ಮಥುರಾ: ಪ್ರಧಾನಿ ನರೇಂದ್ರ ಮೋದಿ ಅವರು ಮಥುರಾದಲ್ಲಿನ ಶ್ರೀ ಕೃಷ್ಣ ಜನ್ಮಭೂಮಿ ದೇವಾಲಯಕ್ಕೆ ತೆರಳಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು.
ಕೃಷ್ಣನ ಭಕ್ತೆಯಾದ ಮೀರಾಬಾಯಿ ಅವರ 525ನೇ ಜನ್ಮದಿನೋತ್ಸವದ ಹಿನ್ನೆಲೆ ಆಯೋಜಿಸಿರುವ ‘ಮೀರಾಬಾಯಿ ಜನ್ಮೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೋದಿ ಮಥುರಾಕ್ಕೆ ಆಗಮಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮೀರಾಬಾಯಿ ಅವರ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಲಿದ್ದಾರೆ. ನಟಿ, ರಾಜಕಾರಣಿ ಹೇಮಾ ಮಾಲಿನಿ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.