ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ಪುಣ್ಯತಿಥಿ: ರಾಷ್ಟ್ರಪತಿ ದ್ರೌಪದಿ, ಮೋದಿ ಸೇರಿ ಗಣ್ಯರಿಂದ ಗೌರವ ಸಲ್ಲಿಕೆ

Published 16 ಆಗಸ್ಟ್ 2023, 2:41 IST
Last Updated 16 ಆಗಸ್ಟ್ 2023, 2:41 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಐದನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು (ಬುಧವಾರ) ಗೌರವ ಸಲ್ಲಿಸಿದ್ದಾರೆ.

ಇಂದು ಮುಂಜಾನೆ ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ.

ಇವರೊಂದಿಗೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಗೃಹ ಸಚಿವ ಅಮಿತ್ ಶಾ, ರಾಜನಾಥ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಲವು ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಆಗಸ್ಟ್ 16, 2018ರಂದು ವಿಧಿವಶರಾಗಿದ್ದರು.

1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ, ಬಿಜೆಪಿಯಿಂದ ರಾಷ್ಟ್ರದ ಪ್ರಧಾನ ಮಂತ್ರಿಯಾದ ಮೊದಲ ನಾಯಕ. ಅವರು ಮೂರು ಭಾರಿ ದೇಶದ ಪ್ರಧಾನಿಯಾಗಿದ್ದರು. 1996 ರಲ್ಲಿ ಮತ್ತು 1998 ರಿಂದ 2004 ರ ನಡುವೆ ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ‌ ಸಲ್ಲಿಸಿದ್ದಾರೆ.

ಡಿಸೆಂಬರ್ 25ರ ಅವರ ಅವರ ಜನ್ಮದಿನವನ್ನು ಪಕ್ಷವು 'ಉತ್ತಮ ಆಡಳಿತ ದಿನ' ಎಂದು ಆಚರಿಸುತ್ತದೆ. 2014ರಲ್ಲಿ ಅವರಿಗೆ ಭಾರತ ರತ್ನ ದೊರಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT