<p><strong>ಇಂಫಾಲ/ ಚುರಾಚಂದಾಪುರ:</strong> ಜನಾಂಗೀಯ ಹಿಂಸಾಚಾರದಿಂದಾಗಿ ಸ್ಥಳಾಂತರಗೊಂಡು ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಜನರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂವಾದ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇಂಫಾಲದ ಐತಿಹಾಸಿಕ ಕಾಂಗ್ಲಾ ಕೋಟೆ ಸಂಕೀರ್ಣದಲ್ಲಿ ನೆಲೆಸಿರುವ ಕುಟುಂಬಗಳ ಕಳವಳಗಳನ್ನು ಮೋದಿ ಆಲಿಸಿದರು. ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲು ಕೇಂದ್ರದ ಬದ್ಧತೆಯ ಬಗ್ಗೆ ಅವರಿಗೆ ಭರವಸೆ ನೀಡಿದರು ಎಂದು ಅವರು ಹೇಳಿದ್ದಾರೆ.</p>.<p>ಇದಕ್ಕೂ ಮುನ್ನ ಪ್ರಧಾನಿ ಅವರು ಚುರಾಚಂದಾಪುರದ ಶಾಂತಿ ಮೈದಾನದಲ್ಲಿ ನಿರಾಶ್ರಿತರೊಂದಿಗೆ ಸಂವಾದ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಸಂಘರ್ಷ ಪೀಡಿತ ಮಣಿಪುರಕ್ಕೆ ಮೋದಿ ಭೇಟಿ: ₹7,300 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ.<p>ಜನಾಂಗೀಯ ಹಿಂಸಾಚಾರದಿಂದಾಗಿ ಸುಮಾರು 60,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಅವರಲ್ಲಿ , ಕುಕಿ ಸಮುದಾಯದ ಸುಮಾರು 40,000 ಹಾಗೂ ಮೈತೇಯಿ ಸಮುದಾಯದ 20,000 ಮಂದಿ ಸೇರಿದ್ದಾರೆ. ಅನೇಕರು ಹೊರ ರಾಜ್ಯಗಳಿಗೆ ಸ್ಥಳಾಂತರಗೊಂಡಿದ್ದಾರೆ. ಹೆಚ್ಚಿನವರು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.</p>.<p>2023ರ ಮೇ ನಲ್ಲಿ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಘಟನೆಯಲ್ಲಿ 260ಕ್ಕೂ ಹೆಚ್ಚು ಜನ ಮೃತಪಟ್ಟು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.</p>.ಮಣಿಪುರದಲ್ಲಿ ಮೋದಿ.. ರಾಜ್ಯಪಾಲರಿಂದ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ/ ಚುರಾಚಂದಾಪುರ:</strong> ಜನಾಂಗೀಯ ಹಿಂಸಾಚಾರದಿಂದಾಗಿ ಸ್ಥಳಾಂತರಗೊಂಡು ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಜನರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂವಾದ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇಂಫಾಲದ ಐತಿಹಾಸಿಕ ಕಾಂಗ್ಲಾ ಕೋಟೆ ಸಂಕೀರ್ಣದಲ್ಲಿ ನೆಲೆಸಿರುವ ಕುಟುಂಬಗಳ ಕಳವಳಗಳನ್ನು ಮೋದಿ ಆಲಿಸಿದರು. ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲು ಕೇಂದ್ರದ ಬದ್ಧತೆಯ ಬಗ್ಗೆ ಅವರಿಗೆ ಭರವಸೆ ನೀಡಿದರು ಎಂದು ಅವರು ಹೇಳಿದ್ದಾರೆ.</p>.<p>ಇದಕ್ಕೂ ಮುನ್ನ ಪ್ರಧಾನಿ ಅವರು ಚುರಾಚಂದಾಪುರದ ಶಾಂತಿ ಮೈದಾನದಲ್ಲಿ ನಿರಾಶ್ರಿತರೊಂದಿಗೆ ಸಂವಾದ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಸಂಘರ್ಷ ಪೀಡಿತ ಮಣಿಪುರಕ್ಕೆ ಮೋದಿ ಭೇಟಿ: ₹7,300 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ.<p>ಜನಾಂಗೀಯ ಹಿಂಸಾಚಾರದಿಂದಾಗಿ ಸುಮಾರು 60,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಅವರಲ್ಲಿ , ಕುಕಿ ಸಮುದಾಯದ ಸುಮಾರು 40,000 ಹಾಗೂ ಮೈತೇಯಿ ಸಮುದಾಯದ 20,000 ಮಂದಿ ಸೇರಿದ್ದಾರೆ. ಅನೇಕರು ಹೊರ ರಾಜ್ಯಗಳಿಗೆ ಸ್ಥಳಾಂತರಗೊಂಡಿದ್ದಾರೆ. ಹೆಚ್ಚಿನವರು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.</p>.<p>2023ರ ಮೇ ನಲ್ಲಿ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಘಟನೆಯಲ್ಲಿ 260ಕ್ಕೂ ಹೆಚ್ಚು ಜನ ಮೃತಪಟ್ಟು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.</p>.ಮಣಿಪುರದಲ್ಲಿ ಮೋದಿ.. ರಾಜ್ಯಪಾಲರಿಂದ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>