ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕೆ ನೆರೆಯ ಭೂತಾನ್ ದೇಶಕ್ಕೆ ಇಂದು ನವದೆಹಲಿಯಿಂದ ತೆರಳಿದರು.
ಶನಿವಾರ ಅವರು ಭಾರತಕ್ಕೆ ವಾಪಸ್ ಆಗಲಿದ್ದಾರೆ.
ಭಾರತ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ‘ನೆರೆಹೊರೆಯವರು ಮೊದಲು ನೀತಿ’ಯ ಭಾಗವಾಗಿ ಪ್ರಧಾನಿಯವರು ಈ ಪ್ರವಾಸ ಕೈಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪ್ರಧಾನಿ ಗುರುವಾರವೇ ಭೂತಾನ್ಗೆ ತೆರಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯ ಕಾರಣಗಳಿಂದ ಮುಂದೂಡಿಕೆ ಆಗಿತ್ತು.