<p><strong>ರಾಂಚಿ:</strong> ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ– ‘ಆಯುಷ್ಮಾನ್ ಭಾರತ’ವನ್ನು ಬಡವರ ಸೇವೆಗಾಗಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಈ ಯೋಜನೆಗೆ ಭಾನುವಾರ ಚಾಲನೆ ನೀಡಿದ ಅವರು, ವಿಶ್ವದಲ್ಲಿಯೇ ಸರ್ಕಾರವೊಂದು ಜಾರಿಗೆ ತಂದಿರುವ ದೊಡ್ಡ ಆರೋಗ್ಯ ಯೋಜನೆ ಇದಾಗಿದೆ. ಕೆನಡಾ, ಮೆಕ್ಸಿಕೊ, ಅಮೆರಿಕದ ಒಟ್ಟು ಜನಸಂಖ್ಯೆಯಷ್ಟು ಈ ಯೋಜನೆಯ ಫಲಾನುಭವಿಗಳಿದ್ದಾರೆ ಎಂದರು.</p>.<p>ಹಿಂದಿನ ಕಾಂಗ್ರೆಸ್ ಸರ್ಕಾರ ಬಡವರನ್ನು ಸಶಕ್ತರನ್ನಾಗಿ ಮಾಡದೇ ಕೇವಲ ಮತ ಬ್ಯಾಂಕ್ ರಾಜಕೀಯ ಮಾಡುತ್ತಾ ಬಂದಿತ್ತು. ಆದರೆ, ಬಿಜೆಪಿ ಸರ್ಕಾರ ಬಡವರು, ದುರ್ಬಲ ವರ್ಗದವರನ್ನು ಸಶಕ್ತರನ್ನಾಗಿಸಲು ಆದ್ಯತೆ ನೀಡಿದೆ ಎಂದರು.</p>.<p>ಹೃದಯ ರೋಗ, ಯಕೃತ್ ಸಮಸ್ಯೆ, ಮಧುಮೇಹ ಸೇರಿದಂತೆ ಒಟ್ಟು 1,300ಕ್ಕಿಂತ ಹೆಚ್ಚು ಆರೋಗ್ಯ ಸೇವೆಗಳು ಈ ಯೋಜನೆ ವ್ಯಾಪ್ತಿಯಲ್ಲಿ ಸಿಗಲಿವೆ ಎಂದ ಅವರು, ‘ಕೆಲವರು ಇದನ್ನು ಮೋದಿ ಕೇರ್, ಮತ್ತಿತರ ಹೆಸರುಗಳಿಂದ ಕರೆಯುತ್ತಿದ್ದಾರೆ. ಆದರೆ, ಬಡವರ ಸೇವೆಗೆ ಸಿಕ್ಕ ಅಪೂರ್ವ ಅವಕಾಶ ಇದು. ಸಮಾಜದ ಎಲ್ಲರೂ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ’ ಎಂದು ಹೇಳಿದರು.</p>.<p>‘ಬಡವರಿಗೆ ಆರೋಗ್ಯ ಸಮಸ್ಯೆ ಉಂಟಾಗಬಾರದು ಎಂದು ಪ್ರಾರ್ಥಿಸುತ್ತೇನೆ. ಒಂದು ವೇಳೆ ಸಮಸ್ಯೆ ಬಂದರೆ ಅವರಿಗೆ ಈ ಯೋಜನೆಯ ಸೇವೆ ಸಿಗಲಿದೆ. ಉಳ್ಳವರಿಗೆ ಸಿಗುವ ಎಲ್ಲ ಸೌಲಭ್ಯಗಳುದೇಶದ ಬಡಜನರಿಗೂ ದೊರೆಯಬೇಕು’ ಎಂದು ಹೇಳಿದರು.</p>.<p>**</p>.<p>ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ 2,500 ಅತ್ಯಾಧುನಿಕ ಸೌಲಭ್ಯವುಳ್ಳ ಆಸ್ಪತ್ರೆಗಳು ಬರಲಿದ್ದು, ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.