<p><strong>ವಾರಾಣಸಿ:</strong> ವಾರಾಣಸಿಯಲ್ಲಿ ₹2,183 ಕೋಟಿ ವೆಚ್ಚದ 52 ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೆರವೇರಿಸಿದ್ದಾರೆ.</p><p>ವಾರಾಣಸಿ ಸಮೀಪದ ಸೇವಾಪುರಿ ಬ್ಲಾಕ್ನಲ್ಲಿರುವ ಬನೌಲಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p><p>‘ವಾರಾಣಸಿಯ ಎಲ್ಲಾ ಕುಟುಂಬಗಳಿಗೂ ನನ್ನ ನಮಸ್ಕಾರಗಳು..’ ಎಂದು ಪ್ರಧಾನಿ ಮೋದಿ ಅವರು ಭಾಷಣ ಆರಂಭಿಸಿದ್ದಾರೆ. </p><p>ರಸ್ತೆ ನಿರ್ಮಾಣ, ಆರೋಗ್ಯ, ಶಿಕ್ಷಣ, ಕ್ರೀಡೆ, ಪ್ರವಾಸೋದ್ಯಮ ಹಾಗೂ ನಗರಾಭಿವೃದ್ದಿ ಸೇರಿದಂತೆ 52 ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.</p><p>ಇದೇ ವೇಳೆ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ₹20,500 ಕೋಟಿ ವೆಚ್ಚದಲ್ಲಿ ದೇಶದಾದ್ಯಂತವಿರುವ 9.70 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಪಿಎಂ–ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತನ್ನು ಪಾವತಿಸಲಾಯಿತು. </p><p>ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಡಿಸಿಎಂ ಕೇಶವ್ ಪ್ರಸಾದ್, ಬ್ರಜೇಶ್ ಪಾಠಕ್, ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು. </p><p>ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇದುವರೆಗೂ ವಾರಾಣಸಿ ಕ್ಷೇತ್ರಕ್ಕೆ 51 ಸಲ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ಕಾಶಿ ಘಟಕದ ಮುಖ್ಯಸ್ಥ ದಿಲೀಪ್ ಪಾಟೀಲ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ವಾರಾಣಸಿಯಲ್ಲಿ ₹2,183 ಕೋಟಿ ವೆಚ್ಚದ 52 ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೆರವೇರಿಸಿದ್ದಾರೆ.</p><p>ವಾರಾಣಸಿ ಸಮೀಪದ ಸೇವಾಪುರಿ ಬ್ಲಾಕ್ನಲ್ಲಿರುವ ಬನೌಲಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p><p>‘ವಾರಾಣಸಿಯ ಎಲ್ಲಾ ಕುಟುಂಬಗಳಿಗೂ ನನ್ನ ನಮಸ್ಕಾರಗಳು..’ ಎಂದು ಪ್ರಧಾನಿ ಮೋದಿ ಅವರು ಭಾಷಣ ಆರಂಭಿಸಿದ್ದಾರೆ. </p><p>ರಸ್ತೆ ನಿರ್ಮಾಣ, ಆರೋಗ್ಯ, ಶಿಕ್ಷಣ, ಕ್ರೀಡೆ, ಪ್ರವಾಸೋದ್ಯಮ ಹಾಗೂ ನಗರಾಭಿವೃದ್ದಿ ಸೇರಿದಂತೆ 52 ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.</p><p>ಇದೇ ವೇಳೆ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ₹20,500 ಕೋಟಿ ವೆಚ್ಚದಲ್ಲಿ ದೇಶದಾದ್ಯಂತವಿರುವ 9.70 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಪಿಎಂ–ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತನ್ನು ಪಾವತಿಸಲಾಯಿತು. </p><p>ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಡಿಸಿಎಂ ಕೇಶವ್ ಪ್ರಸಾದ್, ಬ್ರಜೇಶ್ ಪಾಠಕ್, ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು. </p><p>ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇದುವರೆಗೂ ವಾರಾಣಸಿ ಕ್ಷೇತ್ರಕ್ಕೆ 51 ಸಲ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ಕಾಶಿ ಘಟಕದ ಮುಖ್ಯಸ್ಥ ದಿಲೀಪ್ ಪಾಟೀಲ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>