<p><strong>ನವದೆಹಲಿ:</strong> ನೊಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ 160ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗೌರವ ನಮನ ಸಲ್ಲಿಸಿದರು.</p>.<p>ಟ್ಯಾಗೋರ್ ಅವರು ಮೇ 7ರಂದು ಜನಿಸಿದರು. ಆದರೆ ಅವರ ಜನ್ಮಸ್ಥಳ ಪಶ್ಚಿಮ ಬಂಗಾಳದ ಸಾಂಪ್ರಾದಾಯಿಕ ಕ್ಯಾಲೆಂಡರ್ಗೆ ಅನುಗುಣವಾಗಿ ಅವರ ಜನ್ಮದಿನವನ್ನು ಈ ವರ್ಷ ಭಾನುವಾರ ಆಚರಿಸಲಾಗುತ್ತಿದೆ.</p>.<p>‘ಈ ಶುಭ ಸಂದರ್ಭದಲ್ಲಿ ನಾನು ರವೀಂದ್ರನಾಥ ಟ್ಯಾಗೋರ್ ಅವರಿಗೆ ತಲೆ ಬಾಗುತ್ತೇನೆ. ಟ್ಯಾಗೋರ್ ಅವರ ಆದರ್ಶಗಳು ನಮಗೆ ಅವರ ಕನಸಿನ ಭಾರತವನ್ನು ನಿರ್ಮಿಸಲು ಶಕ್ತಿ ಮತ್ತು ಸ್ಪೂರ್ತಿಯನ್ನು ನೀಡಲಿ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.</p>.<p>ಇದೇ ದಿನ ಜನಿಸಿದ ಸ್ವಾತಂತ್ರ್ಯ ಹೋರಾಟಗಾರ ಗೋಪಾಲ್ ಕೃಷ್ಣ ಗೋಖಲೆ ಮತ್ತು ರಾಜ ಮಹಾರಾಣಾ ಪ್ರತಾಪ್ ಅವರಿಗೂ ಪ್ರಧಾನಿ ಮೋದಿ ಅವರು ಗೌರವ ಸಲ್ಲಿಸಿದರು.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ‘ಗೋಖಲೆ ಅವರು ತಮ್ಮ ಜೀವನವನ್ನು ದೇಶದ ಸೇವೆಗಾಗಿ ಸಮರ್ಪಿಸಿದರು. ಇದು ದೇಶದ ಜನತೆಗೆ ಸದಾ ಸ್ಪೂರ್ತಿ ನೀಡಲಿದೆ’ ಎಂದು ಹೇಳಿದ್ದಾರೆ.</p>.<p>‘ಮಹಾರಾಣಾ ಪ್ರತಾಪ್ ಅವರು ತಮ್ಮ ಮೌಲ್ಯ, ಧೈರ್ಯ ಮತ್ತು ಯುದ್ಧ ಕೌಶಲಗಳ ಮೂಲಕ ಭಾರತಕ್ಕೆ ಕೀರ್ತಿ ತಂದರು. ಮಾತೃಭೂಮಿಗಾಗಿ ಅವರ ಮಾಡಿದ ತ್ಯಾಗವು ಸದಾ ಸ್ಮರಣೀಯ’ ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೊಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ 160ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗೌರವ ನಮನ ಸಲ್ಲಿಸಿದರು.</p>.<p>ಟ್ಯಾಗೋರ್ ಅವರು ಮೇ 7ರಂದು ಜನಿಸಿದರು. ಆದರೆ ಅವರ ಜನ್ಮಸ್ಥಳ ಪಶ್ಚಿಮ ಬಂಗಾಳದ ಸಾಂಪ್ರಾದಾಯಿಕ ಕ್ಯಾಲೆಂಡರ್ಗೆ ಅನುಗುಣವಾಗಿ ಅವರ ಜನ್ಮದಿನವನ್ನು ಈ ವರ್ಷ ಭಾನುವಾರ ಆಚರಿಸಲಾಗುತ್ತಿದೆ.</p>.<p>‘ಈ ಶುಭ ಸಂದರ್ಭದಲ್ಲಿ ನಾನು ರವೀಂದ್ರನಾಥ ಟ್ಯಾಗೋರ್ ಅವರಿಗೆ ತಲೆ ಬಾಗುತ್ತೇನೆ. ಟ್ಯಾಗೋರ್ ಅವರ ಆದರ್ಶಗಳು ನಮಗೆ ಅವರ ಕನಸಿನ ಭಾರತವನ್ನು ನಿರ್ಮಿಸಲು ಶಕ್ತಿ ಮತ್ತು ಸ್ಪೂರ್ತಿಯನ್ನು ನೀಡಲಿ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.</p>.<p>ಇದೇ ದಿನ ಜನಿಸಿದ ಸ್ವಾತಂತ್ರ್ಯ ಹೋರಾಟಗಾರ ಗೋಪಾಲ್ ಕೃಷ್ಣ ಗೋಖಲೆ ಮತ್ತು ರಾಜ ಮಹಾರಾಣಾ ಪ್ರತಾಪ್ ಅವರಿಗೂ ಪ್ರಧಾನಿ ಮೋದಿ ಅವರು ಗೌರವ ಸಲ್ಲಿಸಿದರು.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ‘ಗೋಖಲೆ ಅವರು ತಮ್ಮ ಜೀವನವನ್ನು ದೇಶದ ಸೇವೆಗಾಗಿ ಸಮರ್ಪಿಸಿದರು. ಇದು ದೇಶದ ಜನತೆಗೆ ಸದಾ ಸ್ಪೂರ್ತಿ ನೀಡಲಿದೆ’ ಎಂದು ಹೇಳಿದ್ದಾರೆ.</p>.<p>‘ಮಹಾರಾಣಾ ಪ್ರತಾಪ್ ಅವರು ತಮ್ಮ ಮೌಲ್ಯ, ಧೈರ್ಯ ಮತ್ತು ಯುದ್ಧ ಕೌಶಲಗಳ ಮೂಲಕ ಭಾರತಕ್ಕೆ ಕೀರ್ತಿ ತಂದರು. ಮಾತೃಭೂಮಿಗಾಗಿ ಅವರ ಮಾಡಿದ ತ್ಯಾಗವು ಸದಾ ಸ್ಮರಣೀಯ’ ಎಂದು ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>