<br /><em><strong>–ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ– ‘ಆಯುಷ್ಮಾನ್ ಭಾರತ’ವನ್ನು ಬಡವರ ಸೇವೆಗಾಗಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಈ ಯೋಜನೆಗೆ ಭಾನುವಾರ ಚಾಲನೆ ನೀಡಿದ ಅವರು, ವಿಶ್ವದಲ್ಲಿಯೇ ಸರ್ಕಾರವೊಂದು ಜಾರಿಗೆ ತಂದಿರುವ ದೊಡ್ಡ ಆರೋಗ್ಯ ಯೋಜನೆ ಇದಾಗಿದೆ. ಕೆನಡಾ, ಮೆಕ್ಸಿಕೊ, ಅಮೆರಿಕದ ಒಟ್ಟು ಜನಸಂಖ್ಯೆಯಷ್ಟು ಈ ಯೋಜನೆಯ ಫಲಾನುಭವಿಗಳಿದ್ದಾರೆ ಎಂದರು.</p>.<p>ಹಿಂದಿನ ಕಾಂಗ್ರೆಸ್ ಸರ್ಕಾರ ಬಡವರನ್ನು ಸಶಕ್ತರನ್ನಾಗಿ ಮಾಡದೇ ಕೇವಲ ಮತ ಬ್ಯಾಂಕ್ ರಾಜಕೀಯ ಮಾಡುತ್ತಾ ಬಂದಿತ್ತು. ಆದರೆ, ಬಿಜೆಪಿ ಸರ್ಕಾರ ಬಡವರು, ದುರ್ಬಲ ವರ್ಗದವರನ್ನು ಸಶಕ್ತರನ್ನಾಗಿಸಲು ಆದ್ಯತೆ ನೀಡಿದೆ ಎಂದರು.</p>.<p>ಹೃದಯ ರೋಗ, ಯಕೃತ್ ಸಮಸ್ಯೆ, ಮಧುಮೇಹ ಸೇರಿದಂತೆ ಒಟ್ಟು 1,300ಕ್ಕಿಂತ ಹೆಚ್ಚು ಆರೋಗ್ಯ ಸೇವೆಗಳು ಈ ಯೋಜನೆ ವ್ಯಾಪ್ತಿಯಲ್ಲಿ ಸಿಗಲಿವೆ ಎಂದ ಅವರು, ‘ಕೆಲವರು ಇದನ್ನು ಮೋದಿ ಕೇರ್, ಮತ್ತಿತರ ಹೆಸರುಗಳಿಂದ ಕರೆಯುತ್ತಿದ್ದಾರೆ. ಆದರೆ, ಬಡವರ ಸೇವೆಗೆ ಸಿಕ್ಕ ಅಪೂರ್ವ ಅವಕಾಶ ಇದು. ಸಮಾಜದ ಎಲ್ಲರೂ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ’ ಎಂದು ಹೇಳಿದರು.</p>.<p>‘ಬಡವರಿಗೆ ಆರೋಗ್ಯ ಸಮಸ್ಯೆ ಉಂಟಾಗಬಾರದು ಎಂದು ಪ್ರಾರ್ಥಿಸುತ್ತೇನೆ. ಒಂದು ವೇಳೆ ಸಮಸ್ಯೆ ಬಂದರೆ ಅವರಿಗೆ ಈ ಯೋಜನೆಯ ಸೇವೆ ಸಿಗಲಿದೆ. ಉಳ್ಳವರಿಗೆ ಸಿಗುವ ಎಲ್ಲ ಸೌಲಭ್ಯಗಳುದೇಶದ ಬಡಜನರಿಗೂ ದೊರೆಯಬೇಕು’ ಎಂದು ಹೇಳಿದರು.</p>.<p>**</p>.<p>ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ 2,500 ಅತ್ಯಾಧುನಿಕ ಸೌಲಭ್ಯವುಳ್ಳ ಆಸ್ಪತ್ರೆಗಳು ಬರಲಿದ್ದು, ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.<br /><em><strong>–ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>