<p><strong>ನವದೆಹಲಿ:</strong> ಭಾರತದಲ್ಲಿ ಸಾಂಪ್ರದಾಯಿಕ ಬೌದ್ಧ ಸಾಹಿತ್ಯ ಮತ್ತು ಧರ್ಮಗ್ರಂಥಗಳಿಗೆ ಮೀಸಲಾಗಿರುವ ಗ್ರಂಥಾಲಯವನ್ನು ಸ್ಥಾಪಿಸುವ ಕುರಿತು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಇದು ಸಂಶೋಧನೆ ಮತ್ತು ಸಂವಾದಕ್ಕೆ ಒಂದು ವೇದಿಕೆಯಾಗಲಿದೆ‘ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>6ನೇ ಇಂಡೊ–ಜಪಾನ್ ಸಂವಾದ್ ಸಮ್ಮೇಳನದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ‘ಇಂಡೊ–ಜಪಾನ್ ವೇದಿಕೆ ಯುವಕರಲ್ಲಿ ಭಗವಾನ್ ಬುದ್ಧನ ವಿಚಾರಗಳು ಮತ್ತು ಆದರ್ಶಗಳನ್ನು ಉತ್ತೇಜಿಸಲು ಮಹತ್ತರ ಕೆಲಸ ಮಾಡಿದೆ' ಎಂದು ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು.</p>.<p>‘ಇಂಥ ಎಲ್ಲಾ ಸಾಂಪ್ರದಾಯಿಕ ಬೌದ್ಧ ಸಾಹಿತ್ಯ ಮತ್ತು ಧರ್ಮಗ್ರಂಥಗಳನ್ನು ಒಳಗೊಂಡಿರುವ ಗ್ರಂಥಾಲಯ ಸ್ಥಾಪಿಸುವುದಾಗಿ ಹೇಳಿದ ಮೋದಿಯವರು, ‘ಭಾರತದಲ್ಲಿ ಈ ರೀತಿಯ ಸೌಲಭ್ಯಗಳನ್ನು ಸೃಷ್ಟಿಸಲು ನಾವು ಸಂತೋಷಪಡುತ್ತೇವೆ ಮತ್ತು ಅದಕ್ಕೆ ಸೂಕ್ತವಾದ ಸಂಪನ್ಮೂಲಗಳನ್ನು ಒದಗಿಸುತ್ತೇವೆ‘ ಎಂದು ಭರವಸೆ ನೀಡಿದರು.</p>.<p>‘ಪ್ರಸ್ತಾಪಿತ ಗ್ರಂಥಾಲಯಕ್ಕೆ ಬೇಕಾದ ಬೌದ್ಧ ಸಾಹಿತ್ಯದ ಡಿಜಿಟಲ್ ಪ್ರತಿಗಳನ್ನು ವಿವಿಧ ದೇಶಗಳಿಂದ ಸಂಗ್ರಹಿಸಿ, ಭಾಷಾಂತರಿಸುವ ಗುರಿ ಇದೆ. ಇವುಗಳನ್ನು ಬೌದ್ಧ ಧರ್ಮದ ಎಲ್ಲಾ ಬಿಕ್ಕುಗಳು ಮತ್ತು ವಿದ್ವಾಂಸರಿಗೆ ಉಚಿತವಾಗಿ ಸಿಗುವಂತೆ ಮಾಡಲಾಗುತ್ತದೆ‘ ಎಂದು ಅವರು ಹೇಳಿದರು.</p>.<p>‘ಗ್ರಂಥಾಲಯವು ಸಾಹಿತ್ಯ ಸಂಗ್ರಹದ ಕೋಣೆಯಾಗದೇ, ಸಂಶೋಧನೆ ಮತ್ತು ಸಂಭಾಷಣೆಗೆ ಒಂದು ವೇದಿಕೆಯಾಗಲಿದೆ. ಮನುಷ್ಯರ ನಡುವೆ, ಸಮಾಜಗಳ ನಡುವೆ ಮತ್ತು ಮನುಷ್ಯ ಮತ್ತು ಪ್ರಕೃತಿಯ ನಡುವೆ 'ನಿಜವಾದ' ಸಂವಾದ ನಡೆಸಲು ಸಹಕಾರಿಯಾಗುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದಲ್ಲಿ ಸಾಂಪ್ರದಾಯಿಕ ಬೌದ್ಧ ಸಾಹಿತ್ಯ ಮತ್ತು ಧರ್ಮಗ್ರಂಥಗಳಿಗೆ ಮೀಸಲಾಗಿರುವ ಗ್ರಂಥಾಲಯವನ್ನು ಸ್ಥಾಪಿಸುವ ಕುರಿತು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಇದು ಸಂಶೋಧನೆ ಮತ್ತು ಸಂವಾದಕ್ಕೆ ಒಂದು ವೇದಿಕೆಯಾಗಲಿದೆ‘ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>6ನೇ ಇಂಡೊ–ಜಪಾನ್ ಸಂವಾದ್ ಸಮ್ಮೇಳನದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ‘ಇಂಡೊ–ಜಪಾನ್ ವೇದಿಕೆ ಯುವಕರಲ್ಲಿ ಭಗವಾನ್ ಬುದ್ಧನ ವಿಚಾರಗಳು ಮತ್ತು ಆದರ್ಶಗಳನ್ನು ಉತ್ತೇಜಿಸಲು ಮಹತ್ತರ ಕೆಲಸ ಮಾಡಿದೆ' ಎಂದು ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು.</p>.<p>‘ಇಂಥ ಎಲ್ಲಾ ಸಾಂಪ್ರದಾಯಿಕ ಬೌದ್ಧ ಸಾಹಿತ್ಯ ಮತ್ತು ಧರ್ಮಗ್ರಂಥಗಳನ್ನು ಒಳಗೊಂಡಿರುವ ಗ್ರಂಥಾಲಯ ಸ್ಥಾಪಿಸುವುದಾಗಿ ಹೇಳಿದ ಮೋದಿಯವರು, ‘ಭಾರತದಲ್ಲಿ ಈ ರೀತಿಯ ಸೌಲಭ್ಯಗಳನ್ನು ಸೃಷ್ಟಿಸಲು ನಾವು ಸಂತೋಷಪಡುತ್ತೇವೆ ಮತ್ತು ಅದಕ್ಕೆ ಸೂಕ್ತವಾದ ಸಂಪನ್ಮೂಲಗಳನ್ನು ಒದಗಿಸುತ್ತೇವೆ‘ ಎಂದು ಭರವಸೆ ನೀಡಿದರು.</p>.<p>‘ಪ್ರಸ್ತಾಪಿತ ಗ್ರಂಥಾಲಯಕ್ಕೆ ಬೇಕಾದ ಬೌದ್ಧ ಸಾಹಿತ್ಯದ ಡಿಜಿಟಲ್ ಪ್ರತಿಗಳನ್ನು ವಿವಿಧ ದೇಶಗಳಿಂದ ಸಂಗ್ರಹಿಸಿ, ಭಾಷಾಂತರಿಸುವ ಗುರಿ ಇದೆ. ಇವುಗಳನ್ನು ಬೌದ್ಧ ಧರ್ಮದ ಎಲ್ಲಾ ಬಿಕ್ಕುಗಳು ಮತ್ತು ವಿದ್ವಾಂಸರಿಗೆ ಉಚಿತವಾಗಿ ಸಿಗುವಂತೆ ಮಾಡಲಾಗುತ್ತದೆ‘ ಎಂದು ಅವರು ಹೇಳಿದರು.</p>.<p>‘ಗ್ರಂಥಾಲಯವು ಸಾಹಿತ್ಯ ಸಂಗ್ರಹದ ಕೋಣೆಯಾಗದೇ, ಸಂಶೋಧನೆ ಮತ್ತು ಸಂಭಾಷಣೆಗೆ ಒಂದು ವೇದಿಕೆಯಾಗಲಿದೆ. ಮನುಷ್ಯರ ನಡುವೆ, ಸಮಾಜಗಳ ನಡುವೆ ಮತ್ತು ಮನುಷ್ಯ ಮತ್ತು ಪ್ರಕೃತಿಯ ನಡುವೆ 'ನಿಜವಾದ' ಸಂವಾದ ನಡೆಸಲು ಸಹಕಾರಿಯಾಗುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>