<p><strong>ನವದೆಹಲಿ: </strong>ಭದ್ರತೆಗೆ ಸಂಬಂಧಿಸಿ ದೇಶದ ಮುಂದಿರುವ ಹೊಸ ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಲು ಮೂರು ಸಶಸ್ತ್ರ ಪಡೆಗಳು ಸಜ್ಜಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.</p>.<p>ಇಲ್ಲಿ ನಡೆದ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಕಮಾಂಡರ್ಗಳ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಸಶಸ್ತ್ರ ಪಡೆಗಳಿಗೆ ಅಗತ್ಯವಿರುವ ಶಸ್ತ್ರಾಸ್ತ್ರಗಳು ಹಾಗೂ ತಂತ್ರಜ್ಞಾನವನ್ನು ಒದಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬುದಾಗಿ ಪ್ರಧಾನಿ ಹೇಳಿದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.</p>.<p>ಇದೇ ವೇಳೆ, ಮೂರು ಪಡೆಗಳ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿದ ಪ್ರಧಾನಿ, ಅವುಗಳ ಸನ್ನದ್ಧತೆಯನ್ನು ಪರಿಶೀಲಿಸಿದರು ಎಂದೂ ಸಚಿವಾಲಯ ತಿಳಿಸಿದೆ.</p>.<p>ಗಡಿಯಾಚೆಗಿನ ಭಯೋತ್ಪಾದನೆ, ಗಡಿಯಲ್ಲಿ ಚೀನಾ ಹಾಗೂ ಪಾಕಿಸ್ತಾನದಿಂದ ಒದಗಿರುವ ಬೆದರಿಕೆಗಳು, ಅಗ್ನಿಪಥ ಯೋಜನೆಯ ಅನುಷ್ಠಾನ, ನೌಕಾಪಡೆಯ ಸಾಮರ್ಥ್ಯ ವೃದ್ಧಿ ಸೇರಿದಂತೆ ಹಲವಾರು ಮಹತ್ವದ ವಿಷಯಗಳು ಕುರಿತು ಸಹ ಚರ್ಚೆ ನಡೆಯಿತು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭದ್ರತೆಗೆ ಸಂಬಂಧಿಸಿ ದೇಶದ ಮುಂದಿರುವ ಹೊಸ ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಲು ಮೂರು ಸಶಸ್ತ್ರ ಪಡೆಗಳು ಸಜ್ಜಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.</p>.<p>ಇಲ್ಲಿ ನಡೆದ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಕಮಾಂಡರ್ಗಳ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಸಶಸ್ತ್ರ ಪಡೆಗಳಿಗೆ ಅಗತ್ಯವಿರುವ ಶಸ್ತ್ರಾಸ್ತ್ರಗಳು ಹಾಗೂ ತಂತ್ರಜ್ಞಾನವನ್ನು ಒದಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬುದಾಗಿ ಪ್ರಧಾನಿ ಹೇಳಿದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.</p>.<p>ಇದೇ ವೇಳೆ, ಮೂರು ಪಡೆಗಳ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿದ ಪ್ರಧಾನಿ, ಅವುಗಳ ಸನ್ನದ್ಧತೆಯನ್ನು ಪರಿಶೀಲಿಸಿದರು ಎಂದೂ ಸಚಿವಾಲಯ ತಿಳಿಸಿದೆ.</p>.<p>ಗಡಿಯಾಚೆಗಿನ ಭಯೋತ್ಪಾದನೆ, ಗಡಿಯಲ್ಲಿ ಚೀನಾ ಹಾಗೂ ಪಾಕಿಸ್ತಾನದಿಂದ ಒದಗಿರುವ ಬೆದರಿಕೆಗಳು, ಅಗ್ನಿಪಥ ಯೋಜನೆಯ ಅನುಷ್ಠಾನ, ನೌಕಾಪಡೆಯ ಸಾಮರ್ಥ್ಯ ವೃದ್ಧಿ ಸೇರಿದಂತೆ ಹಲವಾರು ಮಹತ್ವದ ವಿಷಯಗಳು ಕುರಿತು ಸಹ ಚರ್ಚೆ ನಡೆಯಿತು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>