<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು. ಚರಣ್ ಸಿಂಗ್ ಅವರು ಬಡವರ ಮತ್ತು ರೈತರ ನಿಜವಾದ ಹಿತೈಷಿ ಎಂದು ಬಣ್ಣಿಸಿದರು.</p><p>ಚರಣ್ ಸಿಂಗ್ ಅವರ ಗೌರವಾರ್ಥ ಪ್ರತಿ ವರ್ಷ ಅವರ ಜನ್ಮ ದಿನವಾದ ಡಿಸೆಂಬರ್ 23 ಅನ್ನು ‘ರಾಷ್ಟ್ರೀಯ ರೈತ ದಿನ’ವನ್ನಾಗಿ ಆಚರಿಸಲಾಗುತ್ತದೆ. </p><p>ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ‘ಚರಣ್ ಸಿಂಗ್ ಅವರ ಸಮರ್ಪಣೆ ಮತ್ತು ಸೇನಾ ಮನೋಭಾವ ಎಲ್ಲರಿಗೂ ಸ್ಫೂರ್ತಿಯಾಗಿದೆ. ರೈತರ ಕಲ್ಯಾಣಕ್ಕಾಗಿ ಅವರ ಕೊಡುಗೆ ಅಪಾರ’ ಎಂದು ಹೇಳಿದರು.</p><p>ಇನ್ನು ರೈತ ದಿನ ಶುಭಾಶಯ ತಿಳಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ಬಡವರು. ವಂಚಿತರು ಮತ್ತು ರೈತರ ಕಲ್ಯಾಣಕ್ಕಾಗಿ ಚರಣ್ ಸಿಂಗ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು’ ಎಂದು ಹೇಳಿದರು.</p><p><strong>ರೈತರ ಚಾಂಪಿಯನ್ ಚರಣ್ ಸಿಂಗ್</strong></p><p>ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನೂರ್ಪುರ್ ಗ್ರಾಮದಲ್ಲಿ ರೈತ ಕುಟುಂಬದ ನೇತ್ರಾ ಕೌರ್ ಮತ್ತು ಚೌಧರಿ ಮೀರ್ ಸಿಂಗ್ ದಂಪತಿಗೆ 1902ರ ಡಿಸೆಂಬರ್ 23ರಂದು ಚರಣ್ ಸಿಂಗ್ ಜನಿಸಿದರು.</p><p>ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ ಅವರು, 1960ರ ದಶಕದಲ್ಲಿ ಕಾಂಗ್ರೆಸ್ ತೊರೆದರು. ಉತ್ತರ ಪ್ರದೇಶದಲ್ಲಿಯೇ ಅಲ್ಲದೆ ಇಡೀ ಉತ್ತರ ಭಾರತದಲ್ಲಿ ಮೊದಲ ಕಾಂಗ್ರೆಸ್ಸೇತರ ಸರ್ಕಾರ ರಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.</p><p>ಜವಾಹರಲಾಲ್ ನೆಹರೂ ಅವರ ಸಮಾಜವಾದಿ ಆರ್ಥಿಕತೆಯನ್ನು ವಿರೋಧಿಸಿದ್ದ ಚರಣ್ ಸಿಂಗ್ ಅವರು, ರೈತರ ಮಾಲೀಕತ್ವದ ಹಕ್ಕುಗಳ ಪ್ರಬಲ ಪ್ರತಿಪಾದಕರಾಗಿದ್ದರು.</p><p>ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಮೋದಿ ಸರ್ಕಾರ ಈ ವರ್ಷ ಅವರಿಗೆ ಭಾರತ ರತ್ನ(ಮರಣೋತ್ತರ) ನೀಡಿ ಗೌರವಿಸಿತ್ತು.</p><p>ಅವರ ಮೊಮ್ಮಗ ಜಯಂತ್ ಸಿಂಗ್ ಅವರು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು. ಚರಣ್ ಸಿಂಗ್ ಅವರು ಬಡವರ ಮತ್ತು ರೈತರ ನಿಜವಾದ ಹಿತೈಷಿ ಎಂದು ಬಣ್ಣಿಸಿದರು.</p><p>ಚರಣ್ ಸಿಂಗ್ ಅವರ ಗೌರವಾರ್ಥ ಪ್ರತಿ ವರ್ಷ ಅವರ ಜನ್ಮ ದಿನವಾದ ಡಿಸೆಂಬರ್ 23 ಅನ್ನು ‘ರಾಷ್ಟ್ರೀಯ ರೈತ ದಿನ’ವನ್ನಾಗಿ ಆಚರಿಸಲಾಗುತ್ತದೆ. </p><p>ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ‘ಚರಣ್ ಸಿಂಗ್ ಅವರ ಸಮರ್ಪಣೆ ಮತ್ತು ಸೇನಾ ಮನೋಭಾವ ಎಲ್ಲರಿಗೂ ಸ್ಫೂರ್ತಿಯಾಗಿದೆ. ರೈತರ ಕಲ್ಯಾಣಕ್ಕಾಗಿ ಅವರ ಕೊಡುಗೆ ಅಪಾರ’ ಎಂದು ಹೇಳಿದರು.</p><p>ಇನ್ನು ರೈತ ದಿನ ಶುಭಾಶಯ ತಿಳಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ಬಡವರು. ವಂಚಿತರು ಮತ್ತು ರೈತರ ಕಲ್ಯಾಣಕ್ಕಾಗಿ ಚರಣ್ ಸಿಂಗ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು’ ಎಂದು ಹೇಳಿದರು.</p><p><strong>ರೈತರ ಚಾಂಪಿಯನ್ ಚರಣ್ ಸಿಂಗ್</strong></p><p>ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನೂರ್ಪುರ್ ಗ್ರಾಮದಲ್ಲಿ ರೈತ ಕುಟುಂಬದ ನೇತ್ರಾ ಕೌರ್ ಮತ್ತು ಚೌಧರಿ ಮೀರ್ ಸಿಂಗ್ ದಂಪತಿಗೆ 1902ರ ಡಿಸೆಂಬರ್ 23ರಂದು ಚರಣ್ ಸಿಂಗ್ ಜನಿಸಿದರು.</p><p>ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ ಅವರು, 1960ರ ದಶಕದಲ್ಲಿ ಕಾಂಗ್ರೆಸ್ ತೊರೆದರು. ಉತ್ತರ ಪ್ರದೇಶದಲ್ಲಿಯೇ ಅಲ್ಲದೆ ಇಡೀ ಉತ್ತರ ಭಾರತದಲ್ಲಿ ಮೊದಲ ಕಾಂಗ್ರೆಸ್ಸೇತರ ಸರ್ಕಾರ ರಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.</p><p>ಜವಾಹರಲಾಲ್ ನೆಹರೂ ಅವರ ಸಮಾಜವಾದಿ ಆರ್ಥಿಕತೆಯನ್ನು ವಿರೋಧಿಸಿದ್ದ ಚರಣ್ ಸಿಂಗ್ ಅವರು, ರೈತರ ಮಾಲೀಕತ್ವದ ಹಕ್ಕುಗಳ ಪ್ರಬಲ ಪ್ರತಿಪಾದಕರಾಗಿದ್ದರು.</p><p>ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಮೋದಿ ಸರ್ಕಾರ ಈ ವರ್ಷ ಅವರಿಗೆ ಭಾರತ ರತ್ನ(ಮರಣೋತ್ತರ) ನೀಡಿ ಗೌರವಿಸಿತ್ತು.</p><p>ಅವರ ಮೊಮ್ಮಗ ಜಯಂತ್ ಸಿಂಗ್ ಅವರು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>