<p><strong>ನವದೆಹಲಿ: </strong>ದೇಶದಾದ್ಯಂತ ಕೋವಿಡ್ ಸೋಂಕಿತರು ಮತ್ತು ಸಾವಿನ ಸಂಖ್ಯೆ ವಿಪರೀತ ಹೆಚ್ಚಿದ್ದು, ಕೋವಿಡ್ ಸಂಖ್ಯೆ ಹೆಚ್ಚಿರುವ ದೇಶದ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದಾರೆ.</p>.<p>ಕೊರೊನಾ ಸೋಂಕಿತರ ದೈನಂದಿನ ಪ್ರಕರಣಗಳ ಸಂಖ್ಯೆ 3 ಲಕ್ಷ ದಾಟಿದ್ದು, ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳನ್ನು ಮೊಟಕುಗೊಳಿಸಿರುವ ಪ್ರಧಾನಿ ಮೋದಿ, ಸಿಎಂಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.</p>.<p>ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಹಾರಾಷ್ಟ್ರ, ಉತ್ತರ ಪ್ರದೇಶ, ಕೇರಳ, ಛತ್ತೀಸ್ಗಡ, ಮಧ್ಯಪ್ರದೇಶ ಮತ್ತು ದೆಹಲಿಯ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.</p>.<p>ಇದನ್ನೂ ನೋಡಿ:<a href="https://www.prajavani.net/video/india-news/first-oxygen-express-races-towards-maharashtra-amid-covid-crisis-824830.html" target="_blank"><strong>ಏಳು ಟ್ಯಾಂಕರ್ಗಳಲ್ಲಿ ಆಮ್ಲಜನಕ ಹೊತ್ತು ಮಹಾರಾಷ್ಟ್ರಕ್ಕೆ ತೆರಳಿದ ’ಆಕ್ಸಿಜನ್ ಎಕ್ಸ್ಪ್ರೆಸ್’</strong></a></p>.<p>ಆಮ್ಲಜನಕದ ಕೊರತೆ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲು ನಿರಾಕರಿಸುತ್ತಿರುವುದರಿಂದ ದೇಶದ ಪ್ರಮುಖ ಆಮ್ಲಜನಕ ಸರಬರಾಜುದಾರರ ಜೊತೆಯೂ ಪ್ರಧಾನಿ, ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/karnataka-news/why-is-there-so-much-demand-for-antiviral-drug-remdesivir-injections-here-is-the-information-you-824825.html"><strong>ರೆಮ್ಡಿಸಿವಿರ್ ಚುಚ್ಚುಮದ್ದಿಗೆ ಯಾಕಿಷ್ಟು ಬೇಡಿಕೆ? ಇಲ್ಲಿದೆ ತಿಳಿಯಬೇಕಾದ ಮಾಹಿತಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಾದ್ಯಂತ ಕೋವಿಡ್ ಸೋಂಕಿತರು ಮತ್ತು ಸಾವಿನ ಸಂಖ್ಯೆ ವಿಪರೀತ ಹೆಚ್ಚಿದ್ದು, ಕೋವಿಡ್ ಸಂಖ್ಯೆ ಹೆಚ್ಚಿರುವ ದೇಶದ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದಾರೆ.</p>.<p>ಕೊರೊನಾ ಸೋಂಕಿತರ ದೈನಂದಿನ ಪ್ರಕರಣಗಳ ಸಂಖ್ಯೆ 3 ಲಕ್ಷ ದಾಟಿದ್ದು, ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳನ್ನು ಮೊಟಕುಗೊಳಿಸಿರುವ ಪ್ರಧಾನಿ ಮೋದಿ, ಸಿಎಂಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.</p>.<p>ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಹಾರಾಷ್ಟ್ರ, ಉತ್ತರ ಪ್ರದೇಶ, ಕೇರಳ, ಛತ್ತೀಸ್ಗಡ, ಮಧ್ಯಪ್ರದೇಶ ಮತ್ತು ದೆಹಲಿಯ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.</p>.<p>ಇದನ್ನೂ ನೋಡಿ:<a href="https://www.prajavani.net/video/india-news/first-oxygen-express-races-towards-maharashtra-amid-covid-crisis-824830.html" target="_blank"><strong>ಏಳು ಟ್ಯಾಂಕರ್ಗಳಲ್ಲಿ ಆಮ್ಲಜನಕ ಹೊತ್ತು ಮಹಾರಾಷ್ಟ್ರಕ್ಕೆ ತೆರಳಿದ ’ಆಕ್ಸಿಜನ್ ಎಕ್ಸ್ಪ್ರೆಸ್’</strong></a></p>.<p>ಆಮ್ಲಜನಕದ ಕೊರತೆ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲು ನಿರಾಕರಿಸುತ್ತಿರುವುದರಿಂದ ದೇಶದ ಪ್ರಮುಖ ಆಮ್ಲಜನಕ ಸರಬರಾಜುದಾರರ ಜೊತೆಯೂ ಪ್ರಧಾನಿ, ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/karnataka-news/why-is-there-so-much-demand-for-antiviral-drug-remdesivir-injections-here-is-the-information-you-824825.html"><strong>ರೆಮ್ಡಿಸಿವಿರ್ ಚುಚ್ಚುಮದ್ದಿಗೆ ಯಾಕಿಷ್ಟು ಬೇಡಿಕೆ? ಇಲ್ಲಿದೆ ತಿಳಿಯಬೇಕಾದ ಮಾಹಿತಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>