<p><strong>ರಾಂಚಿ(ಜಾರ್ಖಂಡ್)</strong>: ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್ಶೆಡ್ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್ಶೆಡ್ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ 'ಪರಿವರ್ತನ್ ಮಹಾ ರ್ಯಾಲಿ'ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ಈ ವರ್ಷದ ಕೊನೆಯಲ್ಲಿ ಜಾರ್ಖಂಡ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೋದಿ ಅವರ ಈ ಭೇಟಿ ರಾಜಕೀಯ ಮಹತ್ವ ಹೊಂದಿದೆ.</p><p>ಬುಡಕಟ್ಟು ಪ್ರಾಬಲ್ಯವಿರುವ 9 ಕ್ಷೇತ್ರಗಳು ಸೇರಿದಂತೆ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಲ್ಹಾನ್ ಪ್ರದೇಶದಕ್ಕೆ ಮೋದಿ ಅವರು ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೂರೇನ್ ಅವರು ಇದೇ ಪ್ರದೇಶದಿಂದ ಬಂದಿರುವುದರಿಂದ, ಮೋದಿ ಅವರ ಈ ಭೇಟಿ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.</p><p>2019ರ ವಿಧಾನಸಭಾ ಚುನಾವಣೆಯಲ್ಲಿ, ಬುಡಕಟ್ಟು ಪ್ರಾಬಲ್ಯವಿರುವ ಒಂಬತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ(ಜಾರ್ಖಂಡ್)</strong>: ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್ಶೆಡ್ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್ಶೆಡ್ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ 'ಪರಿವರ್ತನ್ ಮಹಾ ರ್ಯಾಲಿ'ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ಈ ವರ್ಷದ ಕೊನೆಯಲ್ಲಿ ಜಾರ್ಖಂಡ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೋದಿ ಅವರ ಈ ಭೇಟಿ ರಾಜಕೀಯ ಮಹತ್ವ ಹೊಂದಿದೆ.</p><p>ಬುಡಕಟ್ಟು ಪ್ರಾಬಲ್ಯವಿರುವ 9 ಕ್ಷೇತ್ರಗಳು ಸೇರಿದಂತೆ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಲ್ಹಾನ್ ಪ್ರದೇಶದಕ್ಕೆ ಮೋದಿ ಅವರು ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೂರೇನ್ ಅವರು ಇದೇ ಪ್ರದೇಶದಿಂದ ಬಂದಿರುವುದರಿಂದ, ಮೋದಿ ಅವರ ಈ ಭೇಟಿ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.</p><p>2019ರ ವಿಧಾನಸಭಾ ಚುನಾವಣೆಯಲ್ಲಿ, ಬುಡಕಟ್ಟು ಪ್ರಾಬಲ್ಯವಿರುವ ಒಂಬತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>