<p><strong>ನವದೆಹಲಿ:</strong> ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ಹುದ್ದೆಗೆ ಅಭ್ಯರ್ಥಿಗಳನ್ನು ಆರಿಸಿ, ಶಿಫಾರಸು ಮಾಡಲು ಪ್ರಧಾನಿ ಮೋದಿ ನೇತೃತ್ವದ ಸಮಿತಿಯು ಡಿಸೆಂಬರ್ 10ರಂದು ಸಭೆ ನಡೆಸಲಿದೆ.</p>.<p>ಕೇಂದ್ರ ಮಾಹಿತಿ ಆಯೋಗ ಹಾಗೂ ರಾಜ್ಯ ಮಾಹಿತಿ ಆಯೋಗದಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ನಡೆಸಿದೆ.</p>.<p>ಈ ವೇಳೆ ಕೇಂದ್ರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ‘ಡಿ.10ಕ್ಕೆ ಸಭೆ ನಿಗದಿಪಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಮಿತಿಯ ಸದಸ್ಯರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.</p>.<p>ನಟರಾಜ್ ಅವರ ಅರಿಕೆಯನ್ನು ಪರಿಗಣಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ. ಇದೇ ವೇಳೆ ರಾಜ್ಯ ಮಾಹಿತಿ ಆಯೋಗಗಳಲ್ಲಿರುವ ಸಿಬ್ಬಂದಿಯ ಸಂಖ್ಯೆ, ಖಾಲಿ ಉಳಿದಿರುವ ಹುದ್ದೆಗಳು ಮತ್ತು ಆಯೋಗದ ಎದುರು ಬಗೆಹರಿಯದೇ ಉಳಿದಿರುವ ಪ್ರಕರಣಗಳ ಸಂಖ್ಯೆಯ ಬಗ್ಗೆ ಮಾಹಿತಿ ಸಲ್ಲಿಸುವಂತೆ ರಾಜ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.</p>.<p>ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಮಾಹಿತಿ ಆಯೋಗದ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿಗೊಳಿಸಿ, ಪರಿಪೂರ್ಣವಾಗಿ ಕಾರ್ಯನಿರ್ವಹಿಸುತ್ತಿರುವುದನ್ನೂ ನ್ಯಾಯಪೀಠ ಗಮನಿಸಿದೆ.</p>.<p>ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 12(3)ರ ಅನ್ವಯ ಪ್ರಧಾನಿ ನೇತೃತ್ವದ ಸಮಿತಿಯು ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ಆಯ್ಕೆ ಮತ್ತು ಶಿಫಾರಸುಗಳನ್ನು ಮಾಡಬೇಕಿದೆ. ಈ ಸಮಿತಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಪ್ರಧಾನಿ ಅವರಿಂದ ನಾಮನಿರ್ದೇಶನಗೊಂಡಿರುವ ಕೇಂದ್ರ ಸಚಿವರೂ ಇರಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ಹುದ್ದೆಗೆ ಅಭ್ಯರ್ಥಿಗಳನ್ನು ಆರಿಸಿ, ಶಿಫಾರಸು ಮಾಡಲು ಪ್ರಧಾನಿ ಮೋದಿ ನೇತೃತ್ವದ ಸಮಿತಿಯು ಡಿಸೆಂಬರ್ 10ರಂದು ಸಭೆ ನಡೆಸಲಿದೆ.</p>.<p>ಕೇಂದ್ರ ಮಾಹಿತಿ ಆಯೋಗ ಹಾಗೂ ರಾಜ್ಯ ಮಾಹಿತಿ ಆಯೋಗದಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ನಡೆಸಿದೆ.</p>.<p>ಈ ವೇಳೆ ಕೇಂದ್ರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ‘ಡಿ.10ಕ್ಕೆ ಸಭೆ ನಿಗದಿಪಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಮಿತಿಯ ಸದಸ್ಯರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.</p>.<p>ನಟರಾಜ್ ಅವರ ಅರಿಕೆಯನ್ನು ಪರಿಗಣಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ. ಇದೇ ವೇಳೆ ರಾಜ್ಯ ಮಾಹಿತಿ ಆಯೋಗಗಳಲ್ಲಿರುವ ಸಿಬ್ಬಂದಿಯ ಸಂಖ್ಯೆ, ಖಾಲಿ ಉಳಿದಿರುವ ಹುದ್ದೆಗಳು ಮತ್ತು ಆಯೋಗದ ಎದುರು ಬಗೆಹರಿಯದೇ ಉಳಿದಿರುವ ಪ್ರಕರಣಗಳ ಸಂಖ್ಯೆಯ ಬಗ್ಗೆ ಮಾಹಿತಿ ಸಲ್ಲಿಸುವಂತೆ ರಾಜ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.</p>.<p>ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಮಾಹಿತಿ ಆಯೋಗದ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿಗೊಳಿಸಿ, ಪರಿಪೂರ್ಣವಾಗಿ ಕಾರ್ಯನಿರ್ವಹಿಸುತ್ತಿರುವುದನ್ನೂ ನ್ಯಾಯಪೀಠ ಗಮನಿಸಿದೆ.</p>.<p>ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 12(3)ರ ಅನ್ವಯ ಪ್ರಧಾನಿ ನೇತೃತ್ವದ ಸಮಿತಿಯು ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ಆಯ್ಕೆ ಮತ್ತು ಶಿಫಾರಸುಗಳನ್ನು ಮಾಡಬೇಕಿದೆ. ಈ ಸಮಿತಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಪ್ರಧಾನಿ ಅವರಿಂದ ನಾಮನಿರ್ದೇಶನಗೊಂಡಿರುವ ಕೇಂದ್ರ ಸಚಿವರೂ ಇರಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>