ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣಾಚಲ, ಮಿಜೋರಾಂ ರಾಜ್ಯ ರಚನಾ ದಿನ: ಪ್ರಧಾನಿ ಮೋದಿ ಶುಭಾಶಯ

Published 20 ಫೆಬ್ರುವರಿ 2024, 6:39 IST
Last Updated 20 ಫೆಬ್ರುವರಿ 2024, 6:39 IST
ಅಕ್ಷರ ಗಾತ್ರ

ನವದೆಹಲಿ: ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಚನಾ ದಿನದ ಅಂಗವಾಗಿ, ಅಲ್ಲಿನ ಜನರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ,   'ಅರುಣಾಚಲ ಪ್ರದೇಶದ ಜನರಿಗೆ ಅವರ ರಾಜ್ಯ ರಚನೆಯಾದದಿನದ ಶುಭಾಶಯಗಳು. ಅರುಣಾಚಲ ಪ್ರದೇಶದ ಜನರು ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಬುಡಕಟ್ಟು ಸಮುದಾಯಗಳ ಸಂಸ್ಕೃತಿ, ಸಂಪ್ರದಾಯ ಹಾಗೂ ಶ್ರೀಮಂತ ಜೀವವೈವಿಧ್ಯತೆ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ವರ್ಷಗಳಲ್ಲೂ ಈ ರಾಜ್ಯದ ಅಭಿವೃದ್ದಿ ಹೀಗೆಯೇ ಮುಂದುವರಿಯಲಿ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಮಿಜೋರಾಂ ಜನರಿಗೆ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಮೋದಿ ಪ್ರಾರ್ಥಿಸಿದ್ದಾರೆ.

ಮಿಜೋರಾಂನ ವಿಶಿಷ್ಟ ಸಾಂಸ್ಕೃತಿಕ ವಸ್ತ್ರವಿನ್ಯಾಸ, ಸಿರಿವಂತಿಕೆ, ಜನರ ಆತ್ಮೀಯ ಮನೋಭಾವದ ಬಗ್ಗೆ ಭಾರತವು ಬಹಳ ಹೆಮ್ಮೆಪಡುತ್ತದೆ. ಮಿಜೋ ಸಂಸ್ಕೃತಿಯು ಬಹಳ ಸ್ಪೂರ್ತಿದಾಯಕವಾಗಿದೆ. ಮಿಜೋರಾಂನ ನಿರಂತರ ಪ್ರಗತಿ, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

1986ರಲ್ಲಿ ಭಾರತದ ಸಂವಿಧಾನಕ್ಕೆ 53ನೇ ತಿದ್ದುಪಡಿ ತರುವುದರೊಂದಿಗೆ 1987ರ ಫೆ.20ರಲ್ಲಿ ಅರುಣಾಚಲ ಪ್ರದೇಶವು ರಾಜ್ಯದ ಸ್ಥಾನಮಾನ ಪಡೆದುಕೊಂಡಿತು. ಅದೇ ದಿನ ಮಿಜೋರಾಂ ರಾಜ್ಯವೂ ರಚನೆಯಾಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT