<p><strong>ನವದೆಹಲಿ:</strong> ಇಂಧನ ಚಾಲಿತ ವಾಹನಗಳ ಬಳಕೆಯನ್ನು ಕಡಿಮೆ ಮಾಡುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇದರ ಮೊದಲ ನಡೆಯಂತೆ ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಿದ್ದಾರೆ. </p><p>ಪ್ರಧಾನಿ ಮಂತ್ರಿ ಅವರ ಇತ್ತೀಚಿನ ದೇಶೀಯ ಭೇಟಿಗಳಲ್ಲಿ ಬೆಂಗಾವಲು ಪಡೆಯ ವಾಹನಗಳನ್ನು ಕಡಿತಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. </p><p>ಈ ಸಂದರ್ಭದಲ್ಲಿ ಎಸ್ಪಿಜಿ ಶಿಷ್ಟಾಚಾರದ ಪ್ರಕಾರ ಅಗತ್ಯ ಭದ್ರತೆಯನ್ನು ಕಾಯ್ದುಕೊಳ್ಳಲಾಗಿದೆ. </p><p>ಹೈದರಾಬಾದ್ನಲ್ಲಿ ಇಂಧನ ಉಳಿತಾಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಭಾಷಣ ಮಾಡಿದ ಬೆನ್ನಲ್ಲೇ ಗುಜರಾತ್ ಹಾಗೂ ಅಸ್ಸಾಂ ಭೇಟಿಯ ವೇಳೆ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. </p><p>ತಮ್ಮ ಬೆಂಗಾವಲು ಪಡೆಯಲ್ಲಿ ಸಾಧ್ಯವಾದಷ್ಟು ವಿದ್ಯುತ್ ಚಾಲಿತ ವಾಹನಗಳನ್ನು ಬಳಸಿಕೊಳ್ಳವಂತೆಯೂ ಪ್ರಧಾನಿ ಸೂಚಿಸಿದ್ದಾರೆ. </p><p>ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಜಾಗತಿಕ ತೈಲ ಪೂರೈಕೆ ಸರಪಳಿಗೆ ಅಡಚಣೆಯಾಗಿದೆ. ಇದರಿಂದಾಗಿ ಇಂಧನ ಬಿಕ್ಕಟ್ಟು ಎದುರಾಗಿದೆ. </p><p>ಪೆಟ್ರೋಲ್ ಹಾಗೂ ಡೀಸೆಲ್ ಬಳಕೆ ಕಡಿಮೆ ಮಾಡುವುದು, ನಗರಗಳಲ್ಲಿ ಮೆಟ್ರೊ ರೈಲು ಸೇವೆಯ ಬಳಕೆ, ಕಾರು ಪೂಲಿಂಗ್, ಎಲೆಕ್ಟ್ರಿಕ್ ವಾಹನಗಳ ಬಳಕೆ, ವಿದೇಶಿ ವಿನಿಮಯ ಉಳಿತಾಯಕ್ಕೆ ಚಿನ್ನ ಖರೀದಿಸಬಾರದು, ಮನೆಯಿಂದಲೇ ಕೆಲಸ ಮುಂತಾದ ಸಲಹೆಗಳನ್ನು ಪ್ರಧಾನಿ ಮೋದಿ ನೀಡಿದ್ದರು. </p>.ಸರಳ ಜೀವನಕ್ಕೆ ಮೋದಿ ಮನವಿ: ಸಾಧಕ–ಬಾಧಕಗಳೇನು ? ಎಲ್ಲವೂ ಜಾರಿಯಾಗುತ್ತ?.ಇಂಧನ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ: ಮೋದಿ ಉಳಿತಾಯ ಮಂತ್ರದ ಸುತ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಧನ ಚಾಲಿತ ವಾಹನಗಳ ಬಳಕೆಯನ್ನು ಕಡಿಮೆ ಮಾಡುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇದರ ಮೊದಲ ನಡೆಯಂತೆ ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಿದ್ದಾರೆ. </p><p>ಪ್ರಧಾನಿ ಮಂತ್ರಿ ಅವರ ಇತ್ತೀಚಿನ ದೇಶೀಯ ಭೇಟಿಗಳಲ್ಲಿ ಬೆಂಗಾವಲು ಪಡೆಯ ವಾಹನಗಳನ್ನು ಕಡಿತಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. </p><p>ಈ ಸಂದರ್ಭದಲ್ಲಿ ಎಸ್ಪಿಜಿ ಶಿಷ್ಟಾಚಾರದ ಪ್ರಕಾರ ಅಗತ್ಯ ಭದ್ರತೆಯನ್ನು ಕಾಯ್ದುಕೊಳ್ಳಲಾಗಿದೆ. </p><p>ಹೈದರಾಬಾದ್ನಲ್ಲಿ ಇಂಧನ ಉಳಿತಾಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಭಾಷಣ ಮಾಡಿದ ಬೆನ್ನಲ್ಲೇ ಗುಜರಾತ್ ಹಾಗೂ ಅಸ್ಸಾಂ ಭೇಟಿಯ ವೇಳೆ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. </p><p>ತಮ್ಮ ಬೆಂಗಾವಲು ಪಡೆಯಲ್ಲಿ ಸಾಧ್ಯವಾದಷ್ಟು ವಿದ್ಯುತ್ ಚಾಲಿತ ವಾಹನಗಳನ್ನು ಬಳಸಿಕೊಳ್ಳವಂತೆಯೂ ಪ್ರಧಾನಿ ಸೂಚಿಸಿದ್ದಾರೆ. </p><p>ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಜಾಗತಿಕ ತೈಲ ಪೂರೈಕೆ ಸರಪಳಿಗೆ ಅಡಚಣೆಯಾಗಿದೆ. ಇದರಿಂದಾಗಿ ಇಂಧನ ಬಿಕ್ಕಟ್ಟು ಎದುರಾಗಿದೆ. </p><p>ಪೆಟ್ರೋಲ್ ಹಾಗೂ ಡೀಸೆಲ್ ಬಳಕೆ ಕಡಿಮೆ ಮಾಡುವುದು, ನಗರಗಳಲ್ಲಿ ಮೆಟ್ರೊ ರೈಲು ಸೇವೆಯ ಬಳಕೆ, ಕಾರು ಪೂಲಿಂಗ್, ಎಲೆಕ್ಟ್ರಿಕ್ ವಾಹನಗಳ ಬಳಕೆ, ವಿದೇಶಿ ವಿನಿಮಯ ಉಳಿತಾಯಕ್ಕೆ ಚಿನ್ನ ಖರೀದಿಸಬಾರದು, ಮನೆಯಿಂದಲೇ ಕೆಲಸ ಮುಂತಾದ ಸಲಹೆಗಳನ್ನು ಪ್ರಧಾನಿ ಮೋದಿ ನೀಡಿದ್ದರು. </p>.ಸರಳ ಜೀವನಕ್ಕೆ ಮೋದಿ ಮನವಿ: ಸಾಧಕ–ಬಾಧಕಗಳೇನು ? ಎಲ್ಲವೂ ಜಾರಿಯಾಗುತ್ತ?.ಇಂಧನ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ: ಮೋದಿ ಉಳಿತಾಯ ಮಂತ್ರದ ಸುತ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>