ನವದೆಹಲಿ: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುಣ್ಯ ತಿಥಿ ದಿನವಾದ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಅರ್ಪಿಸಿದ್ದಾರೆ. ವಲ್ಲಭಭಾಯ್ ಪಟೇಲ್ ಅವರು ಪ್ರಬಲ ಮತ್ತುಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ‘ಉಕ್ಕಿನ ಮನುಷ್ಯ’ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.
‘ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ತೋರಿಸಿದ ಹಾದಿಯು ನಮ್ಮ ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ರಕ್ಷಿಸಲು ಸದಾ ಸ್ಫೂರ್ತಿ ನೀಡುತ್ತದೆ’ ಎಂದು ಅವರು ಮಂಗಳವಾರ ಟ್ವೀಟ್ ಮಾಡಿದ್ದಾರೆ.
सशक्त, सुदृढ़ और समृद्ध भारत की नींव रखने वाले लौह पुरुष सरदार वल्लभभाई पटेल को उनकी पुण्यतिथि पर शत-शत नमन। उनके दिखाए मार्ग हमें देश की एकता, अखंडता और संप्रभुता की रक्षा करने के लिए सदा प्रेरित करते रहेंगे।
ಸ್ವಾತಂತ್ರ್ಯ ಹೋರಾಟಗಾರ ವಲ್ಲಭಭಾಯ್ ಪಟೇಲ್ ಅವರು ಭಾರತದ ಮೊದಲ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿದ್ದರು. ಸ್ವಾತಂತ್ರ್ಯದ ಬಳಿಕ ನೂರಾರು ರಾಜ ಸಂಸ್ಥಾನಗಳನ್ನು ಭಾರತದ ಒಕ್ಕೂಟದೊಂದಿಗೆ ಏಕೀಕರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.