ಬೆಂಗಳೂರಿನ ಇನ್ನೊಬ್ಬ ವಿದ್ಯಾರ್ಥಿ ನಂದನ್ ಹೆಗಡೆ, ‘12ನೇತರಗತಿ ಪರೀಕ್ಷೆ ರದ್ದು ಮಾಡಿರುವುದು ಸ್ವಾಗತಾರ್ಹ ಕ್ರಮ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಇದೊಂದೇ ಕೊನೆಯ ಪರೀಕ್ಷೆ ಅಲ್ಲ. ಇನ್ನೂ ಹಲವಾರು ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಆದರೆ, ಆರೋಗ್ಯವೇ ಮುಖ್ಯ’ ಎಂದು ಹೇಳಿದರು. ಕೆಲವು ಪೋಷಕರು ಕಾಲೇಜು ಪ್ರವೇಶದ ಬಗ್ಗೆಯೂ ಸಭೆಯಲ್ಲಿ ವಿವರಿಸಿದರು.