ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಮಿ ವಿವೇಕಾನಂದರ 160ನೇ ಜಯಂತಿಯ ಪ್ರಯುಕ್ತ ಟ್ವೀಟ್ ಮೂಲಕ ಗೌರವ ನಮನ ಸಲ್ಲಿಸಿದರು.
ವಿವೇಕಾನಂದರ ಶ್ರೇಷ್ಠ ಆದರ್ಶಗಳು ಮತ್ತು ಆಲೋಚನೆಗಳು ದೇಶದ ಜನರಿಗೆ ಮಾರ್ಗದರ್ಶನ ನೀಡುತ್ತವೆ. ಅವರ ಜೀವನ, ದೇಶಭಕ್ತಿ, ಆಧ್ಯಾತ್ಮಿಕತೆ ಮತ್ತು ಸಮರ್ಪಣಾ ಮನೋಭಾವ ಯಾವಾಗಲೂ ಯುವ ಜನತೆಗೆ ಸ್ಫೂರ್ತಿ ನೀಡುತ್ತವೆ. ವಿವೇಕಾನಂದರು ತಮ್ಮ ಮೇಲೆ ಹೆಚ್ಚಿನ ಪ್ರಭಾವ ಬೀರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ವಿವೇಕಾನಂದರ ಜನ್ಮದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ’ರಾಷ್ಟ್ರೀಯ ಯುವಜನೋತ್ಸವ’ವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ.