ದೇವಸ್ಥಾನಕ್ಕೆ ಹೊರಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮೋದಿ ಅವರು,‘ಕೋವಿಡ್–19ನಿಂದ ಮನುಕುಲಕ್ಕೆ ಕಾಡುತ್ತಿರುವ ಕೋವಿಡ್–19 ಸೋಂಕನ್ನು ನಿರ್ಮೂಲನೆ ಮಾಡುವಂತೆ ದೇವಿಯಲ್ಲಿ ಪ್ರಾರ್ಥಿಸಿದ್ಧೇನೆ. ಬಾಂಗ್ಲಾದೇಶ ಮತ್ತು ಅದರ ಗಡಿ ಭಾಗದಲ್ಲಿರುವ ಪ್ರದೇಶಗಳಿಂದ ಹಲವಾರು ಭಕ್ತರು ‘ಮಾ ಕಾಳಿ ಮೇಳ’ಕ್ಕಾಗಿ ದೇವಸ್ಥಾನಕ್ಕೆ ಆಗಮಿಸುತ್ತಾರೆ. ದೊಡ್ಡ ಪ್ರಮಾಣದಲ್ಲಿ ಜನರು ಸೇರಲು ಸಭಾಂಗಣ ಇದ್ದರೆ ಉತ್ತಮವಾಗಿರುತ್ತದೆ. ಹಾಗಾಗಿ ಭಾರತ ಈ ಕಾಳಿ ದೇವಸ್ಥಾನಕ್ಕೆ ಸಭಾಂಗಣವನ್ನು ನಿರ್ಮಿಸಿ ಕೊಡಲಿದೆ’ ಎಂದರು.