ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಗೆ ತೆರಳಿದ್ದಾರೆ’ ಎಂದು ಕಾಂಗ್ರೆಸ್ ಹೇಳಿದೆ. </p><p>ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದಾರೆ.</p><p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ‘ಭಾರತದ ದೃಷ್ಟಿಯಲ್ಲಿ 2007ರ ಜೂನ್ನಲ್ಲಿ ಜರ್ಮನಿಯಲ್ಲಿ ನಡೆದ ಜಿ 7 ಶೃಂಗಸಭೆ ಅತ್ಯಂತ ಮಹತ್ವದ್ದು. ಏಕೆಂದರೆ ಜಾಗತಿಕ ಹವಾಮಾನ ಬದಲಾವಣೆಯ ಚರ್ಚೆಯಲ್ಲಿ ಡಾ. ಮನಮೋಹನ್ ಸಿಂಗ್ ಮತ್ತು ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಅವರು ‘ಸಿಂಗ್-ಮಾರ್ಕೆಲ್’ ಸೂತ್ರವನ್ನು ಜಗತ್ತಿಗೆ ಪರಿಚಯಿಸಿದರು’ ಎಂದರು.</p><p>‘ಅದು ಇನ್ನೂ ಚರ್ಚೆಯಾಗುತ್ತಿದೆ. ಡಾ. ಮನಮೋಹನ್ ಸಿಂಗ್ ಅವರು ಜಾಗತಿಕವಾಗಿ ದಕ್ಷಿಣ ರಾಷ್ಟ್ರದ ಧ್ವನಿಯಾಗಿ ಹೊರಹೊಮ್ಮಿದ್ದು ಕೆಲಸದ ಮೂಲಕವೇ ಹೊರತು ಪೊಳ್ಳು ಸ್ವ-ಹೆಮ್ಮೆಗಳ ಮೂಲಕ ಅಲ್ಲ’ ಎಂದು ರಮೇಶ್ ಮೋದಿಯನ್ನು ಕುಟುಕಿದರು.</p><p>‘ನಮ್ಮ ‘ಮೂರನೇ ಒಂದು ಭಾಗ’ದ ಪ್ರಧಾನ ಮಂತ್ರಿಯವರು (ಎನ್ಡಿಎ ಮೈತ್ರಿಕೂಟ) ಈ ವರ್ಷದ ಶೃಂಗಸಭೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಸಿದ ತಮ್ಮ ಪ್ರತಿಷ್ಠೆಯನ್ನು ಉಳಿಸಲು ಇಟಲಿಗೆ ಹಾರಿದ್ದಾರೆ. ಈ ಸಂದರ್ಭದಲ್ಲಿ ಈ ಇತಿಹಾಸವನ್ನು ತಿಳಿದುಕೊಳ್ಳಬೇಕು’ ಎಂದು ಹೇಳಿದರು.</p>.G7 Summit In Italy | 3ನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಸಿದ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಗೆ ತೆರಳಿದ್ದಾರೆ’ ಎಂದು ಕಾಂಗ್ರೆಸ್ ಹೇಳಿದೆ. </p><p>ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದಾರೆ.</p><p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ‘ಭಾರತದ ದೃಷ್ಟಿಯಲ್ಲಿ 2007ರ ಜೂನ್ನಲ್ಲಿ ಜರ್ಮನಿಯಲ್ಲಿ ನಡೆದ ಜಿ 7 ಶೃಂಗಸಭೆ ಅತ್ಯಂತ ಮಹತ್ವದ್ದು. ಏಕೆಂದರೆ ಜಾಗತಿಕ ಹವಾಮಾನ ಬದಲಾವಣೆಯ ಚರ್ಚೆಯಲ್ಲಿ ಡಾ. ಮನಮೋಹನ್ ಸಿಂಗ್ ಮತ್ತು ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಅವರು ‘ಸಿಂಗ್-ಮಾರ್ಕೆಲ್’ ಸೂತ್ರವನ್ನು ಜಗತ್ತಿಗೆ ಪರಿಚಯಿಸಿದರು’ ಎಂದರು.</p><p>‘ಅದು ಇನ್ನೂ ಚರ್ಚೆಯಾಗುತ್ತಿದೆ. ಡಾ. ಮನಮೋಹನ್ ಸಿಂಗ್ ಅವರು ಜಾಗತಿಕವಾಗಿ ದಕ್ಷಿಣ ರಾಷ್ಟ್ರದ ಧ್ವನಿಯಾಗಿ ಹೊರಹೊಮ್ಮಿದ್ದು ಕೆಲಸದ ಮೂಲಕವೇ ಹೊರತು ಪೊಳ್ಳು ಸ್ವ-ಹೆಮ್ಮೆಗಳ ಮೂಲಕ ಅಲ್ಲ’ ಎಂದು ರಮೇಶ್ ಮೋದಿಯನ್ನು ಕುಟುಕಿದರು.</p><p>‘ನಮ್ಮ ‘ಮೂರನೇ ಒಂದು ಭಾಗ’ದ ಪ್ರಧಾನ ಮಂತ್ರಿಯವರು (ಎನ್ಡಿಎ ಮೈತ್ರಿಕೂಟ) ಈ ವರ್ಷದ ಶೃಂಗಸಭೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಸಿದ ತಮ್ಮ ಪ್ರತಿಷ್ಠೆಯನ್ನು ಉಳಿಸಲು ಇಟಲಿಗೆ ಹಾರಿದ್ದಾರೆ. ಈ ಸಂದರ್ಭದಲ್ಲಿ ಈ ಇತಿಹಾಸವನ್ನು ತಿಳಿದುಕೊಳ್ಳಬೇಕು’ ಎಂದು ಹೇಳಿದರು.</p>.G7 Summit In Italy | 3ನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>