ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: PM ಉಜ್ವಲ ಯೋಜನೆ ಫಲಾನುಭವಿ ಮೀರಾ ಕುಟುಂಬಕ್ಕೆ ಉಡುಗೊರೆ ಕಳುಹಿಸಿದ ಮೋದಿ

Published 4 ಜನವರಿ 2024, 10:16 IST
Last Updated 4 ಜನವರಿ 2024, 10:16 IST
ಅಕ್ಷರ ಗಾತ್ರ

ಅಯೋಧ್ಯೆ: ಡಿಸೆಂಬರ್ 30 ರಂದು ಅಯೋಧ್ಯೆಗೆ ತೆರಳಿದ್ದ ವೇಳೆ ಭೇಟಿಯಾಗಿದ್ದ ಉಜ್ವಲ ಯೋಜನೆ ಫಲಾನುಭವಿ ಮೀರಾ ಮಾಂಝಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಮತ್ತು ಉಡುಗೊರೆಗಳನ್ನು ಕಳುಹಿಸಿದ್ದಾರೆ.

ಪ್ರಧಾನಿ ಅವರು ಹೊಸ ವರ್ಷದ ಶುಭಾಶಯದೊಂದಿಗೆ ಉಡುಗೊರೆ ಕಳುಹಿಸಿಕೊಟ್ಟಿದ್ದಾರೆ. ಇದರಿಂದ ತುಂಬಾ ಸಂತೋಷವಾಗಿದೆ ಎಂದು ಮೀರಾ ಅವರು ಪಿಟಿಐನೊಂದಿಗೆ ಖುಷಿ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿಯವರು ತನಗೆ ಮತ್ತು ಇಡೀ ಮಾಂಝಿ ನಗರಕ್ಕೆ ಪತ್ರ ಕಳುಹಿಸಿದ್ದಾರೆ ಎಂದು ಹೇಳಿದರು.

ಉಡುಗೊರೆಯಾಗಿ ಚಹಾ ಲೋಟಗಳು, ಡ್ರಾಯಿಂಗ್‌ ಪುಸ್ತಕ ಮತ್ತು ಬಣ್ಣಗಳು ಸೇರಿದಂತೆ ಹಲವು ವಸ್ತುಗಳು ಹಾಗೂ ಪತ್ರವೊಂದನ್ನು ಕಳುಹಿಸಿದ್ದಾರೆ.

ಪತ್ರದಲ್ಲಿ ಅವರು, ಮೀರಾ ಅವರ ಮನೆಯಲ್ಲಿ ಚಹಾ ಸವಿದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ‘ಅಯೋಧ್ಯೆಯಿಂದ ಬಂದ ನಂತರ ನಾನು ವಿವಿಧ ಟಿವಿ ಚಾನೆಲ್‌ಗಳಲ್ಲಿ ನಿಮ್ಮ ಸಂದರ್ಶನಗಳನ್ನು ನೋಡಿದೆ. ಅನುಭವಗಳನ್ನು ಹಂಚಿಕೊಳ್ಳುವಾಗ ನೀವು ಮತ್ತು ನಿಮ್ಮ ಕುಟುಂಬದ ಸದಸ್ಯರು ತೋರಿದ ನಮ್ರತೆ ಮತ್ತು ವಿಶ್ವಾಸ ಮನಮುಟ್ಟಿದೆ. ನಿಮ್ಮ ಮತ್ತು ಕೋಟ್ಯಂತರ ಭಾರತೀಯರ ಸಂತೋಷವೇ ನನ್ನ ಸಂಪತ್ತು. ಇದು ದೇಶಕ್ಕಾಗಿ ಕೆಲಸ ಮಾಡಲು ನನಗೆ ಹೆಚ್ಚಿನ ಶಕ್ತಿಯನ್ನು ತುಂಬುತ್ತದೆ’ ಎಂದು ಬರೆದಿದ್ದಾರೆ.

‘ಉಜ್ವಲ ಯೋಜನೆಯ ಕೋಟ್ಯಂತರ ಫಲಾನುಭವಿಯಾಗಿ, ನೀವು ನನಗೆ ಕೇವಲ ಸಂಖ್ಯೆ ಮಾತ್ರವಲ್ಲ. ಭಾರತೀಯರ ಕನಸುಗಳ ಈಡೇರಿಕೆಗೆ ನಾನು ಇದನ್ನು ಉದಾಹರಣೆಯಾಗಿ ನೋಡುತ್ತೇನೆ’ ಎಂದೂ ಅವರು ಪತ್ರದಲ್ಲಿ ಬರೆದಿದ್ದಾರೆ.

ಉಜ್ವಲ ಯೋಜನೆಯ ಫಲಾನುಭವಿಗಳ ಸಂಖ್ಯೆ 10 ಕೋಟಿ ದಾಟಿದೆ. ಅಯೋಧ್ಯೆಯ ಮೀರಾ ಅವರು ಈ ಯೋಜನೆ ಪಡೆದುಕೊಂಡಾಗ ಫಲಾನುಭವಿಗಳ ಸಂಖ್ಯೆ 10 ಕೋಟಿ ಮೈಲಿಗಲ್ಲು ತಲುಪಿತ್ತು. 

ಅಚ್ಚರಿ ಎಂದರೆ ಮೋದಿ ಅವರು ಭೇಟಿ ನೀಡಿದ ಬಳಿಕ ಅಧಿಕಾರಿಗಳು ಮೀರಾ ಅವರ ಮನೆಗೆ ತೆರಳಿ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾದ ಆಯುಷ್‌ ಮಾನ್‌ ಕಾರ್ಡ್‌ ಅನ್ನು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT